ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಮಹೇಶ್ ದೇವಾಡಿಗ ಕ್ಲಿಕ್ಕಿಸಿದ ಸ್ಪೆಷಲ್ ಚಿತ್ರ

ಮಹೇಶ್ ದೇವಾಡಿಗ ಉಡುಪಿ ಜಿಲ್ಲೆಯ ಅಡ್ವೆ ನಿವಾಸಿ. ಪ್ರಸ್ತುತ ಕಾಂಜರ ಕಟ್ಟೆಯಲ್ಲಿ “ಸ್ಮೈಲ್ ಫೋಟೋಗ್ರಫಿ”ಎನ್ನುವ ಸ್ಟುಡಿಯೋ ನಡೆಸಿ, ವೃತ್ತಿಪರ ಛಾಯಾಗ್ರಹಣದಲ್ಲಿ ತೊಡಗಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಮೂಡೆ ಎನ್ನುವ ವಿಶೇಷ ಖಾದ್ಯ ಮಾಡುತ್ತಾರೆ. ಮೂಡೆ ಮಾಡಲು ಎಲೆಗಳನ್ನು  ವಿಶೇಷವಾಗಿ ಹೆಣೆದು ಅದರಲ್ಲಿ ಹಿಟ್ಟು ಮಾಡಿ ಬೇಯಿಸಿ ದೇವರಿಗೆ ನೈವೇದ್ಯಯಿಡುವ  ಸಂಪ್ರದಾಯ ಗ್ರಾಮೀಣ ಭಾಗದಲ್ಲಿ ಈಗಲೂ ಚಾಲ್ತಿಯಲ್ಲಿದೆ ಈ ಚಂದದ ದೃಶ್ಯವನ್ನು ಮಹೇಶ್ ಸೆರೆ ಹಿಡಿದಿದ್ದಾರೆ. ಮಹೇಶ್ ದೇವಾಡಿಗ:9844674895  

ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಪೂಜೆಗಾಗಿ ಲಡ್ಡಿಗೆ ತಯಾರು

ಉಡುಪಿ:  ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ  ಪ್ರಯುಕ್ತ  ದೇವರ  ವಿಶೇಷ ಪೂಜೆಗಾಗಿ ಲಡ್ಡಿಗೆಯನ್ನು ತಯಾರಿಸಲು ಪರ್ಯಾಯ ಪಲಿಮಾರು ಮಠಾಧೀಶರಾದ  ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು

ಉಡುಪಿ: ಶ್ರೀ ಕೃಷ್ಣ ವೇಷ ಸ್ಪರ್ಧೆಯಲ್ಲಿ ಕೊಳಲನೂದುತ ಬಂದ ಮುದ್ದು ಕೃಷ್ಣರು

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀಹೃಷಿಕೇಶತೀರ್ಥಪೀಠಮ್ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಅಂಗವಾಗಿ ರಾಜಾಂಗಣ, ಅನ್ನಬ್ರಹ್ಮ,ಭೋಜನಶಾಲೆಯಲ್ಲಿ ನಡೆದ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನು  ಪರ್ಯಾಯ ಪಲಿಮಾರು ಮಠಾಧೀಶರಾದ  ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ವೀಕ್ಷಿಸಿ ಮುದ್ದುಕೃಷ್ಣ.ಬಾಲಕೃಷ್ಣ ,ಕಿಶೋರಕೃಷ್ಣರನ್ನು ಅನುಗ್ರಹಿಸಿದರು. ಸುಮಾರು 500ಕ್ಕೂ ಹೆಚ್ಚು ಮಕ್ಕಳು  ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಶ್ರೀ ಕೃಷ್ಣ ಮಠದಲ್ಲಿ:ದೇವರಿಗೆ ಯಶೋಧೆ ಕೃಷ್ಣ  ಅಲಂಕಾರ

ಉಡುಪಿ:  ಶ್ರೀ ಕೃಷ್ಣ ಮಠದಲ್ಲಿ, ಅದಮಾರು ಮಠದ ಕಿರಿಯ ಸ್ವಾಮೀಜಿ ಶ್ರೀ ಶ್ರೀ ಈಶಪ್ರಿಯ ತೀರ್ಥರು ಶ್ರೀ ಕೃಷ್ಣ ದೇವರಿಗೆ ಶ್ರೀಕೃಷ್ಣ  ಜನ್ಮಾಷ್ಠಮಿಯ  ಅಂಗವಾಗಿ ” ಯಶೋಧೆ ಕೃಷ್ಣ  ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ಶ್ರೀ ಕೃಷ್ಣ ಮಠದಲ್ಲಿ : ವಿಶೇಷ ಭಜನಾ ಕಾರ್ಯಕ್ರಮ

ಉಡುಪಿ:  ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜಯಂತಿಯ ಪ್ರಯುಕ್ತ  ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ  ಹಮ್ಮಿ ಕೊಂಡಿರುವ ಭಜನಾ ಕಾರ್ಯಕ್ರಮವನ್ನು ಪರ್ಯಾಯ ಶ್ರೀ ವಿದ್ಯಾಧೀಶ  ತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಯಶಪಾಲ್ ಸುವರ್ಣ,ಗೋಪಾಲ್ ಕುಂದರ್,ಭಾಸ್ಕರ ಕಿದಿಯೂರು,ಶಿವರಾಮಅಂಬಲ್ಪಾಡಿ, ಸಿ.ಸಿ.ಕರ್ಕೇರ, ಭೋಜರಾಜ್ ಕಿದಿಯೂರು, ಸುಧಾಕರ ಮೆಂಡನ್, ಮಠದ ಪಿ.ಆರ್.ಓ ಶ್ರೀಶ ಭಟ್ […]