ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಉಚಿತ ಲ್ಯಾಪ್‍ಟಾಪ್ ವಿತರಣೆ

ಉಡುಪಿ ಮಾ.16: ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ಯೋಜನೆಯಡಿ ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಕೊಡಮಾಡಿದ ಲ್ಯಾಪ್‍ಟಾಪ್‍ಗಳನ್ನು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾಪು ಶಾಸಕ ಹಾಗೂ ಅಭಿವೃಧ್ಧಿ ಸಮಿತಿಯ ಅಧ್ಯಕ್ಷ ಲಾಲಾಜಿ ಆರ್ ಮೆಂಡನ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‍ಗಳನ್ನು ಹಸ್ತಾಂತರಿಸಿ, ಲ್ಯಾಪ್ ಟಾಪ್‍ಗಳನ್ನು ಸರಿಯಾದ ರೀತಿಯಲ್ಲಿ ಬಳಸಿ ಶೈಕ್ಷಣಿಕವಾಗಿ ಉತ್ತಮ ಸಾಧನೆಯನ್ನು ಮಾಡುವಂತೆ ಪ್ರೋತ್ಸಾಹಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ನಿಕೇತನ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಬಳಕೆಯ ಬಗ್ಗೆ ಕಾಲೇಜು ಶಿಕ್ಷಣ […]

ಕೊರೊನಾ ಹಿನ್ನೆಲೆ ಜನವರಿ 2021 ಕ್ಕೆ ಸೇನಾ ನೇಮಕಾತಿ ರ್ಯಾಲಿ ಮುಂದೂಡಿಕೆ: ಕರ್ನಲ್ ಎಫ್.ಪಿ. ದುಬಾಶ್

ಉಡುಪಿ ಮಾ.16: ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಮುಂಜಾಗೃತ ಕ್ರಮವಾಗಿ ಸರಕಾರದ ಆದೇಶದಂತೆ ಉಡುಪಿ ಜಿಲ್ಲೆಯಲ್ಲಿ ಎಪ್ರಿಲ್ 4 ರಿಂದ 14 ರ ವರೆಗೆ ಹಮ್ಮಿಕೊಳ್ಳಲಾಗಿದ್ದ ಸೇನಾ ನೇಮಕಾತಿ ರ್ಯಾಲಿಯನ್ನು ರದ್ದುಗೊಳಿಸಿ, ಜನವರಿ 2021 ಕ್ಕೆ ಮುಂದೂಡಲಾಗಿದೆ. ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಅರ್ಜಿಯನ್ನು ಜನವರಿ 2021 ರ ಸೇನಾ ರ್ಯಾಲಿಯಲ್ಲಿ ಪರಿಗಣಿಸಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯ ಅರ್ಹತಾ ಮಾನದಂಡಗಳಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ, ಅಭ್ಯರ್ಥಿಗಳಲ್ಲಿ ಯಾವುದೇ ಗೊಂದಲ […]

ಮುಂದಿನ ವರ್ಷ ಜನವರಿಯಲ್ಲಿ ಸೇನಾ ನೇಮಕಾತಿ ರ್ಯಾಲಿ: ಜಿಲ್ಲಾಧಿಕಾರಿ

ಉಡುಪಿ ಮಾ.16: ಜಿಲ್ಲೆಯಲ್ಲಿ ಏಪ್ರಿಲ್ 4 ರಿಂದ 14 ರವರೆಗೆ ನಡೆಯಬೇಕಾಗಿದ್ದ ಸೇನಾ ನೇಮಕಾತಿ ರ್ಯಾಲಿಯನ್ನು ಮುಂಜಾಗರೂಕತಾ ಕ್ರಮವಾಗಿ ಮುಂದೂಡಲಾಗಿದ್ದು, ಮುಂದಿನ ವರ್ಷ ಜನವರಿಯಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸೇನಾ ನೇಮಕಾತಿ ರ್ಯಾಲಿಯ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಸೇನಾ ನೇಮಕಾತಿಗೆ ಆನ್‍ಲೈನ್ ಅರ್ಜಿ ಸಲ್ಲಿಸಲು ಫೆಬ್ರವರಿ 16 ರಿಂದ ಮಾರ್ಚ್ 20 ರ ವರೆಗೆ ಅವಕಾಶ ನೀಡಲಾಗಿತ್ತು. ಇದುವರೆಗೂ 31500  ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಮುಂದಿನ […]

ಎದೆ ನೋವಾಗ್ತಿದೆ ಬಸ್ ನಿಲ್ಸಿ ಎಂದ್ರೂ ನಿಲ್ಲಿಸದೇ ಮಗನ ಜೀವ ತೆಗೆದರು: ದುರ್ಗಾಂಬಾ ಬಸ್ ವಿರುದ್ದ ಅಳಲು ತೋಡಿಕೊಂಡ ಸುಹಾಸ್ ಮಯ್ಯ ತಾಯಿಯ ಹೃದಯ ವಿದ್ರಾವಕ ಪತ್ರ ಒಮ್ಮೆ ಓದಿ

ಬೆಂಗಳೂರು-ಕುಂದಾಪುರಕ್ಕೆ ಸಂಚರಿಸುವ ದುರ್ಗಾಂಬಾ  ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಬಳ್ಕೂರು ಗ್ರಾಮದ ನಿವಾಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಸುಹಾಸ್ ಮಯ್ಯ  ಭಾನುವಾರ  ಬಸ್ ನಲ್ಲೇ ಹೃದಯಾಘಾತದಲ್ಲಿ ಸಾವನ್ನಪ್ಪಿದ್ದು. ಇದೀಗ ತನ್ನ ಮಗನ ಸಾವಿಗೆ ದುರ್ಗಾಂಬಾ ಖಾಸಗಿ ಬಸ್ ನ ನಿರ್ವಾಹಕರ ನಿರ್ಲಕ್ಷವೇ ಕಾರಣ ಎಂದು ಸುಹಾಸ್ ಮಯ್ಯರ ತಾಯಿ ಉಡುಪಿ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದು ಆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಖಾಸಗಿ ಬಸ್ ಗಳ ನಿರ್ಲಕ್ಷಯುತ ಸೇವೆಯನ್ನು ಸಾರ್ವಜನಿಕರ ಮುಂದೆ ತೆರೆದಿಟ್ಟಿದೆ. […]