ಆತ್ಮಹತ್ಯೆ ಜಾಗತಿಕ ಸವಾಲಾಗಿ ಪರಿಣಮಿಸಿದೆ: ಪ್ರೊ.ಕೆ.ಎಸ್. ಅಡಿಗ

ಉಡುಪಿ: ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಸಾವಿಗೆ ಪ್ರಮುಖ ಕಾರಣವಾಗುತ್ತಿದ್ದು, ಇದು ಜಾಗತಿಕ ಸವಾಲಾಗಿ ಪರಿಣಮಿಸಿದೆ ಎಂದು ಉಡುಪಿ ಉಪೇಂದ್ರ ಪೈ ಸ್ಮಾರಕ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ.ಎಸ್. ಅಡಿಗ ಹೇಳಿದರು. ಕಮಲ ಎ. ಬಾಳಿಗಾ ಚಾರಿಟೇಬಲ್‌ ಟ್ರಸ್ಟ್‌ ಮುಂಬೈ, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ ಹಾಗೂ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಬಾಳಿಗಾ ಆಸ್ಪತ್ರೆಯ ಕಮಲ ಬಾಳಿಗಾ ಸ್ಮಾರಕ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ […]

ಶ್ರೀ ಪುತ್ತಿಗೆ ವೈದಿಕ ಲೌಕಿಕ ವಿದ್ಯಾಪೀಠದ ವಸತಿ ಶಾಲೆಗೆ ಭೂಮಿಪೂಜೆ

ಉಡುಪಿ: ಪಾಡಿಗಾರು ಪುತ್ತಿಗೆ ಶಾಖಾ ಮಠದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಶ್ರೀ ಪುತ್ತಿಗೆ ವೈದಿಕ ಲೌಕಿಕ ವಿದ್ಯಾಪೀಠದ ವಸತಿ ಶಾಲೆಗೆ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಗುರುವಾರ ಭೂಮಿಪೂಜೆ ನೆರವೇರಿಸಿದರು. ಅನಂತರ ಮಾತನಾಡಿದ ಸ್ವಾಮೀಜಿ, ಪ್ರಸ್ತುತ ವೈದಿಕ ವಿದ್ಯೆ ಅವನತಿಯ ಕಡೆಗೆ ಸಾಗುತ್ತಿದ್ದು, ಅದನ್ನು ರಕ್ಷಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಳೆದ ಐದು ವರ್ಷಗಳಿಂದ ಪಾಡಿಗಾರಿನಲ್ಲಿ ವೈದಿಕ ವಿದ್ಯಾಪೀಠವನ್ನು ನಡೆಸುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿದ್ಯಾಪೀಠ ಸಂಪೂರ್ಣ ಅಭಿವೃದ್ಧಿ ಮಾಡುವ ಸಲುವಾಗಿ ವಿಸ್ತರಣೆ […]

ಅ.11ರಂದು‌ ರಾಜ್ಯಾದ್ಯಂತ 80 ಚಿತ್ರಮಂದಿರಗಳಲ್ಲಿ “ಲುಂಗಿ” ಚಿತ್ರ ಬಿಡುಗಡೆ

ಮಂಗಳೂರು: ತುಳು ಬಾಷೆಯಲ್ಲಿ ಎರಡು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಮುಖೇಶ್ ಹೆಗ್ಡೆಯವರು ಖಾರ ಎಂಟಟೇರ್ನ್ಮೆಂಟ್ ಬ್ಯಾನರಿ‌ನಡಿಯಲ್ಲಿ ನಿರ್ಮಿಸಿರುವ ಕನ್ನಡ ಸಿನೆಮಾ ಲುಂಗಿ ಚಿತ್ರ ಅಕ್ಟೋಬರ್ 11ರಂದು ಜಯಣ್ಣ ಕಂಬೈನ್ಸ್ ಮೂಲಕ ರಾಜ್ಯಾದ್ಯಂತ ರಾಜ್ಯಾದ್ಯಂತ 80 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುಖೇಶ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಗೋಷ್ಠಿಯಲ್ಲಿ ಮಾತನಾಡಿ, ಉಡುಪಿಯಲ್ಲಿ ಅಲಂಕಾರ್, ಮಣಿಪಾಲ ಐನಾಕ್ಸ್, ಕಾರ್ಕಳದಲ್ಲಿ ರಾಧಿಕಾ ಮತ್ತು ಕುಂದಾಪುರದಲ್ಲಿ ವಿನಾಯಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ಲುಂಗಿ ಚಿತ್ರದ ತೆಲುಗು ರಿಮೇಕ್ ರೈಟ್ಸ್ […]

ಕೋಟ ಶ್ರೀನಿವಾಸ ಪೂಜಾರಿಯವರಿಗೆ ಜಿಲ್ಲಾ ಉಸ್ತುವಾರಿ ಕೊಟ್ಟರೆ ಚೆನ್ನಾಗಿತ್ತು: ಜಯಪ್ರಕಾಶ್ ಹೆಗ್ಡೆ

ಕುಂದಾಪುರ: ಸ್ಥಳೀಯರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು. ಕೋಟ ಶ್ರೀನಿವಾಸ ಪೂಜಾರಿ ಸ್ಥಳೀಯರಾಗಿದ್ದು, ಅವರು ಉಡುಪಿ, ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳನ್ನು ಪ್ರತಿನಿಧಿಸುತ್ತಿರುವುದರಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅವರನ್ನೇ ಉಸ್ತುವಾರಿಯನ್ನಾಗಿ ನೇಮಿಸಬೇಕಿತ್ತು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಅವರು ಬುಧವಾರ ಹೆಮ್ಮಾಡಿ ಸಮೀಪದ ಬಾಳಿಕೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಾ, ಅದೇ ಜಿಲ್ಲೆಯವರೇ ಉಸ್ತುವಾರಿ ಮಂತ್ರಿಗಳಾದರೆ ಜನರಿಗೆ ತುಂಬಾ ಅನುಕೂಲವಾಗುತ್ತದೆ. ಪ್ರಸ್ತುತ ಉಡುಪಿ ಉಸ್ತುವಾರಿ ಸಚಿವರಿಗೆ […]