ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್ ನಿಧನ

ಉಡುಪಿ: ಅಲೆವೂರು ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್ (56) ಭಾನುವಾರ ಹೃದಯಾಘಾತದಿಂದ ನಿಧನರಾದರು. ತುಳುನಾಡ ದೈವಾರಾಧಕರ ಸಹಕಾರಿ ಒಕ್ಕೂಟ , ಉಡುಪಿ ಜಿಲ್ಲೆ ಇದರ ಸ್ಥಾಪಕ ಅಧ್ಯಕ್ಷರಾಗಿ ,ಅಲೆವೂರು ಎಜ್ಯುಕೇಶನ್ ಸೊಸೈಟಿಯ ಸಲಹೆಗಾರರಾಗಿ, ಬಿಲ್ಲವ ಒಕ್ಕೂಟ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ  ನಿರೂಪಕರಾಗಿ, ಕಲಾವಿದರಾಗಿ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅವರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

ಉಡುಪಿ ಜನತೆಗೆ ಒಂದು ವಾರ ಉಚಿತ ಬಸ್ ಸೇವೆ: ಯಾವೆಲ್ಲ ಮಾರ್ಗದಲ್ಲಿ ಓಡಾಡಲಿದೆ ಬಸ್?.

ಉಡುಪಿ: ಕೊರೊನಾ ಲಾಕ್ ಡೌನ್ ನಿಂದಾಗಿ ಬಸ್ ಸಂಚಾರ ಇಲ್ಲದೆ ಜನಸಾಮಾನ್ಯರು ಪ್ರತಿದಿನ ಅನುಭವಿಸುತ್ತಿದ್ದ ಸಂಕಷ್ಟವನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಕಡಿಯಾಳಿ ಗಣೇಶೋತ್ಸವ ಸಮಿತಿ, ನಗರ ಸಭಾ ಸದಸ್ಯರು ಹಾಗೂ ಜನ ಪ್ರತಿನಿಧಿಗಳ ಸಹಕಾರದೊಂದಿಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಳೆಯಿಂದ (ಮೇ 25) ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಒಂದು ವಾರ ಉಚಿತ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ನಿತ್ಯ ಕೆಲಸ ಕಾರ್ಯಗಳಿಗೆ ತೆರಳುವ […]