ಕೊರೋನ ವಾರಿಯರ್ಸ್‍ಗಳಿಗೆ ಜಿಲ್ಲಾಧಿಕಾರಿ ಜಿ ಜಗದೀಶ್ ಎನರ್ಜಿ ಡ್ರಿಂಕ್ಸ್ ಹಸ್ತಾಂತರ

ಉಡುಪಿ ಜುಲೈ 1: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆಗೆ ಐ.ಟಿ.ಸಿ ಲಿಮಿಟೆಡ್ ರವರಿಂದ ಕೋವಿಡ್19 ಸಲುವಾಗಿ, ಕ್ವಾರಂಟೈನ್ ನಲ್ಲಿರುವವರಿಗೆ, ಆಶಾ ಕರ್ಯಕರ್ತೆಯರು, ಪ್ರೈಮರಿ ಹೆಲ್ತ್ ಸೆಂಟರ್ ಮತ್ತು ಸ್ಲಮ್ ನವರಿಗೆ ಎನರ್ಜಿ ಡ್ರಿಂಕ್ಸ್ (Tetra packs of fruit juice) ಗಳನ್ನು ಉಡುಪಿ ಜಿಲ್ಲಾ ಘಟಕಕ್ಕೆ ನೀಡಿದ್ದು, ರೆಡ್ ಕ್ರಾಸ್ ಭವನದಲ್ಲಿ ಬುಧವಾರ ನಡೆದ ವೈದರ್ಯ ದಿನಾಚರಣೆ ಕಾರ್ಯಕ್ರಮಮನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಜಿ ಜಗದೀಶ್ ಎನರ್ಜಿ ಡ್ರಿಂಕ್ಸ್ ಗಳನ್ನು ಹಸ್ತಾಂತರಿಸಿದರು. ಎನರ್ಜಿ ಡ್ರಿಂಕ್ಸ್ ಗಳನ್ನು […]

ಉಡುಪಿಯಲ್ಲಿ ಮುಂದುವರಿದ ಕೊರೊನಾ ಆರ್ಭಟ: ಇಂದು ಕೂಡ 22 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಇಂದು‌ ಹೊಸದಾಗಿ 22 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆ ಮೂ‌ಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1228ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಉಡುಪಿ ನಾಗರಿಕ ಸಮಿತಿಯಿಂದ ವೈದ್ಯರ ದಿನಾಚರಣೆ

ಉಡುಪಿ: ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ವೈದ್ಯರ ದಿನಾಚರಣೆಯ ಪ್ರಯುಕ್ತ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನ್ಯಾಯವಿಧಿ ಶಾಸ್ತ್ರ ತಜ್ಞ ಡಾ. ರಮೇಶ್ ಕುಂದರ್ ಅವರನ್ನು ಹೊಸ ಶವಗಾರದ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನ್ಯಾಯವಿಧಿ ಶಾಸ್ತ್ರ ತಜ್ಞರಾದ ಡಾ.ರಮೇಶ ಕುಂದರ್ ಅವರು, ತಮ್ಮ ವೃತ್ತಿ ಬದುಕಿನಲ್ಲಿ ಹತ್ತು ಸಾವಿರಕ್ಕೂ ಅಧಿಕ ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕ್ಲಪ್ತ ಸಮಯದಲ್ಲಿ ನಾಗರಿಕ ಸೇವೆಯನ್ನು ಪ್ರಾಮಾಣಿಕವಾಗಿ ನೀಡುತ್ತಿರುವರು, ವೈದ್ಯರ ಅನನ್ಯ ಸೇವೆಯ ಬಗ್ಗೆ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು […]

ಬೈಂದೂರು: ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯ ಬೈಂದೂರು ತಾಲ್ಲೂಕಿನ ಕೇಂದ್ರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಮೂರು‌ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿದೆ. ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಈಕೆಯನ್ನು ಜೂ. 30ರಂದು ಕೊರೊನಾ ಪರೀಕ್ಷೆ ಒಳಪಡಿಸಲಾಗಿತ್ತು. ಮುಂಬೈನಿಂದ ಬಂದವರಿಂದ ಸೋಂಕು ತಗುಲಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಈವರೆಗೆ ಸೋಂಕು ಯಾವ ರೀತಿ ತಗುಲಿದೆ ಎನ್ನುವುದು ಖಚಿತಗೊಂಡಿಲ್ಲ. ಈ ವಿದ್ಯಾರ್ಥಿನಿ ಈಗಾಗಲೇ […]