ಆ.15: ತುಳು ಯಕ್ಷಗಾನ ವೈಭವ

ಉಡುಪಿ: ಉಡುಪಿಯ ಸುಧಾಕರ ಆಚಾರ್ಯರ ಕಲಾರಾಧನೆಯ ತ್ರಿಂಶತಿ ಆಚರಣೆ ಪ್ರಯುಕ್ತ ಸ್ವಾತಂತ್ರ್ಯೋತ್ಸವ ತಾಳಮದ್ದಲೆ -ತುಳು ಯಕ್ಷಗಾನ ವೈಭವ ಕಾರ್ಯಕ್ರಮ ಆ. 15ರಂದು ಉಡುಪಿ ಪಿಪಿಸಿ ಅಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 1.30ಕ್ಕೆ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ಅಂಬೆ ತಾಳ ಮದ್ದಲೆ ಹಾಗೂ ಸಂಜೆ 6ಗಂಟೆಗೆ ‘ತುಳುನಾಡ ಬಲಿಯೇಂದ್ರ’ ತುಳು ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕ ಸುಧಾಕರ ಆಚಾರ್ಯ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಂಜೆ 5.30ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಕಟೀಲಿನ ಅರ್ಚಕ ಹರಿನಾರಾಯಣ ಅಸ್ರಣ್ಣ […]

ಮಕ್ಕಳಿಗೆ ತುಳು ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಿ: ಸುಜಾತ ಶೆಟ್ಟಿ

ಉಡುಪಿ: ನಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಹಿರಿಯರು ಮಕ್ಕಳಿಗೆ ಸರಿಯಾದ ರೀತಿಯಲ್ಲಿ ತಿಳಿಯಪಡಿಸಬೇಕು ಎಂದು ಮೂಡುಬಿದಿರೆ ಮಹಾವೀರ ಕಾಲೇಜಿನ ಉಪನ್ಯಾಸಕಿ ಸುಜಾತ ಶೆಟ್ಟಿ ಪೆರಿಂಜೆ ಹೇಳಿದರು. ಸಿರಿತುಳುವ ಚಾವಡಿ ಒಡಿಪು ವತಿಯಿಂದ ಕಟಪಾಡಿ ಪಲ್ಲಿಗುಡ್ಡೆ ಜೆಸಿ ಸಭಾಭವನದಲ್ಲಿ ಈಚೆಗೆ ನಡೆದ 80ನೇ ಮುಂದಿಲ್ದಕೂಟದಲ್ಲಿ ಮಾತನಾಡಿದರು. ಮಕ್ಕಳನ್ನು ವೃದ್ಧಾಶ್ರಮಕ್ಕೆ ಮತ್ತು ಅನಾಥಶ್ರಮಕ್ಕೆ ಕರೆದುಕೊಂಡು ಹೋಗಬೇಕು. ಅಲ್ಲಿನ ಪರಿಸ್ಥಿತಿಯನ್ನು ಅವರಿಗೆ ಮನದಟ್ಟು ಮಾಡಬೇಕು. ಮಕ್ಕಳು ಗುರು ಹಿರಿಯರಿಗೆ ಗೌರವ ತೋರಬೇಕು ಎಂದರು. ಡಾ. ವೈ.ಎನ್‌. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಹೇಶ್‌ […]

ಋಣ ಮುಕ್ತ ಕಾಯ್ದೆ- ಸಹಕಾರಿಗಳಿಗೆ ಅನ್ವಯಿಸುವುದಿಲ್ಲ: ಮಂಜುನಾಥ್‌

ಉಡುಪಿ: ರಾಜ್ಯ ಸರ್ಕಾರ ಘೋಷಿಸಿರುವ ‘ಕರ್ನಾಟಕ ಋಣ ಮುಕ್ತ ಕಾಯ್ದೆ-2018’ ಸೌಹಾರ್ದ ಸಹಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ಕಾಯ್ದೆ ಕೇವಲ ಲೇವಾದೇವಿಗಾರರು ಮತ್ತು ಪಾನ್‌ ಬ್ರೋಕರ್‌ಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ನಿರ್ದೇಶಕ ಎಸ್‌.ಕೆ. ಮಂಜುನಾಥ್‌ ಹೇಳಿದ್ದಾರೆ. ಎಲ್ಲಾ ಸೌಹಾರ್ದ ಸಹಕಾರಿಗಳ ಸದಸ್ಯರುಗಳು ಪಡೆದಿರುವ ಎಲ್ಲಾ ರೀತಿಯ ಸಾಲಗಳನ್ನು ಕ್ಲಪ್ತ ಸಮಯಕ್ಕೆ ಪಾವತಿಸಿ ಸಹಕಾರಿ ರಂಗದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ನೆರೆ ಸಂತ್ರಸ್ತರಿಗೆ ನೆರವು ಅಭಿಯಾನಕ್ಕೆ ಚಾಲನೆ

ಉಡುಪಿ: ಜಿಲ್ಲಾಡಳಿತ, ರೋಟರಿ ಉಡುಪಿ ರಾಯಲ್‌, ಮಣಿಪಾಲ ಹಿಲ್ಸ್‌, ರೋಟರ್ಯಾಕ್ಟ್‌ ಮಣಿಪಾಲ, ಸಹಕಾರ ಭಾರತಿ, ಲಯನ್ಸ್‌ ಜಿಲ್ಲೆ 317ಸಿ, ಲಿಯೋ ಜಿಲ್ಲೆ 317ಸಿ ಹಾಗೂ ಇತರ ಸಾರ್ವಜನಿಕ ಸಂಸ್ಥೆಗಳ ಸಹಕಾರದೊಂದಿಗೆ ನೆರೆ ಸಂತ್ರಸ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಅವಶ್ಯಕ ವಸ್ತುಗಳ ಸಂಗ್ರಹ ರಸ್ತೆ ಅಭಿಯಾನಕ್ಕೆ‌ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಮಂಗಳವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಯಲ್‌ ಅಧ್ಯಕ್ಷ ಬಿ.ಕೆ. ಯಶವಂತ, ಕಾರ್ಯಕ್ರಮ ಸಂಘಟಕ ರತ್ನಾಕರ್‌ ಇಂದ್ರಾಳಿ, ಬಾಲಕೃಷ್ಣ ಮದ್ದೋಡಿ, ಸಹಕಾರ ಭಾರತಿ […]

ಶ್ರೀಕೃಷ್ಣ ಮಠ:ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಸಂಗ್ರಹಣಾ ಕಾರ್ಯದ ಸಮಾರೋಪ

ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿ ಜಿಲ್ಲಾ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಹಮ್ಮಿಕೊಂಡ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಸಂಗ್ರಹಣಾ ಕಾರ್ಯದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಭಾಗವಹಿಸಿ ಶುಭ ಹಾರೈಸಿದರು.ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.