ಎಂಟು ಪೊಲೀಸರನ್ನು ಹತ್ಯೆಗೈದಿದ್ದ ರೌಡಿ ವಿಕಾಸ್ ದುಬೆ ದೇವಾಲಯದಲ್ಲಿ ಬಂಧನ

ಭೋಪಾಲ್: ಎಂಟು ಮಂದಿ ಪೊಲೀಸರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ವಿಕಾಸ್ ದುಬೆಯನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಉಜ್ಜಯನಿ ದೇವಾಲಯವೊಂದರಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ. ನಿನ್ನೆ ಪೊಲೀಸರ ಕಾರ್ಯಾಚರಣೆಯಲ್ಲಿ ವಿಕಾಸ್ ದುಬೆಯ ಇಬ್ಬರು ಸಹಚರರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು.

ಫೇಸ್ ಬುಕ್ ಸಹಿತ 89 ಆ್ಯಪ್ ಗಳನ್ನು ತೆಗೆಯುವಂತೆ ಯೋಧರಿಗೆ ಭಾರತೀಯ ಸೇನೆ ಸೂಚನೆ

ಫೇಸ್ ಬುಕ್ ಸಹಿತ 89 ಆ್ಯಪ್ ಗಳನ್ನು ತೆಗೆಯುವಂತೆ ಯೋಧರಿಗೆ ಭಾರತೀಯ ಸೇನೆ ಸೂಚನೆ ನವದೆಹಲಿ: ಭಾರತೀಯ ಸೇನೆ ಸಿಬ್ಬಂದಿಗೆ ಫೇಸ್‌ಬುಕ್‌, ಪಬ್‌ಜಿ, ಟಿಕ್‌ಟಾಕ್‌ ಸೇರಿದಂತೆ 89 ಮೊಬೈಲ್‌ ಅಪ್ಲಿಕೇಷನ್‌ಗಳನ್ನು ತೆಗೆದು ಹಾಕುವಂತೆ ಸೂಚನೆ ನೀಡಿದೆ. ಮಾಹಿತಿ ಸೋರಿಕೆ ತಡೆಯುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರ ಈಗಾಗಲೇ ಟಿಕ್‌ಟಾಕ್‌, ಕ್ಯಾಮ್‌ಸ್ಕ್ಯಾನರ್‌, ಯುಸಿ ನ್ಯೂಸ್, ಶೇರ್‌ಇಟ್‌ ಸೇರಿದಂತೆ ಚೀನಾ ಮೂಲದ 59 ಆ್ಯಪ್‌ಗಳನ್ನು ನಿಷೇಧಿಸಿದೆ. ಇದರ ಬೆನ್ನಲ್ಲೇ ಭಾರತೀಯ ಸೇನೆ ಚೀನಾ ಆ್ಯಪ್‌ಗಳನ್ನು ಒಳಗೊಂಡಂತೆ […]

ಚುರುಕುಗೊಂಡಿದೆ ಮುಂಗಾರು: ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನಲ್ಲಿ  ಜುಲೈ 9, 10ರಂದು ವ್ಯಾಪಕ ಮಳೆ ಸುರಿಯುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವ ಹಿನ್ನಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾದ್ಯತೆ ಇದ್ದು, ಆ ಭಾಗಗಳಲ್ಲಿ ಎರಡೂ ದಿನಗಳವರಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.  ಮೀನುಗಾರರು ಮುಂದಿನ ಐದು […]