ಮತ್ತೆ ಬೆಳ್ಳಿತೆರೆಯ ಮೇಲೆ ಬರ್ತಿದ್ದಾರೆ ಕಮಲ್ ಹಾಸನ್: ಯಾವುದು ಕಮಲ್ ಹೊಸ ಚಿತ್ರ?

ಖ್ಯಾತ ನಟ, ರಾಜಕಾರಣಿ ಕಮಲ್ ಹಾಸನ್ ಮತ್ತೆ ತೆರೆ ಮೇಲೆ ಬರಲು ರೆಡಿಯಾಗಿದ್ದಾರೆ. ಇಷ್ಟು ದಿನ  ಚಿತ್ರರಂಗದಿಂದ ಒಂದಷ್ಟು ದೂರವಿದ್ದ ಕಮಲ್, ಈಗ ಮತ್ತೆ ಬಣ್ಣ ಹಚ್ಚುತ್ತಿರುವ ಚಿತ್ರದ ಹೆಸರಿನ್ನೂ ಬಯಲಾಗಿಲ್ಲ. ಆದರೆ ಕಮಲ್ ಟ್ವೀಟ್ ನಲ್ಲಿ ಒಂದು ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಯುವ ನಿರ್ದೇಶಕ ಲೋಕೇಶ್ ಕನಗರಾಜ್ ಅವರ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ಕಮಲ್ ಈ ಬಗ್ಗೆ ಟ್ವೀಟ್ ಮಾಡುತ್ತಾ “ಮತ್ತೊಂದು ಪ್ರಯಾಣ ಪ್ರಾರಂಭವಾಗುತ್ತಿದೆ” ಎಂದು ಹೇಳಿದ್ದಾರೆ. ಅವರು ಹಂಚಿಕೊಂಡಿರೋ ಪೋಸ್ಟರ್‌ನಲ್ಲಿ ಬಂದೂಕುಗಳಿಂದ ಮಾಡಿದ ಚಿತ್ರವಿದೆ. ಜತೆಗೆ […]

ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ

ಬೆಂಗಳೂರು: ಕಳೆದ ಜೂನ್ ತಿಂಗಳಲ್ಲಿ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್​ ಗಸ್ತಿ (55) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಸ್ಪಷ್ಟಪಡಿಸಿದೆ. ಈ ಮೊದಲು ಮಾಧ್ಯಮಗಳಲ್ಲಿ ಗಸ್ತಿ ಅವರು ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ವರದಿ ಆಗಿತ್ತು. ಹಾಗಾಗಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಣಿಪಾಲ್ ಆಸ್ಪತ್ರೆ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಶೋಕ್ ಗಸ್ತಿ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ. ಸೆಪ್ಟೆಂಬರ್ 2ರಂದು […]

25 ಗೋವುಗಳನ್ನು ದತ್ತು ಸ್ವೀಕರಿಸುವ ಮೂಲಕ ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಯಶ್ ಪಾಲ್ ಸುವರ್ಣ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ 70ನೇ ಹುಟ್ಟು ಹಬ್ಬದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರೂ, ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಗಳಾದ ಯಶ್ ಪಾಲ್ ಸುವರ್ಣ ಅವರು ನೀಲಾವರ ಗೋಶಾಲೆಯ 25 ಗೋವುಗಳನ್ನು ದತ್ತು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ಗೋವುಗಳನ್ನು ದತ್ತು ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ತಮ್ಮ ಈ ಕಾರ್ಯ ಇತರರಿಗೆ ಪ್ರೇರಣೆಯಾಗಲಿ. ಗೋ ಸಂತತಿಯ ರಕ್ಷಣೆಗೆ […]

ಕೋಟೇಶ್ವರದಲ್ಲಿ ಮೂವರು ಗಾಂಜಾ ಪೆಡ್ಲರ್ ಗಳ ಬಂಧನ: 1.1 ಕೆಜಿ ಗಾಂಜಾ ವಶ

ಕುಂದಾಪುರ: ಇಲ್ಲಿನ ಕೋಟೇಶ್ವರದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವವರನ್ನು ಪೋಲೀಸರು ಬಂಧಿಸಿದ್ದು, ಅವರಿಂದ  1.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮೂಡುಗೋಪಾಡಿ ಗ್ರಾಮದ ಮುಷ್ರೀಫ್ ಅಹಮದ್ (24), ವಿಟ್ಟಲ್ವಾಡಿ ಶ್ರೇಯಸ್ ದೇವಾಡಿಗ (23) ಮತ್ತು ಕೋಟೇಶ್ವರ ಮೂಲದ ಪ್ರೀತಮ್  ಅಲಿಯಾಸ್ ಪ್ರೀತು (23) ಬಂಧಿತ ಆರೋಪಿಗಳು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸದಾಶಿವ ಗೌರೋಜಿ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದರು. ಈ ಮೂವರು ಆರೋಪಿಗಳು ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಕೋಟೇಶ್ವರದ ದ್ವಿಚಕ್ರ ವಾಹನ ಮಾರಾಟ […]

ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರಿ ವಸಂತಿದೇವಿ ವಿಧಿವಶ

ಉಡುಪಿ: ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರಿ ಉಡುಪಿ ಕನ್ನರ್ಪಾಡಿ ನಿವಾಸಿ ವಸಂತಿದೇವಿ ಅಮ್ಮ (85) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನ ಹೊಂದಿದರು. ಧರ್ಮಾನುಷ್ಠಾನ ನಿಷ್ಠೆಯ ಸಾತ್ವಿಕ ಗೃಹಿಣಿಯಾಗಿದ್ದ ಅವರು, ಸಹೋದರ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.