ಹಿರ್ಗಾನ ಗೇರುಬೀಜ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಕೋಟ್ಯಾಂತರ ಮೌಲ್ಯದ ಸೊತ್ತು ಬೆಂಕಿಗೆ ಆಹುತಿ

ಕಾರ್ಕಳ: ಹಿರ್ಗಾನ ಗ್ರಾಮದ ಹಾರ್ಜಡ್ಡು ಸಮೀಪದ ಗೇರುಬೀಜ ಕಾರ್ಖಾನೆಯೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಕೋಟ್ಯಾಂತರ ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿದೆ. ಪ್ರಕಾಶ್ ಪುತ್ರನ್ ಎಂಬುವವರಿಗೆ ಸೇರಿದ ಮಾರುತಿ ಇಂಡಸ್ಟ್ರೀಸ್ ಫ್ಯಾಕ್ಟರಿಯ ಎರಡು ಈಚರ್ ಲಾರಿಗಳು ಸೇರಿದಂತೆ ಸುಮಾರು ಎರಡು ಕೋಟಿಗೂ ಹೆಚ್ಚಿನ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಅಗ್ನಿಶಾಮಕದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಬಜಗೋಳಿ: ‘ಛಾಯೆ’ ತುಳು ಕಿರುಚಿತ್ರಕ್ಕೆ ಮುಹೂರ್ತ

ಬಜಗೋಳಿ: ಕೀರ್ತನ್ ಸಾಲಿಯಾನ್ ನಿರ್ದೇಶನದ ‘ಛಾಯೆ’ ತುಳು ಕಿರುಚಿತ್ರದ ಮುಹೂರ್ತ ಸಮಾರಂಭ ಈಚೆಗೆ ಬಜಗೋಳಿಯ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿತು. ಅಶು ಬಜಗೋಳಿ ಮತ್ತು ಕಿರಣ್ ನೆಲ್ಲಿಗುಡ್ಡೆ ಅವರ ಸಹಕಾರದೊಂದಿಗೆ ನಿರ್ಮಿಸಲಾಗುತ್ತಿರುವ ಈ ಕಿರುಚಿತ್ರಕ್ಕೆ ಹರಿಚಂದ್ರ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸುರೇಶ್ ಸಾಲಿಯಾನ್ ಬಜಗೋಳಿ, ಉಮೇಶ್ ಸಾಲಿಯಾನ್ ಬಜಗೋಳಿ, ಪ್ರವೀಣ್ ಭಂಡಾರಿ, ಪ್ರಶಾಂತ್ ಹರಿಕಂಡಿಗೆ, ರಾಜೇಶ್, ಸಚಿನ್ ಮಲ್ಯ, ಅಕ್ಷಯ್ ಕುಮಾರ್, ಸುನೀತ್ ಬಜಗೋಳಿ, ಕಿಶನ್ ಸಾಲಿಯಾನ್, ಲತೇಶ್ ಬಜಗೋಳಿ, ಅಭಿ ಬಜಗೋಳಿ, ವಿನಾಯಕ್ […]
ರಕ್ಷಾ ಸಾವಿನ ಪ್ರಕರಣ: ತಪ್ಪಿತಸ್ಥ ಆಸ್ಪತ್ರೆಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ವೀಣಾ ಶೆಟ್ಟಿ ಆಗ್ರಹ

ಉಡುಪಿ: ಇಂದಿರಾನಗರ ನಿವಾಸಿ ರಕ್ಷಾ ಸಂಶಯಾಸ್ಪದ ಸಾವಿನ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ತಪ್ಪಿತಸ್ಥ ಆಸ್ಪತ್ರೆಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾದ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ಒತ್ತಾಯಿಸಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇಂದು ಬೆಳಿಗ್ಗೆ 11ಗಂಟೆಗೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. 2019 ರ ಮೇ ತಿಂಗಳಲ್ಲಿ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರು ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿಹಬ್ಬಿತ್ತು. ಅಲ್ಲದೆ ಹೊಸ ಪಕ್ಷ ಕಟ್ಟುತ್ತಾರೆ ಎಂಬ ಸುದ್ದಿಯು ಕೇಳಿಬಂದಿತ್ತು. ಈಗ ಅವರು ಅಧಿಕೃತವಾಗಿ ಬಿಜೆಪಿ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಮುಂಬರುವ […]