ಐಡಿಯಾ ಆಫ್ ಭಾರತ್ ಲಿಟ್ ಫೆಸ್ಟ್ ಗೆ ಚಾಲನೆ

ಮಂಗಳೂರು: ಐಡಿಯಾ ಆಫ್ ಭಾರತ್ ಎನ್ನುವ ಪರಿಕಲ್ಪನೆಯಲ್ಲಿ ಮಂಗಳೂರಿನಲ್ಲಿ ಎರಡು ದಿನಗಳ ಕಾಲ ಮಂಗಳೂರು ಲಿಟ್ ಫೆಸ್ಟ್ ಆಯೋಜಿಸಲಾಗಿದ್ದು, ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಾಹಿತ್ಯ ಹಬ್ಬದಲ್ಲಿ ಏಕಪಾತ್ರಾಭಿನಯದ ಶೈಲಿಯಲ್ಲಿ ಸಂವಾದಗಳು, ಪ್ಯಾನಲ್ ಡಿಸ್ಕಷನ್, ಪುಸ್ತಕಗಳ ವಿಮರ್ಶೆ, ನೃತ್ಯ ಪ್ರದರ್ಶನ, ಪುಸ್ತಕ ಪ್ರದರ್ಶನ, ಗೋಷ್ಠಿ, ಕ್ಲೈ ಮಾಡೆಲಿಂಗ್ ಹೀಗೆ ಹತ್ತು ಹಲವು ವಿಶೇಷತೆಗಳು ಕಾರ್ಯಕ್ರದಲ್ಲಿ ನಡೆಯಲಿದೆ. ಹಿರಿಯ ಸಂಶೋಧನ ಡಾ. ಎಂ. […]

ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಕರಾವಳಿಯ ಶಾಸಕ..?

ಉಡುಪಿ: ಕರ್ನಾಟಕ ವಿಧಾನಸಭೆ ಉಪಚುನಾವಣೆ ಹೊಸ್ತಿಲಲ್ಲಿ ಜನಪ್ರತಿನಿಧಿಗಳ ಹನಿಟ್ರ್ಯಾಪ್ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಈ ಜಾಲದಲ್ಲಿ ಕರಾವಳಿಯ ಶಾಸಕರೊಬ್ಬರು ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹನಿಟ್ರ್ಯಾಪ್ ಜಾಲದ ಬೆನ್ನು ಹತ್ತಿದ್ದ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಅಚ್ಚರಿಯ ಮಾಹಿತಿ ದೊರಕಿದ್ದು, ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಇಬ್ಬರು ಅನರ್ಹ ಶಾಸಕರು ಸೇರಿದಂತೆ ಒಟ್ಟು ಆರು ಮಂದಿ ಶಾಸಕರು ಹನಿಟ್ರ್ಯಾಪ್ ಬಲೆಗೆ ಬಿದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಆರು ಜನರ ಪೈಕಿ ಒಬ್ಬರು ವಿಧಾನ ಪರಿಷತ್ ಸದಸ್ಯ ಹಾಗೂ ಕರಾವಳಿಯ ಶಾಸಕರೊಬ್ಬರು […]

ಅನಾಥ ರೋಗಿಗಳ ಆರೈಕೆಗೆ ಅನಾಥಾಶ್ರಮ-ಉಡುಪಿ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್

ಉಡುಪಿ: ಜಿಲ್ಲೆಯ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾಗುವ ಅನಾಥ ರೋಗಿಗಳ ಆರೈಕೆಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಯೋಗದಲ್ಲಿ ಅನಾಥಾಲಯ ಆರಂಭಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಆಸ್ಪತ್ರೆಗೆ ಸಮಾಜಸೇವಕರು ಮತ್ತು ಸಾರ್ವಜನಿಕರು ಅನಾಥ ರೋಗಿಗಳನ್ನು ದಾಖಲಿಸುತ್ತಿದ್ದು, ಇವರಿಗೆ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆ ಇರುವ ಬಗ್ಗೆ ಜಿಲ್ಲಾ ಸರ್ಜನ್ ಡಾ. […]