ಹೂವಿನ ಬೆಳೆಗಾರರಿಗೆ ನಷ್ಠ ಪರಿಹಾರ: ಮೇ 28 ರೊಳಗೆ ಅರ್ಜಿ ಸಲ್ಲಿಸಿ

ಉಡುಪಿ ಮೇ 15: ಲಾಕ್ ಡಾನ್ ನಿಂದ ನಷ್ಟ ಅನುಭವಿಸಿದ  ಹೂವಿನ ಬೆಳೆಗಾರರಿಗೆ ರೂ.25000.00 ಪ್ರತಿ ಹೇಕ್ಟರಗೆ, ಗರಿಷ್ಟ 1 ಹೇಕ್ಟರ್ ಮಾರ್ಗಸೂಚಿಯಂತೆ ಸರ್ಕಾರ ಪರಿಹಾರ ಘೋಷಿಸಿದ್ದು, 2019-20 ನೇ ಸಾಲಿನ ಬೆಳೆ ಸಮೀಕ್ಷೆ ಆಧಾರದಲ್ಲಿ ಪರಿಹಾರ ಪಾವತಿ ಮಾಡಲಾಗುವುದು. ರೈತರು ಬೆಳೆದಿರುವ ಬಹು ವಾರ್ಷಿಕ ಪುಷ್ಪ ಬೆಳೆ  2019-20 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ನಮೂದಿದಾಗಿರುವ ಬಗ್ಗೆ ಹಾಗೂ ವಾರ್ಷಿಕ ಪುಷ್ಪ ಬೆಳೆಗಳು 2019-20 ನೇ ಸಾಲಿನ ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ […]

ದ.ಕ. ಜಿಲ್ಲೆ: ದುಬೈನಿಂದ ಆಗಮಿಸಿದ 15 ಸೇರಿ ಒಟ್ಟು 16 ಮಂದಿಗೆ‌ ಕೊರೊನಾ ಪಾಸಿಟಿವ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದು ಬರೊಬ್ಬರಿ 16 ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇಂದು ಒಟ್ಟು 12 ಪುರುಷರು ಮತ್ತು 4 ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ. ದುಬೈನಿಂದ ವಾಪಾಸ್ ಆದ 15 ಜನರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಅವರೆಲ್ಲರೂ ಮೇ.12ರಂದು ದುಬೈನಿಂದ ಏರ್ ಲಿಫ್ಟ್ ಆಗಿದ್ದರು. 123 ಜನರ ಪೈಕಿ 15 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಏರ್ ಲಿಫ್ಟ್ ಅಗಿದ್ದ 179 ಪ್ರಯಾಣಿಕರ ಪೈಕಿ 123 ಜನ ಮಂಗಳೂರಿನವರು. 15 ದುಬೈ ರಿಟರ್ನ್ಸ್ ಮತ್ತು 1 ಬೇರೆ […]

ಉಡುಪಿ: ದುಬೈನಿಂದ ಆಗಮಿಸಿದ ಐದು ಮಂದಿಯಲ್ಲಿ ಕೊರೊನಾ ಪಾಸಿಟಿವ್

ಉಡುಪಿ: ದುಬೈನಿಂದ ಜಿಲ್ಲೆಗೆ ಆಗಮಿಸಿದ ಐದು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ವಿದೇಶದಲ್ಲಿ ಸಿಲುಕಿಕೊಂಡಿದ್ದ 176 ಮಂದಿ ಅನಿವಾಸಿಯ ಭಾರತೀಯರು ಮೇ 13ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಇವರಲ್ಲಿ ಉಡುಪಿ ಜಿಲ್ಲೆಗೆ ಸೇರಿದ 49 ಮಂದಿಯನ್ನು ಜಿಲ್ಲೆಯ ಹೋಟೆಲ್ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ನಂತರ ಎಲ್ಲರ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಐದು ಮಂದಿಯಲ್ಲಿ […]

ಉಡುಪಿ ಗಿರಿಜ ಹೆಲ್ತ್ ಕೇರ್ ನಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಲಭ್ಯವಿದೆ ಗುಣಮಟ್ಟದ ಉತ್ಪನ್ನಗಳು ಮತ್ತು ಉತ್ಕೃಷ್ಟ ಸೇವೆ

ಉಡುಪಿ: ಉಡುಪಿ ಗಿರಿಜಾ ಎಂಟರ್ಪ್ರೈಸಸ್  ಫಾರ್ಮಾಸ್ಯುಟಿಕಲ್ ಆ್ಯಂಡ್ ಡಿಸ್ಟ್ರಿಬ್ಯೂಟರ್ಸನ ಸಹಸಂಸ್ಥೆ ಉಡುಪಿ ವಾದಿರಾಜ ಕಾಂಪ್ಲೆಕ್ಸ್ ನಲ್ಲಿರುವ ಗಿರಿಜ ಹೆಲ್ತ್ ಕೇರ್ ಅಂಡ್ ಸರ್ಜಿಕಲ್ಸ್ ನ ಮಳಿಗೆಯಲ್ಲಿ  ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಗುಣಮಟ್ಟದ ಪರಿಕರಗಳು ಲಭ್ಯವಿವೆ. ಏನೇನು ಲಭ್ಯ:? ಪಿಪಿಇ ಕಿಟ್, ರಬ್ಬರ್ ಹ್ಯಾಂಡ್ ಗ್ಲೌಸ್, ಇನ್ಫ್ರಾರೆಡ್ ಥರ್ಮೋಮೀಟರ್, ಸ್ಯಾನಿಟೈಸರ್ ಸ್ಟ್ರೇಯರ್, ಫೇಸ್ ಶೀಲ್ಡ್, ಎನ್-95 ಮಾಸ್ಕ್, ವಾಶೆಬಲ್ ಬ್ರ್ಯಾಂಡೆಡ್ ಮಾಸ್ಕ್, 3ಫೈ ಮಾಸ್ಕ್, ವಾಶೆಬಲ್ ಫೇಸ್ ಮಾಸ್ಕ್, ಸ್ಟ್ರೇ ಸ್ಯಾನಿಟೈಸರ್, ಟರ್ಮರಿಕ್ ಹ್ಯಾಂಡ್ ವಾಶ್, ಹ್ಯಾಂಡ್ ಸ್ಯಾನಿಟೈಸರ್, […]

ಮಾಜಿ ಭೂಗತ ದೊರೆ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್. ಮುತ್ತಪ್ಪ ರೈ ಇನ್ನಿಲ್ಲ

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ, ಮಾಜಿ ಭೂಗತ ದೊರೆ, ಕರ್ನಾಟಕ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ , ಉದ್ಯಮಿ ಎನ್ ಮುತ್ತಪ ರೈ ಇಂದು ಬೆಳಗ್ಗಿನ ಜಾವ 2.10ಕ್ಕೆ ಇಹಲೋಕ ತ್ಯಜಿಸಿದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ‌ ಹಿಂದೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ 68  ವರ್ಷ ವಯಸ್ಸಾಗಿತ್ತು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮುತ್ತಪ್ಪ ರೈ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ‌ ಅಧ್ಯಕ್ಷ. ತಂದೆ ದಿ. ಎನ್ ನಾರಾಯಾಣ‌ ರೈ, ತಾಯಿ ದಿ. […]