ಡ್ರಗ್ಸ್ ಮಾಫಿಯಾದೊಂದಿಗೆ ನಂಟು: ನಟಿ‌ ರಾಗಿಣಿ ದ್ವಿವೇದಿ ಬಂಧನ

ಬೆಂಗಳೂರು: ಡ್ರಗ್ಸ್ ಜಾಲದ ನಂಟು ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಖ್ಯಾತ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿರುವ ರಾಗಿಣಿ ಅವರ ಫ್ಲ್ಯಾಟ್ ಮೇಲೆ ದಾಳಿ ಮಾಡಿ, ಸತತ ನಾಲ್ಕು ಗಂಟೆಗಳ ಕಾಲ ತೀವ್ರ ವಿಚಾರ ನಡೆಸಿದ್ದರು. ಬಳಿಕ ಮತ್ತಷ್ಟು ವಿಚಾರಣೆಗಾಗಿ ರಾಗಿಣಿಯನ್ನು ತಮ್ಮ ವಶಕ್ಕೆ ಪಡೆದಿದ್ದು, ತಮ್ಮೊಂದಿಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದರು. ಮಧ್ಯಾಹ್ನ 12 ಗಂಟೆಯಿಂದ ಸತತ 6 ಗಂಟೆಯಿಂದ ತೀವ್ರ […]

ಉದ್ಯೋಗದ ದಾರಿ ತೋರಿಸ್ತಿದೆ, ನೂರಾರು ವಿದ್ಯಾರ್ಥಿಗಳಿಗೆ ಬದುಕು ಕಟ್ಟಿ ಕೊಡ್ತಿದೆ “ಆ್ಯಂಬಿಟ್‍ ಆ್ಯನಿಮೇಶನ್ಸ್”

ಗ್ರಾಫಿಕ್ ಡಿಸೈನ್, ವಿಡಿಯೋ ಎಡಿಟಿಂಗ್, ಆನಿಮೇಶನ್ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ, ಕ್ರಿಯಾಶೀಲವಾಗಿ ಏನಾದರೂ ಮಾಡಬೇಕು ಎನ್ನುವವರಿಗೆ ಆ್ಯಂಬಿಟ್‍ ಆ್ಯನಿಮೇಶನ್ಸ್”ಸಂಸ್ಥೆ ಭರವಸೆಯ ಬಾಗಿಲು. ಯಾಕೆ ಅಂತೀರಾ? ಗ್ರಾಫಿಕ್ ಡಿಸೈನ್, ವಿಡಿಯೋ ಎಡಿಟಿಂಗ್,ಆನಿಮೇಶನ್ ಕ್ಷೇತ್ರದಲ್ಲಿ ಭರ್ಜರಿ ತರಬೇತಿ ನೀಡಿ ಉದ್ಯೋಗ ಕೊಡುವ ಸಂಸ್ಥೆಯಿದು. ಈಗಾಗಲೇ ನೂರಾರು ಮಂದಿಗೆ ಇಂತಹ ಕ್ರಿಯಾಶೀಲ ಕ್ಷೇತ್ರದಲ್ಲಿ ಬದುಕು ಕಟ್ಟಿಕೊಟ್ಟ ಹೆಗ್ಗಳಿಕೆ ಈ ಸಂಸ್ಥೆಯದ್ದು. ಕಲಿಕೆ ಎಂದರೆ ಬರೀ ಇಂಜಿನಿಯರಿಂಗ್, ಸಿಎ, ಬಿಕಾಂ ಮಾತ್ರವಲ್ಲ ಲಕ್ಷಾಂತರ ವೇತನ ನೀಡುವ ಆನಿಮೇಶನ್, ಗ್ರಾಫಿಕ್ ಡಿಸೈನಿಂಗ್ ಕ್ಷೇತ್ರದಲ್ಲೂ ಉದ್ಯೋಗ […]

