ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸಾಕಷ್ಟು ಸುಧಾರಿಸಿದೆ: ಪುತ್ರ ಚರಣ್‌ ಮಾಹಿತಿ

ಚೆನ್ನೈ: ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡಿದೆ. ಅವರು ನಿನ್ನೆಗಿಂತಲೂ ಇಂದು ವೈದ್ಯರ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ’ ಎಂದು ಎಸ್‌ಪಿಬಿ ಪುತ್ರ ಎಸ್‌.ಪಿ. ಚರಣ್‌ ವಿಡಿಯೊ ಸಂದೇಶದ ಮೂಲಕ ತಿಳಿಸಿದ್ದಾರೆ. ಆಗಸ್ಟ್‌ 5ರಂದು ಕೋವಿಡ್‌ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಎಸ್‌ಪಿಬಿ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಅವರ ಕೋವಿಡ್ ವರದಿ ಕೂಡ ನೆಗೆಟಿವ್ ಬಂದಿತ್ತು.

ಕೋಲುಮಂಡೆ ಹಾಡನ್ನು ಯೂಟ್ಯೂಬ್ ನಿಂದ ಡಿಲೀಟ್ ಮಾಡಿ, ಕ್ಷಮೆಯಾಚಿಸಿದ ರ‍್ಯಾಪ್ ಸಿಂಗರ್ ಚಂದನ್‌ ಶೆಟ್ಟಿ

ಬೆಂಗಳೂರು: ರ‍್ಯಾಪ್ ಸಿಂಗರ್ ಚಂದನ್‌ ಶೆಟ್ಟಿ ಬಿಡುಗಡೆ ಮಾಡಿದ್ದ ‘ಕೋಲುಮಂಡೆ’ ರ‍್ಯಾಪ್ ಸಾಂಗ್ ಈಗ ವಿವಾದಕ್ಕೆ ಕಾರಣವಾಗಿದೆ. ಮೂರು ದಿನಗಳ ಹಿಂದೆ ಆನಂದ್‌ ಆಡಿಯೋ ಕಂಪೆನಿಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಈ ಹಾಡನ್ನು ಚಂದನ್‌ ಶೆಟ್ಟಿ ಬಿಡುಗಡೆ ಮಾಡಿದ್ದರು. ಈ ಹಾಡಿನಲ್ಲಿ ಶಿವಶರಣೆ ಸಂಕಮ್ಮ ಅವರಿಗೆ ಅವಮಾನ ಮಾಡಲಾಗಿದೆ. ಭಕ್ತಿಗೀತೆಯನ್ನು ತಿರುಚುವ ಮೂಲಕ ಮಾದಪ್ಪನ ಭಕ್ತರ ಮನಸ್ಸಿಗೆ ನೋವುಂಟು ಮಾಡಲಾಗಿದೆ ಎಂದು ಫೇಸ್‌ಬುಕ್‌ನ ಶ್ರೀಮಲೆಮಹದೇಶ್ವರ ಸ್ವಾಮಿ ಗ್ರೂಪ್‌ನಲ್ಲಿ ಚಾಮರಾಜನಗರ ಜಿಲ್ಲೆಯ ಹಲವು ಯುವಕರು ಚಂದನ್ ವಿರುದ್ಧ ಆಕ್ರೋಶ ಮೊಳಗಿಸಿದ್ದಾರೆ. […]

ಕೊರೊನಾದಿಂದ ಆಗುತ್ತಿರುವ ಸಮಸ್ಯೆಗಳನ್ನು ನಿಭಾಯಿಸಲು ಜಿಲ್ಲಾಡಳಿತ ವಿಫಲ: ವಿಶ್ವಾಸ್ ಅಮೀನ್

ಉಡುಪಿ: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ನಿಭಾಯಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಆರೋಪಿಸಿದ್ದಾರೆ. ಕೊರೊನಾ ಸಮಸ್ಯೆ ಎದುರಾಗಿನಿಂದಲೂ ಜಿಲ್ಲೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಕೊರೊನಾ ನೆಪದಲ್ಲಿ ಜನರಿಗೆ ದೌರ್ಜನ್ಯ, ದಬ್ಬಾಳಿಕೆ ಮಾಡಲಾಗುತ್ತಿದೆ. ಇದಕ್ಕೆ ರಕ್ಷಾ ಸಂಶಯಾಸ್ಪದ ಸಾವಿನ ಪ್ರಕರಣ, ಕೊರೊನಾ ಪಾಸಿಟಿವ್ ಸುಳ್ಳು ವರದಿ ಹಾಗೂ ಕುಂದಾಪುರದ ವ್ಯಕ್ತಿಯ ಮೃತ ದೇಹ ಅದಲು ಬದಲು ಪ್ರಕರಣಗಳೇ ಸ್ಪಷ್ಟ ನಿದರ್ಶನಗಳು ಎಂದು ದೂರಿದ್ದಾರೆ. ಜಿಲ್ಲಾಡಳಿತದ, […]

ಕರ್ನಾಟಕದ ಸಿಂಗಂ ಖ್ಯಾತಿಯ ಕೆ. ಅಣ್ಣಾಮಲೈ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸಾಮಿ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು.  

ರಸ್ತೆ ಅಪಘಾತ: ಗಾಯಾಳು ಶಿರ್ವಾದ ಗೌರವ್ ಪುತ್ರನ್ ಮೃತ್ಯು

ಶಿರ್ವಾ: ಇಲ್ಲಿನ ಸೂಡಾ ದೇವಸ್ಥಾನದ ಸಮೀಪ ಆ. 22ರಂದು ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿರ್ವಾದ ಗೌರವ್ ಪುತ್ರನ್ (28) ಅವರು ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಂದು ರಾತ್ರಿ ಸ್ನೇಹಿತ ಹರೀಶ್ ಜತೆಗೆ ಗೌರವ್ ಬೈಕ್ ನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಅಪಘಾತಕ್ಕೀಡಾಗಿತ್ತು. ಸೂಡಾ ದೇವಸ್ಥಾನದ ಬಳಿ ಬೈಕ್ ರಸ್ತೆಗೆ ಅಪ್ಪಳಿಸಿದ ಪರಿಣಾಮ ಗೌರವ್ ನ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. […]