ಉಡುಪಿ: ಶ್ರೀಕೃಷ್ಣ ಮಠ: ಬೃಹತ್ ಯೋಗ ಶಿಬಿರದ ಸಮಾರೋಪ

ಉಡುಪಿ: ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಪರ್ಯಾಯ ಶ್ರೀಪಲಿಮಾರು ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ,ನಡೆಯುತ್ತಿರುವ ಬೃಹತ್ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಹಾಗೂ ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು 5 ದಿನಗಳ ಕಾಲ ಯೋಗ ಶಿಬಿರವನ್ನು ನಡೆಸಿಕೊಟ್ಟ ಯೋಗಗುರು ಬಾಬಾ ರಾಮದೇವ್ ಮಹಾರಾಜ್ ಇವರನ್ನು ಗೌರವಿಸಿದರು.
ರಸ್ತೆ ಅಪಘಾತದಲ್ಲಿ ಮೃತಪಟ್ಟ ಶ್ರವಣ ಪೂಜಾರಿ ಕುಟುಂಬಕ್ಕೆ ರೂ.15 ಲಕ್ಷ ವಿಮಾ ಚೆಕ್ ವಿತರಣೆ

ಉಡುಪಿ: ಓರಿಯಂಟಲ್ ಇನ್ಶೂರೆನ್ಸ್ ಕಂಪೆನಿಯ ಉಡುಪಿ ಶಾಖೆಯ ವತಿಯಿಂದ ಈಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶ್ರವಣ ಎಸ್. ಪೂಜಾರಿ ಅವರ ಕುಟುಂಬಕ್ಕೆ ‘ವ್ಯಕ್ತಿಗತ ಅಪಘಾತ ವಿಮಾ ರಕ್ಷಣೆ’ಯಡಿ ರೂ. 15 ಲಕ್ಷ ಮೊತ್ತದ ಚೆಕ್ನ್ನು ಬುಧವಾರ ಹಸ್ತಾಂತರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಮೃತ ಶ್ರವಣ ಅವರ ತಂದೆ ಕೆ. ಶ್ರೀನಿವಾಸ ಪೂಜಾರಿ, ವಿಮಾ ಪಾಲಿಸಿಯ ನಾಮಿನಿ ಆಗಿರುವ ತಾಯಿ ಎಸ್. ಅರುಣ ಅವರಿಗೆ ಚೆಕ್ ವಿತರಿಸಿದರು. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಕಾನೂನು ಘಟಕದ […]
ಎಲ್ಲರಿಗೂ ಕಡಿಮೆ ಬೆಲೆಯಲ್ಲಿ ಮರಳು ಸಿಗಬೇಕು:ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪುರ: ಬಳ್ಳಾರಿ ಗಣಿಗಾರಿಕೆಗಿಂತ ಉಡುಪಿ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಭೀಕರವಾಗಿದೆ ಎಂದು ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗುತ್ತಿದೆ. ಈ ಆರೋಪದಿಂದ ಮುಕ್ತವಾಗಬೇಕು. ವಾರಾಹಿ ನದಿಯಲ್ಲಿ ಬಾಕಿಯಾದ ಮರಳು ದಿಬ್ಬ ನಿರ್ದಿಷ್ಟ ಕಾಲಾವಕಾಶದಲ್ಲಿ ತೆರವು ಮಾಡಿ. ಹೊಸ ಮರಳು ನೀತಿಗೆ ಜೋತುಬಿದ್ದರೆ ಮತ್ತೆ ಮಳೆಗಾಲ ಆರಂಭವಾಗುತ್ತದೆ. ಬಡವರಿಗೆ ಮರಳು ಅವಶ್ಯವಿದ್ದು, ಮರಳು ಎಲ್ಲರಿಗೂ ಕಡಿಮೆ ಬೆಲೆಯಲ್ಲಿ ಮರಳು ಸಿಗಬೇಕು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಅವರು ಕುಂದಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷರ ಕಚೇರಿಯಲ್ಲಿ ಬುಧವಾರ ಸಂಜೆ ಗಣಿ […]
ಉಪ ಚುನಾವಣೆ: ಕಾಂಗ್ರೆಸ್ ಬಹುಮತ ಸಾಧಿಸಲಿದೆ: ಖಾದರ್

ಮಂಗಳೂರು: ಮುಂಬರುವ ರಾಜ್ಯ ಉಪ ಚುನಾವಣೆಯಲ್ಲಿ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ. ಕಾಂಗ್ರೆಸ್ ಬಹುಮತ ಗಳಿಸುತ್ತದೆ ಎಂದು ಮಾಜಿ ಸಚಿವ ಯುಟಿ ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ. ಅಂತಹವರು ಜನರಿಗೆ ಬೇಕಾ ಎನ್ನುವುದನ್ನು ಜನರೇ ನಿರ್ಧರಿಸುತ್ತಾರೆ. ಹಣ ಪಡೆದ ಅನರ್ಹರಿಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ. ಇನ್ನು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ […]
ದೇಶದ ಅಭಿವೃದ್ಧಿಗೆ ಇಂದಿರಾ ಕೊಡುಗೆ ಅಪಾರ: ಸಭಾಪತಿ

ಉಡುಪಿ: ದೇಶದ ಸಮಗ್ರ ಅಭಿವೃದ್ಧಿಗೆ ಇಂದಿರಾ ಗಾಂಧಿ ನೀಡಿದ ಕೊಡುಗೆ ಅಪಾರ. ಭೂ ಮಸೂದೆ ಕಾಯಿದೆ ಜಾರಿಗೊಳಿಸುವ ಮೂಲಕ ರೈತರಿಗೆ ಭೂಮಿ ಹಕ್ಕನ್ನು ನೀಡಿದ ಧೀಮಂತ ಮಹಿಳೆ ಎಂದು ಮಾಜಿ ಶಾಸಕ ಯು.ಆರ್. ಸಭಾಪತಿ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಿಸಾನ್ ಘಟಕದ ಜಂಟಿ ಆಶ್ರಯದಲ್ಲಿ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ದಿವಂಗತ ಇಂದಿರಾ ಗಾಂಧಿಯವರ 102ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 20 ಅಂಶಗಳ ಕಾರ್ಯಕ್ರಮಗಳ ಮೂಲಕ ಬಡ ಕೃಷಿ ಕಾರ್ಮಿಕರಿಗೆ, ಮಹಿಳೆಯರಿಗೆ […]