ಮಗುವಿನ ಎದುರಿನಲ್ಲಿಯೇ ತಾಯಿ ಆತ್ಮಹತ್ಯೆಗೆ ಶರಣು

ಬಜಪೆ: ಇಲ್ಲಿನ ವಿಜಯ ವಿಠಲ ಭಜನಾ ಮಂದಿರ ಬಳಿಯ ಮನೆಯೊಂದರಲ್ಲಿ 11 ತಿಂಗಳ ಮಗುವಿನ ಎದುರಿನಲ್ಲಿಯೇ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಮಹಿಳೆಯನ್ನು ಬಜಪೆಯ ಶಿಲ್ಪಾ ಜುವೆಲ್ಲರ್ಸ್‌ನ ಮಾಲಕ ಅಶೋಕ ಆಚಾರ್ಯ ಅವರ ಮಗಳು ಶಿಲ್ಪಾ ಆಚಾರ್ಯ (28) ಎಂದು ಗುರುತಿಸಲಾಗಿದೆ. ಪತಿ ಪಡುಬಿದ್ರಿಯ ಶ್ರೀರಾಮ್ ಆಚಾರ್ಯ ಹಾಗೂ ಶಿಲ್ಪಾ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಹೆರಿಗೆಗಾಗಿ ಊರಿಗೆ ಬಂದವರು ಇಲ್ಲಿಯೇ ಆನ್‌ಲೈನ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಶಿಲ್ಪಾ ಅವರು ತಾಯಿ ಮನೆಯಲ್ಲಿ ಯಾರೂ ಇಲ್ಲದ […]

ಸೆ. 15 ರಂದು ಉಡುಪಿಯಲ್ಲಿ ಉಡುಪಿ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ : ಪ್ರಧಾನಮಂತ್ರಿಗಳು ನೀಡಿದ ಕರೆಯಂತೆ ವೋಕಲ್ ಫಾರ್ ಲೋಕಲ್ ಕಾರ್ಯಕ್ರಮದ ಅಂಗವಾಗಿ,  ಉಡುಪಿ ಕೈಮಗ್ಗದ ಸೀರೆಗಳ ಪ್ರದರ್ಶನವನ್ನು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಮತ್ತು ಕೈಮಗ್ಗ ನೇಕಾರರ ಸಹಕಾರಿ ಸಂಘಗಳ ಆಶ್ರಯದಲ್ಲಿ ಸೆಪ್ಟಂಬರ್ 15 ರಂದು ಬೆಳಗ್ಗೆ  10.30 ಕ್ಕೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಉಡುಪಿ ಕೈಮಗ್ಗ ಸೀರೆಗಳು ನಮ್ಮದೇ ನೇಕಾರರ ವಿಶಿಷ್ಟ ಕಲೆಯಾಗಿದ್ದು, ಈ ಕಲೆಯನ್ನು ಪ್ರೋತ್ಸಾಹಿ ಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ನ ಕೃಷಿ […]

ಕರಾವಳಿಯಲ್ಲಿ ಮುಂದುವರಿದ ಮಳೆ: ಜನಜೀವನ ಅಸ್ತವ್ಯಸ್ತ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದ್ದು, ಗುಂಡಿಬೈಲು, ಬೈಲಕೆರೆ ಮೊದಲಾದ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಕಾರ್ಕಳ ಹಾಗೂ ಕುಂದಾಪುರ ತಾಲ್ಲೂಕಿನಾದ್ಯಂತ ಭಾರೀ ವರ್ಷಾಧರೆಯಾಗಿದ್ದು, ಇದರಿಂದ ಜನಜೀವನಕ್ಕೆ ತೊಂದರೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಆರಂಭಗೊಂಡ ಮಳೆ ಶನಿವಾರ ಬೆಳಿಗ್ಗೆ ಸ್ವಲ್ಪ ಬಿಡುವು ನೀಡಿದೆ. ನಗರದ ಜಪ್ಪಿನ ಮೊಗರು ಮತ್ತಿತರ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಬಂಟ್ವಾಳ, ಬೆಳ್ತಂಗಡಿ ಪ್ರದೇಶದಲ್ಲೂ ಶುಕ್ರವಾರ ರಾತ್ರಿ ಮಳೆಯಾಗಿದ್ದು, ಬಂಟ್ವಾಳ ಪೇಟೆ ಹಾಗೂ ಬಿಸಿ ರೋಡ್ […]

ಮತ್ಸ್ಯ ಸಂಪದ ಯೋಜನೆ ಆತ್ಮನಿರ್ಭರ ಭಾರತದತ್ತ ದಿಟ್ಟ ಹೆಜ್ಜೆ: ಬಿಜೆಪಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿರುವ ಮತ್ಸ್ಯ ಸಂಪದ ಯೋಜನೆ ಆತ್ಮನಿರ್ಭರ ಭಾರತದತ್ತ ದಿಟ್ಟ ಹೆಜ್ಜೆಯಾಗಿದೆ ಎಂದು ಜಿಲ್ಲಾ ಬಿಜೆಪಿ ಹೇಳಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ವಿನೂತನ ಯೋಜನೆ ಜಾರಿಯಾಗಿರುವುದು ಮೀನುಗಾರಿಕಾ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬಲಿದೆ. ಇದರ ಪರಿಣಾಮವಾಗಿ ಕ್ಷೇತ್ರದ ಮೂಲಸೌಕರ್ಯ ಹಾಗೂ ರಫ್ತು ವೃದ್ಧಿಯ ಜೊತೆಗೆ ಆಧುನಿಕ ಸಲಕರಣೆ, ಹೊಸ ಮಾರುಕಟ್ಟೆಗಳು ಲಭ್ಯವಾಗಲಿದೆ. ದೇಶದ ವಿವಿಧ ರಾಜ್ಯಗಳಿಗೆ ವಿಸ್ತರಣೆಗೊಳ್ಳಲಿರುವ ಮತ್ಸ್ಯ ಸಂಪದ ಯೋಜನೆ ವಿಪುಲ ಉದ್ಯೋಗಾವಕಾಶಗಳ ಜೊತೆಗೆ ದೇಶದ ಆರ್ಥಿಕತೆಗೂ […]

ಕಾರ್ಕಳ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನ: ಮುದ್ದುಕೃಷ್ಣ ಸ್ಪರ್ಧೆಯ ಬಹುಮಾನ ವಿತರಣೆ

ಕಾರ್ಕಳ: ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನ ಚೋಲ್ಪಾಡಿ ಕಾಬೆಟ್ಟು ಮತ್ತು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಆನೆಕೆರೆ, ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಮುದ್ದುಕೃಷ್ಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ಕಾಬೆಟ್ಟು ವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಜರಗಿತು. ಬಹುಮಾನ ವಿತರಣೆಯನ್ನು ಕಾಬೆಟ್ಟು ಪುರಸಭಾ ಸದಸ್ಯೆ ಮಾಜಿ ಅಧ್ಯಕ್ಷೆ ರೆಹಮತ್ ಶೇಖ್, ದೇವಸ್ಥಾನದ ಧರ್ಮದರ್ಶಿ ಸಂಕೇತ್ ಉಪಾಧ್ಯಯ, ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಬಿ.ಕೆ. ವರದರಾಯ ಪ್ರಭು, ಕಾಬೆಟ್ಟು ವೇಣುಗೋಪಾಲ ಕೃಷ್ಣ ದೇವಸ್ಥಾನದ ಜೀಣೋದ್ದಾರ ಸಮಿತಿಯ […]