ಕರಾವಳಿ ಭಾಗದ ಬ್ಯಾಂಕುಗಳು ವಿಲೀನಕ್ಕೆ ಮುಂದಾದರೆ ಹೋರಾಟ: ಪ್ರಖ್ಯಾತ್ ಶೆಟ್ಟಿ 

ಉಡುಪಿ: ಕರಾವಳಿ ಭಾಗದಲ್ಲಿ ಹುಟ್ಟಿ ಬೆಳೆದ ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕುಗಳ ವಿಲೀನ ಪ್ರಕ್ರಿಯೆಗೆ ಒಳಪಡಿಸಲಿರುವ ಕೇಂದ್ರ ಕ್ರಮವನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಖಂಡಿಸಿದ್ದು, ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ಅಜ್ಞಾನದಿಂದ ದೇಶದ ಬ್ಯಾಂಕಿಂಗ್ ವಲಯ ದಿವಾಳಿಯತ್ತ ಸಾಗುತ್ತಿದೆ. ಹೀಗಾಗಿ‌ ಹಲವಾರು ಬ್ಯಾಂಕುಗಳು ನಷ್ಟದತ್ತ ಸಾಗುತಿವೆ. ಕರಾವಳಿ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರದ ತೊಟ್ಟಿಲಾಗಿದ್ದು, ದೇಶಕ್ಕೆ ಬ್ಯಾಂಕಿಂಗ್ ಕ್ಷೇತ್ರದ ಪರಿಚಯಿಸಿದ ಕೀರ್ತಿ ಕರಾವಳಿ ಜಿಲ್ಲೆಗಿದೆ. ಕಳೆದ […]