ಉಡುಪಿ: ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಸೌಹಾರ್ದತೆ

ಉಡುಪಿ: ಕೊರೊನಾದಿಂದ ಮೃತಪಟ್ಟ ಕ್ರಿಶ್ಚಿಯನ್ ಮಹಿಳೆಯೊಬ್ಬರ ಅಂತ್ಯಕ್ರಿಯೆಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಮೊಗವೀರ ಯುವ ಸಂಘಟನೆ ಮತ್ತು ಪಾಪ್ಯುಲರ್ ಫ್ರಾಂಟ್ ಆಫ್ ಇಂಡಿಯಾ ಕಾರ್ಯಕರ್ತರು ನೆರವೇರಿಸುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ಬಳ್ಳಾರಿಯ ಕ್ರಿಶ್ಚಿಯನ್ ಸಮುದಾಯದ ಮಹಿಳೆಯೊಬ್ಬರು ಆಗಸ್ಟ್ 29 ರಂದು ಮೃತಪಟ್ಟಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಚಿಕಿತ್ಸೆಗೆ ತಮ್ಮಲ್ಲಿದ್ದ ಹಣವನ್ನೆಲ್ಲವನ್ನು ಖರ್ಚು ಮಾಡಿದ್ದು, ಕೊನೆಗೆ ತಾಯಿಯ ಮೃತ ದೇಹವನ್ನು ತಮ್ಮ ಹುಟ್ಟೂರಿಗೆ ಒಯ್ಯಲು ಅಥವಾ ಇಲ್ಲಿಯೇ ಅಂತ್ಯ ಕ್ರಿಯೆ […]

ಚಾರ್ಮಾಡಿ: ದಿನದ 24 ಗಂಟೆಗಳ ಕಾಲ ಲಘು ವಾಹನ ಸಂಚಾರಕ್ಕೆ ಅವಕಾಶ

ಚಿಕ್ಕಮಗಳೂರು: ಮಳೆ ಕಾರಣದಿಂದ ಚಾರ್ಮಾಡಿ ಘಾಟಿ ಮಾರ್ಗದಲ್ಲಿ ರಾತ್ರಿ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು  ತೆರವುಗೊಳಿಸಲಾಗಿದ್ದು, ಇಂದಿನಿಂದ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಳೆ ಕ್ಷೀಣಿಸಿದ್ದು, ಮಂಜು ಮುಸುಕು ವಾತಾವರಣವೂ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್‌ ನಿರ್ಬಂಧ ತೆರವುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಕ್ರಮ ಗೋ ಸಾಗಾಟ: ಇಬ್ಬರು ಆರೋಪಿಗಳ ಬಂಧನ

ಕುಂದಾಪುರ: ಇಲ್ಲಿನ ಕಾವ್ರಾಡಿ ಗ್ರಾಮದ ಜನತಾ ಕಾಲೋನಿ ಮಣ್ಣು ರಸ್ತೆಯಲ್ಲಿ ಬೊಲೆರೊ ವಾಹನದಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಇಂದು ಮುಂಜಾನೆ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಓರ್ವ ತಪ್ಪಿಸಿಕೊಂಡು ಪರಾರಿಯಾಗಿದ್ದೇನೆ. ಬಂಧಿತ ಆರೋಪಿಗಳನ್ನು ಮುತಾಯಬ್ ಹಾಗೂ ಕಂಡ್ಲೂರಿನ ರಿದಾನ್ ಎಂದು ಗುರುತಿಸಲಾಗಿದೆ. ಕಂಡ್ಲೂರಿನ ಸಮೀರ ಎಂಬಾತ ಪರಾರಿಯಾಗಿದ್ದಾನೆ. ಧೂಪದಕಟ್ಟೆ ಕಡೆಯಿಂದ ಒಳರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಅದನ್ನು ಹಿಂಬಾಲಿಸಿಕೊಂಡು ಬೊಲೆರೊ ವಾಹನ ವೇಗವಾಗಿ ಬಂದಿದ್ದು, ಪೊಲೀಸರು ಅಡ್ಡಹಾಕಿ […]

ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಗೆ ಅಗ್ರಮಾನ್ಯ ಶ್ರೇಯಾಂಕ: ಈ ಸಾಲಿನ ದಾಖಲಾತಿ ಆರಂಭ

ಬ್ರಹ್ಮಾವರ: ಗ್ರಾಮೀಣ ಪ್ರದೇಶದ ಯುವಕರಿಗೆ ಕೌಶಲ್ಯಾಧಾರಿತ ವೃತ್ತಿ ತರಬೇತಿಯನ್ನು ನೀಡುತ್ತಿರುವ ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆಗೆ ಜಿಲ್ಲೆಯಲ್ಲೇ ಅಗ್ರಮಾನ್ಯ ಗ್ರೇಡಿಂಗ್ ಲಭಿಸಿದೆ. ಕೇಂದ್ರ ಸರ್ಕಾರದ ಡಿಜಿಟಿ ಇಲಾಖೆಯಿಂದ ನಡೆಸಿದ 2019-20ರ ಗ್ರೇಡಿಂಗ್ ಪರಿವೀಕ್ಷಣೆಯಲ್ಲಿ ಸಂಸ್ಥೆಯು ಉಡುಪಿ ಜಿಲ್ಲೆಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಅಧೀನದಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಮಟ್ಟದ ಕೌಶಲ ತರಬೇತಿಯನ್ನು ರಾಜ್ಯ ಸರಕಾರದ ಕೌಶಲ ತರಬೇತಿ ಮತ್ತು ಉದ್ಯೋಗ ಇಲಾಖೆಯ ಅಧೀನದಲ್ಲಿ ಕಾರ್ಯ […]

ಸುಶಾಂತ್ ಸಿಂಗ್ ಸಂಶಯಾಸ್ಪದ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಂಶಯಾಸ್ಪದ ಸಾವಿನ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಮಾದಕ ವಸ್ತು ನಿಯಂತ್ರಣ ಇಲಾಖೆ ಕ್ರಿಮಿನಲ್ ಕೇಸ್ ದಾಖಲಿಸಿದೆ. ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ರಿಯಾ ಚಕ್ರವರ್ತಿ ಸದ್ಯ ಸಿಬಿಐ ತನಿಖೆ ಎದುರಿಸುತ್ತಿದ್ದಾಳೆ. ಕಳೆದ ನಾಲ್ಕು ದಿನಗಳಿಂದ ಸಿಬಿಐ ಅಧಿಕಾರಿಗಳಿಂದ ತೀವ್ರ ವಿಚಾರಣೆಗೆ ಒಳಗಾಗುತ್ತಿದ್ದು, ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಈ ನಡುವೆ ರಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಡ್ರಗ್ಸ್ ಮಾಫಿಯಾದ ನಂಟು ಸುತ್ತಿಕೊಂಡಿದೆ. ಇಡಿ […]