ನಮ್ಮಿಂದ ತಪ್ಪುಗಳಾಗಿದ್ದರೆ ಸಾಬೀತುಪಡಿಸಿ, ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ; ವಿಪಕ್ಷ ನಾಯಕರಿಗೆ ಸವಾಲೆಸೆದ ಸಿಎಂ

ಬೆಂಗಳೂರು: ನಮ್ಮಿಂದ ತಪ್ಪುಗಳಾಗಿದ್ದರೆ ಸಾಬೀತುಪಡಿಸಿ. ನಮ್ಮ ತಪ್ಪು ಸಾಬೀತಾದ್ರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಗೆ ಸಾವಲೆಸೆದರು. ವಿಜಯೇಂದ್ರ (ಯಡಿಯೂರಪ್ಪ ಪುತ್ರ) ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಇಂದು ವಿಧಾನಸಭೆಯಲ್ಲಿ ಅವಿಶ್ವಾಸ ಗೊತ್ತುವಳಿಯ ಮೇಲಿನ ಚರ್ಚೆ ಸಂದರ್ಭದಲ್ಲಿ ಅವರು ಖಡಕ್ ಆಗಿ ಉತ್ತರಿಸಿದರು. ವಿಪಕ್ಷ ನಾಯಕರ ಟೀಕೆಗಳಿಗೆ ಸ್ವಲ್ಪ ಖಾರವಾಗಿಯೇ ಉತ್ತರಿಸಿದ ಸಿಎಂ, ಮುಂದಿನ ಚುನಾವಣೆಯಲ್ಲಿ ನಾವು 135 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ. ಮುಂದಿನ 10 ವರ್ಷಗಳ ಕಾಲ […]

ಕಾಂಗ್ರೆಸ್ ನ ಅವಿಶ್ವಾಸ ನಿರ್ಣಯಕ್ಕೆ ಸೋಲು: ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಸೇಫ್

ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಶನಿವಾರ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಇದರಿಂದ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಮುಖಭಂಗ ಅನುಭವಿಸಿದ್ದಾರೆ. ಶಾಸಕರ ವಿಶ್ವಾಸ ಗಳಿಸುವಲ್ಲಿ ಸಿಎಂ ಬಿಎಸ್ ವೈ ಯಶಸ್ವಿಯಾಗಿದ್ದು, ಶಾಸಕರು ಧ್ವನಿ ಮತದ ಮೂಲಕ ಸಿಎಂ ಪರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು ಉಂಟಾಗಿದ್ದು, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಗೆಲುವು ಸಾಧಿಸಿದೆ. ಬಳಿಕ ಸ್ಪೀಕರ್ ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.