ಸಿಎಸ್‌ಕೆಗೆ ಬಿಗ್ ಶಾಕ್: ಐಪಿಎಲ್‌ನಿಂದ ಹೊರನಡೆದ ಮತ್ತೊಬ್ಬ ಸ್ಟಾರ್ ಆಟಗಾರ

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ಪ್ರಮುಖ ಸ್ಪಿನ್ನರ್ ಹರಭಜನ್ ಸಿಂಗ್ ವೈಯಕ್ತಿಕ ಕಾರಣ ಮುಂದಿಟ್ಟು ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಸ್ಪೋರ್ಟ್‌ ಸ್ಟಾರ್ ವರದಿ ಮಾಡಿದೆ. ಐಪಿಎಲ್‌ ನಿಯಮಗಳ ಪ್ರಕಾರ, ಕೊರೊನಾದ ಈ ಸಂದರ್ಭದಲ್ಲಿ ಯಾವುದೇ ಆಟಗಾರ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಒಮ್ಮೆ ಅಧಿಕಾರಿಗಳಿಗೆ ತಿಳಿಸಿದರೆ ಮತ್ತೆ ಅವರಿಗೆ ಪಾಲ್ಗೊಳ್ಳಲು ಅವಕಾಶವಿಲ್ಲ. ಈಗಾಗಲೇ ತಂಡದ ಪ್ರಮುಖ ಆಟಗಾರರಾದ ದೀಪಕ್ ಚಾಹರ್ ಮತ್ತು ರುತುರಾಜ್ ಗಾಯಕ್‌ವಾಡ್ ಕೊರೊನಾ […]

ವಂಚನೆ ಆರೋಪ: ಮಾಜಿ ಪುರಸಭಾ ಸದಸ್ಯ, ಕಾಂಗ್ರೆಸ್‌ ಮುಖಂಡ ಸಂದೀಪ ಪೂಜಾರಿ ಬಂಧನ

ಕುಂದಾಪುರ: ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ ಆರೋಪದಡಿ ಕುಂದಾಪುರದ ಮಾಜಿ ಪುರಸಭಾ ಸದಸ್ಯ, ಕಾಂಗ್ರೆಸ್‌ ಮುಖಂಡ ಸಂದೀಪ ಪೂಜಾರಿ ಕೋಡಿ (34) ಎಂಬಾತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಸಂದೀಪ್‌ ಪೂಜಾರಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯೊಬ್ಬರಿಗೆ ಅಂಚೆ ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇನೆ. ನಿನ್ನನ್ನು ಮದುವೆಯಾಗುತ್ತೇನೆಂದು ನಂಬಿಸಿ ಹಣ ಪಡೆದಿದ್ದನು. ಆದರೆ ಈಗ ಆತ ಕೆಲಸವನ್ನು ಕೊಡಿಸಲಿಲ್ಲ. ಹಣವನ್ನು ಹಿಂತಿರುಗಿಸಲಿಲ್ಲ. ಕೇಳಿದರೆ ಬೈದು ಜಾತಿ ನಿಂದನೆ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ […]

ಮುಳುವಾಯಿತು ಗಾಂಜಾ ಕುರಿತ ಹೇಳಿಕೆ: ನಟಿ ನಿವೇದಿತಾ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಅಂಟಿರುವ ಡ್ರಗ್ಸ್ ಜಾಲದ ನಂಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಸಿಬಿ ಪೊಲೀಸರ ತನಿಖೆ ಚುರುಕು ಪಡೆಯುತ್ತಿದ್ದಂತೆ ಚಂದನವನದ ಒಬ್ಬೊಬ್ಬರೇ ನಟಿಮಣಿಯರ ಡ್ರಗ್ಸ್ ನಶೆ ಇಳಿಯುತ್ತಿದೆ. ಇದೀಗ ಮತ್ತೊಬ್ಬ ನಟಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎರಡು ದಿನಗಳ ಹಿಂದೆ ಗಾಂಜಾ ತುಳಸಿಯಷ್ಟೇ ಶ್ರೇಷ್ಠ ಎಂದು ಹೇಳಿಕೆ ನೀಡಿದ ನಟಿ ನಿವೇದಿತಾ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಾಂಜಾದಲ್ಲಿ ಔಷಧಿಯ ಗುಣವಿದೆ. ಅದು ತುಳಸಿಯಷ್ಟೇ ಶ್ರೇಷ್ಠ ಎಂಬುದಾಗಿ ನಟಿ ನಿವೇದಿತಾ ಹೇಳಿಕೆ […]