ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕೊರೊನಾ ಶಂಕಿತ ಮಹಿಳೆ ದಾಖಲು 

ಮಣಿಪಾಲ: ಇಲ್ಲಿನ ಕೆಎಂಸಿ ಆಸ್ಪತ್ರೆಗೆ ಕೊರೊನಾ ಶಂಕಿತ ಮಹಿಳೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈಚೆಗೆ ಮಕ್ಕಾ ಯಾತ್ರೆಯಿಂದ ಬಂದಿರುವ ಸಾಗರ ಮೂಲದ ಮಹಿಳೆಯೊಬ್ಬರಲ್ಲಿ ಶೀತ, ಕೆಮ್ಮು, ಗಂಟಲು ನೋವು ಹಾಗೂ ಜ್ವರದ ಲಕ್ಷಣ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಜಿಲ್ಲಾ ಆರೋಗ್ಯ ಇಲಾಖೆಯ ಆದೇಶದಂತೆ ಕೆಎಂಸಿ ಆಸ್ಪತ್ರೆಯಲ್ಲಿ ಕೊರೊನಾ ಶಂಕಿತರ ಚಿಕಿತ್ಸೆಗಾಗಿ 20 ವಿಶೇಷ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ನೇಮಕ

ಉಡುಪಿ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.‌ ಶಿವಕುಮಾರ್ ನೇಮಕಗೊಂಡಿದ್ದಾರೆ. ಡಿಕೆಶಿ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಇದರ ಜತೆಗೆ ಮೂವರು ಕಾರ್ಯಾಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದು, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹ್ಮದ್ ಅವರನ್ನು ಎಐಸಿಸಿ ನೇಮಿಸಿದೆ. ಸಿಎಲ್ ಪಿ ಹಾಗೂ ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯನವರು ಮುಂದುವರಿಯಲಿದ್ದಾರೆ.

ದೇವಿಪ್ರಸಾದ್ ಸ್ಪೋರ್ಟ್ಸ್ ಸೆಂಟರ್ ನ ನೂತನ ಹಿರಿಯಡಕ ಶಾಖೆ ಶುಭಾರಂಭ

ಹಿರಿಯಡಕ: ದೇವಿಪ್ರಸಾದ ಸ್ಪೋರ್ಟ್ಸ್ ಸೆಂಟರ್ ಮುನಿಯಾಲು ಇದರ ನೂತನ ಶಾಖೆ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿಯ ಕೀರ್ತಿ ಕಾಂಪ್ಲೆಕ್ಸ್ ನಲ್ಲಿ ಮಾ.1ರಂದು ಶುಭಾರಂಭಗೊಂಡಿದೆ. ದೇವಿಪ್ರಸಾದ್ ಸ್ಪೋರ್ಟ್ಸ್ ಸೆಂಟರ್ ಹಿರಿಯಡಕ ಶಾಖೆಯನ್ನು ಈಚೆಗೆ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಉದ್ಘಾಟಿಸಿದರು. ಗೋಪಿನಾಥ್ ಭಟ್ ಮುನಿಯಾಲು, ರತ್ನಾಕರ ದೇವಾಡಿಗ ಹಿರಿಯಡ್ಕ, ಉಮೇಶ್ ಶೆಟ್ಟಿ ಹಿರಿಯಡ್ಕ ಹಾಗೂ ಅರುಣ್ ಜತ್ತನ್ ಹಿರಿಯಡ್ಕ ಉಪಸ್ಥಿತರಿದ್ದರು. ಈ ಸ್ಫೋರ್ಟ್ಸ್ ಸೆಂಟರ್ ನಲ್ಲಿ ಎಲ್ಲಾ ರೀತಿಯ ಕ್ರೀಡಾ ಸಾಮಗ್ರಿಗಳು, ಕ್ರೀಡಾ ಪಾರಿತೋಷಕಗಳು, ಸ್ಮರಣಿಕೆಗಳು, […]