ಕಾಪು: ಮಹಾಯಾಗದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಉಡುಪಿ : ರಾಜ್ಯದ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಉಡುಪಿ ಜಿಲ್ಲೆಯ ಕಾಪು ತಾಲೂಕು ಎಲ್ಲೂರು ಸೀಮೆಯ ಕುತ್ಯಾರು ವಿದ್ಯಾದಾಯಿನಿ ಶಾಲಾ ಪ್ರಾಂಗಣದಲ್ಲಿ ಲೋಕ ಕಲ್ಯಾಣಾರ್ಥ ಆಯೋಜಿಸಿದ್ದ, ಸಹಸ್ರಮಾನ ನವಕುಂಡ ಶ್ರೀ ಮಹಾಗಣಪತಿ ಅಥರ್ವ ಶೀರ್ಷ ಮಹಾಯಾಗ- ಮಹಾ ಅನ್ನ ಸಂತರ್ಪಣೆ, ಸನಾತನ ಧರ್ಮಸಂಸತ್ತು- ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಇಂದು ಭಾಗವಹಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ನಾಡಿನ ಜನರ ಕಷ್ಟ ಕಾರ್ಪಣ್ಯ , ಪ್ರಕೃತಿ ವಿಕೋಪ ನಿವಾರಣೆ, ಮಳೆ ಬೆಳೆ ತನ್ಮೂಲಕ ಲೋಕ ಸುಭಿಕ್ಷೆಯ ಆಶಯದೊಂದಿಗೆ ನಡೆಯುತ್ತಿರುವ […]

ಕಾರ್ಕಳ: ಕೊಂಕಣಿ ಸಾಹಿತ್ಯ ಅಕಾಡೆಮಿ ರಜತ ಮಹೋತ್ಸವ ಸಮಿತಿ :ಕಾರ್ಯಾಲಯ ಉದ್ಘಾಟನೆ

ಕಾರ್ಕಳ: ಫೆ.22 ಮತ್ತು 23 ರಂದು ಕಾರ್ಕಳ ಎಸ್‌ವಿಟಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಜತ ಮಹೋತ್ಸವದ ಅಂಗವಾಗಿ ಸಮಿತಿಯ ಕಾರ್ಯಾಲಯವನ್ನು ಭಾನುವಾರ ನವಮಿ ಪ್ಲಾನೆಟ್‌ನಲ್ಲಿ ರಜತ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷ, ಶಾಸಕ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಶೆಣೈ, ನವಮಿ ಪ್ಲಾನೆಟ್‌ನ ಮಾಲಕ ನಂದಕುಮಾರ್ ಆರ್. ಕುಡ್ವ, ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಮಂಗಳೂರು ಇದರ […]