ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್ : ಮೃತದೇಹವನ್ನು ಆಸ್ಪತ್ರೆಗೆ ಕರೆತಂದ ವೇಳೆ ಸುಶಾಂತ್ ಸಿಂಗ್ ಒಂದು ಕಾಲು ಮುರಿದಿತ್ತು.?

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಸುಶಾಂತ್‌ ಸಿಂಗ್‌ ಮೃತದೇಹವನ್ನು ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಅವರ ಒಂದು ಕಾಲು ಮುರಿದಿತ್ತು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಮುಂಬೈನ ಕೂಪರ್ ಆಸ್ಪತ್ರೆಗೆ ಸುಶಾಂತ್ ಸಿಂಗ್ ಮೃತದೇಹ ಕರೆತಂದ ವೇಳೆ ಅವರ ಒಂದು ಕಾಲು ಮುರಿದಿತ್ತು. ಶವ ಪರಿಶೀಲಿಸಿದ್ದ ಹಿರಿಯ ವೈದ್ಯರು ದೇಹದಲ್ಲಿರುವ ಗಾಯದ ಗುರುತುಗಳನ್ನು ನೋಡಿ ಇದು ಕೊಲೆ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಪೊಲೀಸರು ಸುಶಾಂತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]

ಮಹಿಳೆಯರಿಗೊಂದು ಸದವಕಾಶ: ಮಾಂಟೇಸ್ಸರಿ/ ನರ್ಸರಿ ಟೀಚರ್ ಟ್ರೈನಿಂಗ್ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಕಳೆದ 7 ವರ್ಷಗಳಿಂದ ಉಡುಪಿಯ ಕುಂಜಿಬೆಟ್ಟಿನ ಶ್ರೀಶಾರದಾ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಮಹಿಳೆಯರಿಗೆ ಮಾಂಟೇಸರಿ, ನರ್ಸರಿ ಟೀಚರ್ ಟ್ರೈನಿಂಗ್ ನಡೆಸುತ್ತಿದೆ. ಮಕ್ಕಳನ್ನು ಸಹಜವಾಗಿ 2.5 – 3 ವರ್ಷಗಳಿಂದ ಸರ್ಕಾರಿ ಶಾಲೆ ಕಲಿಸಲಾಗುತ್ತದೆ. ಮಾಂಟೆಸ್ಸರಿ ಬೋಧನೆಯೂ ಮಗುವಿನ ಎಲ್ಲಾ ಅಂಶಗಳನ್ನು ಬೆಳೆಸುವ ಕಡೆಗೆ ವ್ಯವಹರಿಸುತ್ತದೆ. ವಿಶೇಷ ಕಾರ್ಯಾಗಾರಗಳು ಮತ್ತು ವಿಚಾರಗೋಷ್ಠಿಗಳನ್ನು ಈ ತರಬೇತಿಯ ಅವಧಿಯಲ್ಲಿ ಒಳಗೊಂಡಿದೆ. ಮಾಂಟೆಸ್ಸರಿ ವಿಧಾನದ ಸಲಕರಣೆಗಳನ್ನು ಉಪಯೋಗಿಸುವುದು ಮತ್ತು ಮಗುವಿನ ದೈಹಿಕ ಭಾವನಾತ್ಮಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಅನುಕೂಲವಾಗುವ ಬೋಧನಾ […]

ಕೊರೊನಾದ ಹುಟ್ಟೂರು ಚೀನಾದ ವುಹಾನ್ ನಲ್ಲಿ ಸೆ. 1ರಿಂದ ಶಾಲೆಗಳು ಆರಂಭ

ವುಹಾನ್: ಕೊರೊನಾದ ಹುಟ್ಟೂರು ಚೀನಾ ದೇಶದ ವುಹಾನ್ ನಗರದಲ್ಲಿ ಸೆ. 1ರಿಂದ ಶಾಲೆಗಳು ಆರಂಭವಾಗಲಿದೆ. ನಗರದ 2,842 ಶಾಲೆಗಳು ಏಕಕಾಲದಲ್ಲಿ ಪುನರಾರಂಭಗೊಳ್ಳಲಿದೆ. ಶಾಲೆಗಳನ್ನು ಆರಂಭಿಸುವಂತೆ ಅಲ್ಲಿನ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸೆ. 1ರಿಂದ 1.4 ಮಿಲಿಯನ್ ವಿದ್ಯಾರ್ಥಿಗಳು ಶಾಲೆಗೆ ಬರಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಐಪಿಎಲ್ ನಿಂದ ಹೊರನಡೆದ ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್‌ ಸುರೇಶ್ ರೈನಾ

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಆಲ್‌ರೌಂಡರ್‌ ಸುರೇಶ್ ರೈನಾ ಅವರು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಹೊರನಡೆದಿದ್ದಾರೆ. ಸುರೇಶ್ ರೈನಾ ವೈಯಕ್ತಿಕ ಕಾರಣಗಳಿಗಳಿಂದಾಗಿ ಭಾರತಕ್ಕೆ ಮರಳಿದ್ದಾರೆ. ಉಳಿದ ಐಪಿಎಲ್ ಋತುವಿನಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸುರೇಶ್ ಮತ್ತು ಅವರ ಕುಟುಂಬದ ಸಂಪೂರ್ಣ ಬೆಂಬಲಕ್ಕೆ ನಿಲ್ಲುತ್ತದೆ,’ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಟ್ವೀಟ್ ಮಾಡಿದ್ದಾರೆ. 33 ವರ್ಷದ ಆಟಗಾರ ರೈನಾ ಈ ತಿಂಗಳ ಆರಂಭದಲ್ಲಿ ದೋನಿ ಜತೆಯಲ್ಲಿ ಅಂತಾರಾಷ್ಟ್ರೀಯ […]

‘ಆದಿಪುರುಷ್’ ಚಿತ್ರದಲ್ಲಿ ಪ್ರಧಾನಿ ಮೋದಿ ನಟನೆ.?

ಹೈದರಬಾದ್: ‘ರಾಮಾಯಣ’ ಕಥೆಯನ್ನು ಇಟ್ಟಕೊಂಡು ನಿರ್ದೇಶಕ ಓಂ ರಾವುತ್‌ ‘ಆದಿಪುರುಷ್‌’ ಸಿನಿಮಾ ಮಾಡುತ್ತಿದ್ದು, ಇದರಲ್ಲಿ ನಟ ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು 3ಡಿ ತಂತ್ರಜ್ಞಾನದಡಿ ಹಿಂದಿ ಹಾಗೂ ತೆಲುಗಿನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಬಳಿಕ ಕನ್ನಡ, ತಮಿಳು, ಮಲಯಾಳ ಸೇರಿದಂತೆ ಕೆಲವು ವಿದೇಶಿ ಭಾಷೆಗಳಿಗೂ ಡಬ್‌ ಆಗಿ ಬಿಡುಗಡೆಯಾಗಲಿದೆ. 500 ಕೋಟಿ ರೂ. ವೆಚ್ಚದಡಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ‌.2022ಕ್ಕೆ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ನಟನೆ.? ಈ ನಡುವೆ ಚಿತ್ರತಂಡ ಅಚ್ಚರಿಯ […]