ಉಡುಪಿ ಜಿಲ್ಲೆಗೆ ಗರಿಷ್ಠ ಪ್ರಮಾಣದ ನೆರೆ ಪರಿಹಾರ ಘೋಷಿಸಿ: ಯೋಗೀಶ್ ಶೆಟ್ಟಿ ಆಗ್ರಹ

ಉಡುಪಿ: ಜಿಲ್ಲೆಯಲ್ಲಿ ನೆರೆಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಸರ್ಕಾರ ಗರಿಷ್ಟ ಪ್ರಮಾಣದ ಪರಿಹಾರ ಬಿಡುಗಡೆ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಆಗ್ರಹಿಸಿದ್ದಾರೆ. ಅವರು ಮಂಗಳವಾರ ನೆರೆಗೆ ತುತ್ತಾದ ಕಾಪು ಕ್ಷೇತ್ರದ ಮಜೂರು, ಕರಂದಾಡಿ, ಮಂಡೇಡಿ, ಪಾಂಗಾಳ, ಬೆಳ್ಳಂಪಳ್ಳಿ ಮತ್ತು ಉಡುಪಿ ಜಿಲ್ಲೆಯ ಹಲವಾರು ಕಡೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ಹಿಂದೆ ಮೈತ್ರಿ ಸರ್ಕಾರ ಅಧಿಕಾರ ಅವಧಿಯಲ್ಲಿ ಕೊಡಗಿನ ಪ್ರವಾಹ ಉಂಟಾದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು, […]

ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೊನಾಗೆ ಬಲಿ

ಉಡುಪಿ: ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೊನಾ ಸೋಂಕಿನಿಂದ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ 12 ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

666 ಕೋಟಿ ರೂ.ಗಳ ಭ್ರಷ್ಟಾಚಾರ: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ

ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅವರ ಕುಟುಂಬದ ಸದಸ್ಯರು ಬಿಡಿಎ ನಲ್ಲಿ 666 ಕೋಟಿ ರೂ.ಗಳ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್‌ಸಿಂಗ್‌ ಸುರ್ಜೇವಾಲಾ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮಕ್ಕಳು ಮತ್ತು ಮೊಮ್ಮಕ್ಕಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಈ ಕುರಿತು ತಮ್ಮ ಬಳಿ ಸಾಕ್ಷ್ಯ ದಾಖಲೆಗಳಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. […]

ಡ್ರಗ್ಸ್ ದಂಧೆ: ದೀಪಿಕಾ ಪಡುಕೋಣೆ ಸಹಿತ ಬಾಲಿವುಡ್ ನ ನಾಲ್ವರು ನಟಿಯರಿಗೆ ಎನ್ ಸಿಬಿಯಿಂದ ಸಮನ್ಸ್

ಮುಂಬೈ: ಡ್ರಗ್ಸ್ ದಂಧೆಯ ಆರೋಪದಡಿ ಬಾಲಿವುಡ್‌ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್‌, ಸಾರಾ ಅಲಿಖಾನ್‌ ಹಾಗೂ ರಕುಲ್‌ ಪ್ರೀತ್‌ ಸಿಂಗ್‌ ಅವರಿಗೆ ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಬುಧವಾರ ಸಮನ್ಸ್‌ ಜಾರಿ ಮಾಡಿದೆ. ಯಾವ ದಿನ ಇವರು ಎನ್‌ಸಿಬಿಯ ವಿಶೇಷ ತನಿಖಾ ತಂಡದ ಎದುರು ವಿಚಾರಣೆಗಾಗಿ ಹಾಜರಾಗಬೇಕೆಂದು ಇನ್ನೂ ನಿಖರವಾಗಿ ತಿಳಿಸಿಲ್ಲ ಎನ್ನಲಾಗಿದೆ. ಸುಶಾಂತ್‌ ಸಿಂಗ್‌ ಗೆಳತಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋವಿಕ್‌ ಚಕ್ರವರ್ತಿ, ಜಯಾ ಸಹಾ ಹಾಗೂ ಕೆಲವು ಡ್ರಗ್ಸ್‌ ಪೆಡ್ಲರ್‌ಗಳು […]

ಲೋಕೋಪಯೋಗಿ ಗುತ್ತಿಗೆದಾರ ಪಿ.ಎನ್. ಶಶಿಧರ ರಾಯರ ಪತ್ನಿ ಗೀತಾ ಎಸ್. ರಾವ್ ನಿಧನ

ಉಡುಪಿ: ಉಡುಪಿಯ ಲೋಕೋಪಯೋಗಿ ಗುತ್ತಿಗೆದಾರ, ಪೆರಂಪಳ್ಳಿ ಎಡ್ಮೇರಿ ಬೊಬ್ಬರ್ಯ ದೈವಸ್ಥಾನದ ಆಡಳಿತ ಮೊಕ್ತೇಸರ ಪಿ.ಎನ್. ಶಶಿಧರ ರಾಯರ ಪತ್ನಿ ಗೀತಾ ಎಸ್. ರಾವ್ (61) ಅವರು ಅನಾರೋಗ್ಯದಿಂದ ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ .