ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಸಿಸಿಬಿ ಪೊಲೀಸರಿಂದ ಇಂದ್ರಜಿತ್ ಲಂಕೇಶ್ ಗೆ ನೋಟಿಸ್ ಜಾರಿ

ಬೆಂಗಳೂರು:  ಸ್ಯಾಂಡಲ್‌ವುಡ್‌ನಲ್ಲಿ ಚಾಚಿಕೊಂಡಿರುವ ಡ್ರಗ್ಸ್ ಜಾಲದ ಬಗ್ಗೆ ಸಿಸಿಬಿ ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕಲು ಮುಂದಾಗಿದ್ದು, ಇದೀಗ ಮಾಹಿತಿ ಹಂಚಿಕೊಳ್ಳುವಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಸ್ಯಾಂಡಲ್ ವುಡ್ ನ ಹಲವು ನಟ ನಟಿಯರು ತೊಡಗಿಕೊಂಡಿದ್ದಾರೆ. ಅವರು ಡ್ರಗ್ಸ್ ಮಾರಾಟಮಾಡಿಯೇ ಐಷಾರಾಮಿ ಕಾರುಗಳಲ್ಲಿ ಸುತ್ತಾಡುತ್ತಿದ್ದಾರೆ. ಪೊಲೀಸರು ನನ್ನ ಬಳಿ ಕೇಳಿದರೆ ಎಲ್ಲ ವಿಚಾರವನ್ನು ಬಹಿರಂಗಪಡಿಸುವೆ ಎಂದು ಇಂದ್ರಜಿತ್ ಟಿವಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು. ಇದೀಗ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ […]

ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಟಿಯರೇ ಏಜೆಂಟ್: ಹೊಸ ಬಾಂಬ್ ಸಿಡಿಸಿದ ಇಂದ್ರಜಿತ್ ಲಂಕೇಶ್

ಬೆಂಗಳೂರು: ಡ್ರಗ್ಸ್ ಜಾಲದೊಂದಿಗೆ ಚಿತ್ರರಂಗದ 25ರಿಂದ 30 ಕಲಾವಿದರು ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ. ಪೊಲೀಸರು ವಿಚಾರಣೆಗೆ ಕರೆದರೆ ಎಲ್ಲವನ್ನೂ ಬಹಿರಂಗಪಡಿಸಿವೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ‌ ಸ್ಯಾಂಡಲ್ ವುಡ್ ನಟಿಯರು ಸೇರಿಕೊಂಡಿದ್ದಾರೆ. ಯಾವುದೇ ಹಿನ್ನೆಲೆ ಇಲ್ಲದ ನಟಿಯರೂ ಇದ್ದಾರೆ. ಇವರಲ್ಲಿ 18 ಜನ ಏಜೆಂಟ್ ಗಳೇ ಇರುವ ಬಗ್ಗೆ ಮಾಹಿತಿ ಇದೆ ಎಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಲಾಕ್ ಡೌನ್ ವೇಳೆ 4 ಕೋಟಿ ವಹಿವಾಟು: ಕೋವಿಡ್ […]

