ಗ್ರಹಣಪೂರ್ವದಲ್ಲಿ ಉಡುಪಿ ಕೃಷ್ಣಮಠದಲ್ಲಿ ಮಠಾಧೀಶರಿಂದ ವಿಶೇಷ ಪೂಜೆ, ಜಪ

ಉಡುಪಿ: ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಕೃಷ್ಣದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.  ಪರ್ಯಾಯ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ, ಕೃಷ್ಣಾಪುರ ಮಠದ ವಿದ್ಯಾಸಾಗರ ಸ್ವಾಮೀಜಿ, ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ, ಕಿರಿಯ ವಿದ್ಯಾರಾಜೇಶ್ವರ, ಕಾಣಿಯೂರು ಮಠದ ವಿದ್ಯಾವಲ್ಲಭ ಸ್ವಾಮೀಜಿ, ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ ಜಪ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಕುಂಜಾರು ಸಮೀಪದ ಬಾಣತೀರ್ಥ ಮಠದಲ್ಲಿ ವಿಶೇಷ ಜಪ, ಪೂಜೆಯಲ್ಲಿ ಭಾಗವಹಿಸಿದರು. ಪೇಜಾವರ ಮಠದ […]

ಭಾರತ, ಚೀನಾ ಗಡಿ ವಿವಾದ: ಸಮಸ್ಯೆ ಬಗೆಹರಿಸಲು ನೆರವು: ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಮಧ್ಯೆ ಉಂಟಾಗಿರುವ ಗಡಿ ವಿವಾದವನ್ನು ಬಗೆಹರಿಸಲು ಸಹಾಯ ಮಾಡುತ್ತೇವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕಾದ ಶ್ವೇತಭವನದಲ್ಲಿ ಸುದ್ದಿಗಾರರಲ್ಲಿ ಟ್ರಂಪ್  ಮಾತನಾಡಿದ್ದಾರೆ. ಭಾರತ ಮತ್ತು ಚೀನಾದ ಜತೆ ಸಂಪರ್ಕದಲ್ಲಿದ್ದೇವೆ. ಪರಿಸ್ಥಿತಿ ಕಠಿಣವಾಗಿದೆ. ಅವರು ದೊಡ್ಡ ಸಮಸ್ಯೆಯಲ್ಲಿದ್ದಾರೆ’ ಎಂದಿದ್ದಾರೆ. ‘ಅವರು ಸಂಘರ್ಷಕ್ಕಿಳಿದಿದ್ದು,  ಏನಾಗುತ್ತೋ ಎಂದು ಮುಂದೆ ಕಾದುನೋಡೋಣ. ಅವರಿಗೆ ಸಹಾಯ ಮಾಡಲು ನಾವು ಪ್ರಯತ್ನಿಸುತ್ತೇವೆ’ ಎಂದು ಅವರು ತಿಳಿಸಿದ್ದಾರೆ.