ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ ಪ್ರಕರಣ: ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ- ಬೊಮ್ಮಾಯಿ

ಉಡುಪಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪಿತಸ್ಥರಿದ್ದರು ನಾವು ನ್ಯಾಯಸಮ್ಮತ ತನಿಖೆ ಮಾಡುತ್ತೇವೆ. ಇದನ್ನು ಮೊದಲ ದಿನದಿಂದಲೇ ಹೇಳಿದ್ದೇನೆ. ಅಲ್ಲದೆ ಯಾವುದೇ ಸಂಘಟನೆ, ವ್ಯಕ್ತಿಯ ಬಗ್ಗೆ ಉಲ್ಲೇಖ ಮಾಡಿಲ್ಲ ಎಂದರು. ಪೊಲೀಸರು ಮೊದಲನೆ ದಿನದಿಂದ ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧಾರಿಸಿ ತೀವ್ರವಾದ ತನಿಖೆ ನಡೆಸಿದ ಪರಿಣಾಮ ಆರೋಪಿ ಶರಣಾಗಿದ್ದಾನೆ. […]

ಜಗದೀಶ್ ಆಚಾರ್ಯ ಪುತ್ತೂರು ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು: ಕಲಾಸಿಂಧು ಬಳಗದ ಖ್ಯಾತ ಗಾಯಕ ಜಗದೀಶ್ ಆಚಾರ್ಯ ಪುತ್ತೂರು ಅವರಿಗೆ 2019ರ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ಜ. 26 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈಗಾಗಲೇ ಆರ್ಯಭಟ ಪ್ರಶಸ್ತಿ ಪಡೆದ ಜಗದೀಶ್ ಆಚಾರ್ಯ ಅವರು ದೇಶ ವಿದೇಶಗಳಲ್ಲಿ ಸಾವಿರಾರು ಸಂಗೀತ ಕಾರ್ಯಕ್ರಮಗಳನ್ನು ನೀಡಿ, ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.