ಡ್ರಗ್ಸ್ ಜಾಲದಲ್ಲಿ ಸ್ಟಾರ್ ನಟ, ಸಂಗೀತ ನಿರ್ದೇಶಕ: ಎನ್ ಸಿಬಿ ಅಧಿಕಾರಿಗಳಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನಲ್ಲಿ ಸಕ್ರಿಯರಾಗಿದ್ದ ಡ್ರಗ್ಸ್ ಜಾಲದ ಕಿಂಗ್ ಪಿನ್ ಗಳು ಪೊಲೀಸರ ಖೆಡ್ಡಾಕ್ಕೆ ಬೀಳುತ್ತಿದ್ದಂತೆ ಕೆಲ ಸ್ಯಾಂಡಲ್ ವುಡ್ ನ ಸ್ಟಾರ್ ನಟ ನಟಿಯರು, ಸಂಗೀತ ನಿರ್ದೇಶಕರು ಹಾಗೂ ಡ್ಯಾನ್ಸರ್ ಗಳ ಕರಾಳಮುಖ ಬಹಿರಂಗ ಆಗುತ್ತಿದೆ. ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ (ಎನ್‌ಸಿಬಿ) ಅಧಿಕಾರಿಗಳು ಡ್ರಗ್ಸ್ ಕಿಂಗ್ ಪಿನ್ ಗಳಾದ ಡಿ. ಅನಿಕಾ, ಮೊಹಮ್ಮದ್ ಅನೂಪ ಹಾಗೂ ರಾಜೇಶ್ ರವೀಂದ್ರನ್ ಎಂಬುವವರನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಂತೆ ಸ್ಯಾಂಡಲ್ ವುಡ್ ನ ಕರಾಳಮುಖ ಒಂದೊಂದಾಗಿ ಕಳಚಿ ಬೀಳುತ್ತಿದೆ. […]

ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್ ಮಾರ್ಟಂ ಯಾಕೆ ಆಗಿಲ್ಲ: ಮಾಡಿದ್ರೆ ಡ್ರಗ್ಸ್ ಜಾಲದ ಸತ್ಯ ಬಹಿರಂಗ – ಇಂದ್ರಜಿತ್ ಲಂಕೇಶ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ ಗಳಾದ ಡಿ. ಅನಿಕಾ, ಮೊಹಮ್ಮದ್ ಅನೂಪ ಹಾಗೂ ರಾಜೇಶ್ ರವೀಂದ್ರನ್ ಪೊಲೀಸರ ಬಲೆಗೆ ಬೀಳುತ್ತಿದ್ದಂತೆ ಸ್ಯಾಂಡಲ್ ವುಡ್ ನಟ ನಟಿಯರಲ್ಲಿ ನಡುಕ ಶುರುವಾಗಿದೆ. ಈ ನಡುವೆ ಇಂದು ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಇತ್ತೀಚೆಗೆ ಮೃತಪಟ್ಟ ಸ್ಯಾಂಡಲ್ ವುಡ್ ನಟ ಪೋಸ್ಟ್ ಮಾರ್ಟಂ ಯಾಕೆ ಮಾಡಿಲ್ಲ. ಮಾಡಿದ್ರೆ ಇಂದು ಪೊಲೀಸರು ಪತ್ತೆಹಚ್ಚಿರುವ ಡ್ರಗ್ಸ್ ಜಾಲದಲ್ಲಿ ಯಾರೆಲ್ಲ ಇದ್ದಾರೆ ಎಂಬುವುದು ಬಹಿರಂಗ ಆಗುತ್ತಿತ್ತು. ಹಾಗೆ ಯಾರೆಲ್ಲ […]

ಪ್ರಸಿದ್ಧ ಬೆಳ್ಳಿ ಕುಶಲಕರ್ಮಿ ಅಲೆವೂರು ನಾರಾಯಣ ಸೇರಿಗಾರ್ ನಿಧನ

ಅಲೆವೂರು: ಪ್ರಸಿದ್ಧ ಬೆಳ್ಳಿ ಕುಶಲಕರ್ಮಿ ‘ಬೊಳ್ಳಿ ನಾರಾಯಣ’ ಖ್ಯಾತಿಯ ಅಲೆವೂರು ನಾರಾಯಣ ಸೇರಿಗಾರ್ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಇವರು ದೈವಸ್ಥಾನಗಳ ಭೂತಾರಾಧನೆ ಪರಿಕರಗಳನ್ನು ಬೆಳ್ಳಿ ಮೂಲಕ ನಿರ್ಮಿಸಿ ರಾಜ್ಯಾದ್ಯಂತ ಪ್ರಸಿದ್ಧರಾಗಿದ್ದರು. ಇವರ ಅಪ್ರತಿಮ ಸಾಧನೆಗೆ ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿಯು ಲಭಿಸಿದೆ.