ವೈಜ್ಞಾನಿಕ ರೀತಿಯ ತೆಂಗು ಕೃಷಿಯಿಂದ ಲಾಭ: ಲೀಲಾಧರ ಶೆಟ್ಟಿ

ಉಡುಪಿ: ಹೊಸ ಹೊಸ ವಿಧಾನಗಳನ್ನು ಅಳವಡಿಸಿಕೊಂಡು ವೈಜ್ಞಾನಿಕ ರೀತಿಯಲ್ಲಿ ತೆಂಗು ಕೃಷಿ ಮಾಡುವುದರಿಂದ ಒಳ್ಳೆಯ ಆದಾಯ ಗಳಿಸಬಹುದು ಎಂದು ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಕೃಷಿಕ ಸಂಘದ ಮಜೂರು ಕರಂದಾಡಿ ಗ್ರಾಮ ಸಮಿತಿ ವತಿಯಿಂದ ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಆಯೋಜಿಸಿದ ವೈಜ್ಞಾನಿಕ ತೆಂಗು ಕೃಷಿ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತೆಂಗು ಕೃಷಿಯಲ್ಲಿ ನಾವು ತುಂಬಾ ಹಿಂದೆ ಉಳಿದಿದ್ದು, ಹಳೆಯ ಪದ್ಧತಿಗಳನ್ನೇ ಅನುಸರಿಸುತ್ತಿದ್ದೇವೆ. ತೆಂಗಿನ ಮರಗಳಿಗೆ ಕಟ್ಟೆ […]