ಜಿಲ್ಲೆಯಲ್ಲಿ ಕೃಷಿಕರ ಬೆಳಗೆ ಯಾವುದೇ ಹಾನಿಯಾಗದಂತೆ ಕ್ರಮ: ಜಿಲ್ಲಾಧಿಕಾರಿ

ಉಡುಪಿ ಏ.7: ಜಿಲ್ಲೆಯ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳು ಮತ್ತು ಜಿಲ್ಲೆಯ ಇತರೆ ಸಮಸ್ಯೆಗಳ  ಕುರಿತು ಮಂಗಳವಾರ ಜಿಲ್ಲಾಧಿಕಾರಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕೃಷಿಕರ ಬೆಳಗೆ ಯಾವುದೇ ಹಾನಿಯಾಗದಂತೆ , ಕಲ್ಲಂಗಡಿ, ಮಟ್ಟುಗುಳ್ಳ, ಅನಾನಸ್  ಸೇರಿದಂತೆ ವಿವಿಧ ಬೆಳಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು  ವ್ಯವಸ್ಥೆ ಮಾಡಲಾಗಿದೆ,  ಕೃಷಿಗೆ ಪೂರಕವಾಗಿ ಕೀಟನಾಶಕ, ಭಿತ್ತನೆ ಬೀಜ ಮತ್ತು ರಸಗೊಬ್ಬರಗಳಿಗೆ ಕೊರತೆಯಾಗದಂತೆ ಕ್ರಮ  ಕೈಗೊಂಡಿದ್ದು, ಜಿಲ್ಲೆಯಲ್ಲಿ […]

ಕೊರೋನ ನಿಯಂತ್ರಣ ಕ್ರಮ: ಜಿಲ್ಲಾಡಳಿತವನ್ನು ಶ್ಲಾಘಿಸಿದ ಸಚಿವ ಬೊಮ್ಮಾಯಿ

ಉಡುಪಿ ಏ.7:  ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳನ್ನು ರಾಜ್ಯದ ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಅವರೊಂದಿಗೆ , ಜಿಲ್ಲೆಯ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳು ಮತ್ತು ಜಿಲ್ಲೆಯ ಇತರೆ ಸಮಸ್ಯೆಗಳ  ಕುರಿತು ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು, ಸಿಇಓ, ಎಸ್ಪಿ, ಅರೋಗ್ಯ ಇಲಾಖೆ ಮತ್ತು ಇತರೆ ಸಂಬಂದಪಟ್ಟ ಎಲ್ಲಾ ಇಲಾಖೆಗಳು […]

ಕೊರೊನಾ ಸೋಂಕು: ಇಂಗ್ಲೆಂಡ್‌ನಲ್ಲಿ ಭಾರತ ಮೂಲದ ವೈದ್ಯ ಸಾವು

ಲಂಡನ್‌: ಕೊರೊನಾ ವೈರಸ್‌ ಸೋಂಕು ತಗುಲಿ ಭಾರತ ಮೂಲದ ವೈದ್ಯರೊಬ್ಬರು ಇಂಗ್ಲೆಂಡ್ ನಲ್ಲಿ ಸಾವನ್ನಪ್ಪಿಗಿದ್ದಾರೆ. ವೈದ್ಯ ವೃತ್ತಿ ನಿರ್ವಹಿಸಿತ್ತಿದ್ದ ಜಿತೇಂದ್ರ ಕುಮಾರ್‌ ರಾಥೋಡ್‌ ಅವರು ಸರ್ಜರಿ ವಿಭಾಗದಲ್ಲಿ ಸಹಾಯಕ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅತ್ಯುತ್ತಮ ಶಸ್ತ್ರ ಚಿಕಿತ್ಸಕರೆಂದೇ ಖ್ಯಾತರಾಗಿದ್ದರು. 58 ವರ್ಷದ ರಾಥೋಡ್‌ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.