ನ.19: ಜಿಲ್ಲಾಮಟ್ಟದ ಎಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ಗಳ ಸಮಾವೇಶ
ಉಡುಪಿ: ಉಡುಪಿ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಅಂಡ್ ಆರ್ಕಿಟೆಕ್ಟ್ಸ್ (ಎಸಿಸಿಇಎ) ಸಂಸ್ಥೆ ಹಾಗೂ ಫ್ರಾನ್ಸ್ ಮೂಲದ ವಿದ್ಯುತ್ ಉಪಕರಣಗಳ ತಯಾರಿಕಾ ಸಂಸ್ಥೆ ‘ಸ್ನೆಡರ್’ ಜಂಟಿ ಆಶ್ರಯದಲ್ಲಿ ಜಿಲ್ಲಾಮಟ್ಟದ ಎಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ಗಳ ಸಮಾವೇಶವನ್ನು ಬ್ರಹ್ಮಾವರದ ಶಾಮಿಲಿ ಶನಯ ಸಭಾಂಗಣದಲ್ಲಿ ನ. 19ರಂದು ಆಯೋಜಿಸಲಾಗಿದೆ. ಈ ಬಗ್ಗೆ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಶಾಂತಾ ಎಲೆಕ್ಟ್ರಿಕಲ್ಸ್ ಮಾಲೀಕ ಶ್ರೀಪತಿ ಭಟ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಜಿ. ಶಂಕರ್ ಅಂದು ಸಂಜೆ 7ಗಂಟೆಗೆ […]
ಮಂಗಳೂರು: ನೂತನ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಜಯಶಾಲಿಯಾದ ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರದ ನೂತನ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮ ಇಂದು ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರೂ ಹಾಗೂ ಶಾಸಕರಾದ ಸಂಜೀವ ಮಠಂದೂರು, ಶಾಸಕರಾದ ವೇದವ್ಯಾಸ್ ಕಾಮತ್, […]
ನ. 17ರಂದು ನೂತನ ಕುಡಿಯುವ ನೀರಿನ ಸಂಸ್ಕರಣ ಘಟಕ ಶುಭಾರಂಭ
ಉಡುಪಿ: ಆಸ್ಟ್ರೇಲಿಯಾದ ಪ್ರತಿಷ್ಟಿತ ಪಾನೀಯ ಉತ್ಪಾದನಾ ಸಂಸ್ಥೆ ‘ಫೋಸ್ಟರ್’ ಬ್ರಹ್ಮಾವರದ ಆರೂರಿನಲ್ಲಿ ಆರಂಭಿಸಿರುವ ನೂತನ ಕುಡಿಯುವ ನೀರಿನ ಸಂಸ್ಕರಣಾ ಘಟಕ ನ. 17ರಂದು ಶುಭಾರಂಭಗೊಳ್ಳಲಿದೆ ಎಂದು ಮಹಾಮಂತ್ರ ಪ್ರೊಡಕ್ಷನ್ಸ್ನ ಪಾಲುದಾರ ವಿವೇಕ್ ಸುವರ್ಣ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ಫೋಸ್ಟರ್ ಸಂಸ್ಥೆಯ ಅಧಿಕೃತ ಉತ್ಪಾದನೆ ಮತ್ತು ಮಾರಾಟದ ಜವಾಬ್ದಾರಿಯನ್ನು ಮಹಾಮಂತ್ರ ಪ್ರೊಡಕ್ಷನ್ಸ್ ವಹಿಸಿಕೊಂಡಿದೆ. ಅಂದು ಸಂಜೆ 7.30ಕ್ಕೆ ಉಡುಪಿ ಕಿದಿಯೂರು ಹೋಟೆಲ್ನ ಶೇಷಶಯನ ಸಭಾಂಗಣದಲ್ಲಿ ನೀರಿನ ಘಟಕದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು. ಶಾಸಕ ಕೆ. […]
ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಪೂರ್ಣ: ನಳಿನ್ ಭರವಸೆ
ಮಂಗಳೂರು: ಹತ್ತು ವರ್ಷಗಳಿಂದ ಕುಂಟುತ್ತಾ ಸಾಗಿದ್ದ ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಉದ್ಘಾಟನೆಗೆ ಮತ್ತೊಂದು ಗಡುವು ಸಿಕ್ಕಿದೆ. ನಾನಾ ರೀತಿಯ ಟೀಕೆ, ಟ್ರೋಲ್ ಅಪಹಾಸ್ಯಕ್ಕೆ ಗುರಿಯಾಗಿರುವ ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಂಡು, ಜನವರಿ ಮೊದಲ ವಾರದಲ್ಲಿ ಫ್ಲೈಓವರ್ ಉದ್ಘಾಟನೆಗೊಳ್ಳಿದೆ ಅಂತಾ ಸಂಸದ ನಳಿನ್ ಕುಮಾರ್ ಕಟೀಲ್ ಭರವಸೆ ಮತ್ತೆ ನೀಡಿದ್ದಾರೆ. ಇಂದು ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳ ತಂಡ ಜೊತೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಡಿಸೆಂಬರ್ […]
ನ.18: ಅಖಿಲ ಭಾರತ ಸಹಕಾರ ಸಪ್ತಾಹ-2019
ಉಡುಪಿ: ರಾಜ್ಯಮಟ್ಟದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ–2019 ಕಾರ್ಯಕ್ರಮ ನ. 18ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ಆವರಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಸಪ್ತಾಹವನ್ನು ಉದ್ಘಾಟಿಸುವರು. ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಕಾರಿ ಧ್ವಜಾರೋಹಣ ನೆರವೇರಿಸುವರು ಎಂದರು. ವಿಧಾನ […]