ಉಡುಪಿ: ಶ್ರೀಕೃಷ್ಣ ಲೀಲೋತ್ಸವಕ್ಕೆ ಭರದ ಸಿದ್ಧತೆ; ಗುರ್ಜಿ ನೆಡುವ ಮುಹೂರ್ತ

ಉಡುಪಿ: ಸೆಪ್ಟೆಂಬರ್ 11ರಂದು ಉಡುಪಿ ಶ್ರೀಕೃಷ್ಣಮಠದ ರಥಬೀದಿಯಲ್ಲಿ ನಡೆಯುವ ಶ್ರೀಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ಪೂರ್ವತಯಾರಿಯ ಹಿನ್ನೆಲೆಯಲ್ಲಿ ಪರ್ಯಾಯ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯ ಮಾರ್ಗದರ್ಶನದಲ್ಲಿ ಇಂದು ರಥಬೀದಿಯಲ್ಲಿ ಗುರ್ಜಿ ನೆಡುವ ಮುಹೂರ್ತವನ್ನು ನೆರವೇರಿಸಲಾಯಿತು. ಮಠದ ದಿವಾನ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ, ಪಾರುಪತ್ಯ್ ಗಾರ ಮುದರಂಗಡಿ ಲಕ್ಷ್ಮೀಶ ಭಟ್, ಕೊಠಾರಿಗಳಾದ ಶ್ರೀರಮಣ ಆಚಾರ್ಯ ವ್ಯವಸ್ಥಾಪಕ ಗೋವಿಂದರಾಜ್, ಮೇಸ್ತ್ರಿ ಪದ್ಮನಾಭ ಮೇಸ್ತ್ರಿ, ಪ್ರದೀಪ್ ಕುಮಾರ್ ಮತ್ತು ಮಠದ ಸಿಬ್ಬಂದಿ ಉಪಸ್ಥಿತರಿದ್ದರು.

ಗಾಯಕ ಎಸ್ ಪಿಬಿಗೆ ಕೊರೊನಾ ನೆಗೆಟಿವ್; ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಚೆನ್ನೈ: ಇಲ್ಲಿನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಮಣ್ಯಂ ಅವರಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ. ನಮ್ಮ ತಂದೆಯ ಆರೋಗ್ಯ ಸ್ಥಿರವಾಗಿದೆ. ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಈಗ ಅವರು ಆರಾಮದಿಂದ ಇದ್ದಾರೆ ಎಂದು ಎಸ್‌ಪಿಬಿ ಪುತ್ರ ಚರಣ್ ಹೇಳಿರುವುದಾಗಿ ಪಿಆರ್‌ಒ ನಿಖಿಲ್ ಮುರುಗನ್ ತಿಳಿಸಿದ್ದಾರೆ. ಎಸ್‌ಪಿಬಿ ಅವರು ಈಗಲೂ ಐಸಿಯುನಲ್ಲಿ ವೆಂಟಿಲೇಟರ್ ಮತ್ತು ಇಸಿಎಂಒ ಸಹಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.