ಮೀನುಗಾರರಿಗೆ ವಿವಿಧ ಸೌಲಭ್ಯ ಓದಗಿಸುವ ಕುರಿತು ಸಚಿವರ ಅಧ್ಯಕ್ಚತೆಯಲ್ಲಿ ಸಭೆ

ಕಾರವಾರ: ಮೀನುಗಾರರ ಹಾಗೂ ಮೀನುಗಾರ ಮಹಿಳೆಯರ ಸಮಸ್ಯೆಗಳ ಕುರಿತು ಶೂನ್ಯ ಬಡ್ಡಿದರ ಸಾಲ ಹಾಗೂ ಕಿಸಾನ ಕಾರ್ಡ ಯೋಜನೆಗೆ ಸಂಭಂದಿಸಿದಂತೆ ಮುಜರಾಯಿ ಹಾಗೂ ಮೀನುಗಾರಿಕೆ ಇಲಾಖೆ ಸಚಿವರಾದ ಶ್ರೀ ಕೋಟಾ ಶ್ರಿನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಯಿತು. ಶೇಕಡಾ ಶೂನ್ಯ ಬಡ್ಡಿದರದಲ್ಲಿ ಎಲ್ಲ ಮಹಿಳೆಯರಿಗೆ ಸಾಲ ಸೌಲಭ್ಯ ಸಿಗುವಂತೆ ಮಾಡಬೇಕು. ಮೀನುಗಾರರಿಗೆ ಸರ್ಕಾರ ಒದಗಿಸುತ್ತಿರುವ ಯೋಜನೆಗಳ ಕುರಿತು ಮಾಹಿತಿಯನ್ನು ತಲುಪಿಸಬೇಕು. ಸಾಲ ಪಡೆಯಲು ಅರ್ಹರಾಗಿರುವವರು ಸಾಲಕ್ಕಾಗಿ ಅರ್ಜಿ ಸಲ್ಲಿಸಿದರೆ ಅರ್ಜಿಯನ್ನು ವಿಲೇವಾರಿ ಮಾಡಿ ಸಾಲ […]
ಭಾರತ-ಚೀನಾ ಮಧ್ಯೆ ಯುದ್ಧದ ಕಾರ್ಮೋಡ: ಭಾರತೀಯ ಯೋಧರ ಗುಂಡಿಗೆ 43 ಚೀನಾ ಯೋಧರು ಬಲಿ

ಪೂರ್ವ ಲಡಾಖ್ನ ಗಾಲ್ವನ್ ಕಣಿವೆ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಾರತ ಮತ್ತು ಚೀನಾ ಸೇನೆಯೊಂದಿಗೆ ನಡೆದ ಹಿಂಸಾತ್ಮಕ ಸಂಘರ್ಷದಲ್ಲಿ ಚೀನಾದ 43 ಯೋಧರು ಮೃತಪಟ್ಟಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಭಾರತ–ಚೀನಾ ವಾಸ್ತವ ಗಡಿ ರೇಖೆಯಲ್ಲಿ (ಎಲ್ಎಸಿ) 45 ವರ್ಷಗಳ ಬಳಿಕ ಚೀನಾ ಭಾರತದ ಸೇನೆಯ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಚೀನಾದ 43 ಸೈನಿಕರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿರುವುದಾಗಿ ಎಎನ್ಐ ಖಚಿತಪಡಿಸಿದೆ. […]