ಪುರಾತತ್ತ್ವ ಶಾಸ್ತ್ರಜ್ಞ ಪ್ರೊ. ಅ. ಸುಂದರ ಅವರಿಗೆ ಕವಿ ಗೋವಿಂದ ಪೈ ಪ್ರಶಸ್ತಿ

ಉಡುಪಿ: ಪ್ರಸಕ್ತ ವರುಷದ  ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಹಿರಿಯ  ಪುರಾತತ್ತ್ವ ಶಾಸ್ತ್ರಜ್ಞ ಇತಿಹಾಸಕಾರ  ವಿದ್ವಾಂಸ ಪ್ರೊ. ಅ. ಸುಂದರ ಇವರಿಗೆ  ಸಂದಿದೆ. ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳರು ಅಧ್ಯಕ್ಷರಾಗಿರುವ ಸಮಿತಿಯು ಪ್ರೊ. ಸುಂದರ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದೇ ಮಾರ್ಚ್ ೨೩ರಂದು ಎಂ.ಜಿ.ಎಂ ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿ ಸಭಾಗೃಹದಲ್ಲಿ ನಡೆಯುವ  ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಾಲಾಗುವುದು ಎಂದು ರಾಷ್ಟ್ರಕವಿ ಗೋವಿಂದ ಪೈ  ಸಂಶೋಧನ ಕೇಂದ್ರದ ಸಂಯೋಜಕರಾದ ಪ್ರೊ. […]

ಕೊರೋನಾ ಭೀತಿ: ನಾಳೆಯಿಂದ ಚಿತ್ರಮಂದಿರ, ಮಾಲ್, ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಬಂದ್ !

ಬೆಂಗಳೂರು: ಕೊರೋನಾ ಭೀತಿ ದಿನ ಕಳೆದಂತೆ ಹೆಚ್ಚಾಗುತ್ತಿದ್ದು  ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆಸರ್ಕಾರ ಆದೇಶಿಸಿದೆ. ಮದುವೆ, ಸಭೆ-ಸಮಾರಂಭಗಳನ್ನು ರದ್ದು ಮಾಡುವಂತೆ ಸರ್ಕಾರ ಹೇಳಿದೆ. ಈ ವಿಷಯವನ್ನು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಒಂದು ವಾರಗಳ ಕಾಲ ಕ್ರೀಡಾ ಕಾರ್ಯಕ್ರಮಗಳು, ನೈಟ್ ಕ್ಲಬ್, ಪಬ್, ಮೇಳ, ಸೆಮಿನಾರ್ ಗಳು, ನಿಶ್ಚಿತಾರ್ಥ ಕಾರ್ಯಕ್ರಮಗಳು ಮತ್ತು ಜಾತ್ರೆಗಳನ್ನು ಬಂದ್ ಮಾಡಲಾಗುತ್ತಿದೆ. ಒಂದು […]