ಕೊರೋನ ನಿಯಂತ್ರಣಕ್ಕೆ ನಿರ್ಮಿತಿ ಕೇಂದ್ರದಿಂದ 1 ಕೋಟಿ ರೂ ದೇಣಿಗೆ

ಉಡುಪಿ  ಏ.2:  ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಸರ್ಕಾರ ಕೈಗೊಂಡಿರುವ ಕಾರ್ಯಗಳಿಗಾಗಿ ಉಡುಪಿ ನಿರ್ಮಿತಿ ಕೇಂದ್ರದಿಂದ 1 ಕೋಟಿ ರೂ ಗಳ ಚೆಕ್ ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಗುರುವಾರ ನೀಡಲಾಯಿತು. ಉಡುಪಿ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ , ಉಡುಪಿ ನಿರ್ಮಿತಿ ಕೇಂದ್ರದ ಅಧ್ಯಕ್ಷರು ಹಾಗೂ ಜಿಲ್ಲಾದಿಕಾರಿ ಜಿ.ಜಗದೀಶ್ ಮತ್ತು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಚೆಕ್ ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಪಿಸಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ನಿರ್ಮಿತಿ […]