ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸಹಿತ 32 ಮಂದಿ ದೋಷಮುಕ್ತ

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷದ ಸುದೀರ್ಘ ವಿಚಾರಣೆಯ ನಂತ್ರ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯ ಬುಧವಾರ ತನ್ನ ತೀರ್ಪು ಪ್ರಕಟಿಸಿದ್ದು, ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾಭಾರತಿ ಸೇರಿ 32 ಜನರಿಗೆ ಕ್ಲೀನ್ ಚೀಟ್ ನೀಡಿದೆ. ಸಿಬಿಐ ನ್ಯಾಯಾಧೀಶ ಸುರೇಂದ್ರ ಕುಮಾರ್ ಯಾದವ್ ಅವರು ತೀರ್ಪು ಪ್ರಕಟಿಸಿದ್ದು, ಇದು ಪೂರ್ವ ನಿಯೋಜಿತ ಕೃತ್ಯವಲ್ಲ, ಅವರನ್ನು ಆರೋಪಿಗಳು ಎನ್ನಲು ಯಾವುದೇ ಸಾಕ್ಷ್ಯಗಳಿಲ್ಲ. ಎಲ್ಲಾ ಆರೋಪಿಗಳನ್ನು ಆರೋಪ ಮುಕ್ತ ಘೋಷಿಸಿ […]

ಜಾಮೀನು ಪಡೆಯುವ ಬದಲು ಗಲ್ಲಿಗೇರಲು ಬಯಸುತ್ತೇನೆ: ಉಮಾಭಾರತಿ

ಲಖನೌ: ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದು ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದರೆ ನಾನು ಜಾಮೀನು ಮಾತ್ರ ಪಡೆಯುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಅವರು ಈ ಬಗ್ಗೆ ಉಲ್ಲೇಖಿಸಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆಯಾಗುತ್ತದೆ. ಹಾಗಾಗಿ ನಾನು ಜಾಮೀನಿನ ಬದಲು ಗಲ್ಲಿಗೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಸದ್ಯ ಉಮಾಭಾರತಿ ಋಷಿಕೇಶದ ಏಮ್ಸ್ […]

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಇಂದು ತೀರ್ಪು ಪ್ರಕಟ

ಲಖನೌ: ಐತಿಹಾಸಿಕ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಲಖನೌನ ಸಿಬಿಐ ವಿಶೇಷ ಕೋರ್ಟ್ ನಿಂದ ಇಂದು ತೀರ್ಪು ಪ್ರಕಟವಾಗಲಿದೆ. ಮಧ್ಯಾಹ್ನ 12 ಗಂಟೆ ವೇಳೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಕಳೆದ ತಿಂಗಳು ಕೋರ್ಟ್ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ನ್ಯಾಯಾಧೀಶ ಎಸ್.ಕೆ. ಯಾದವ್ ಅವರು ಈ ಐತಿಹಾಸಿಕ ತೀರ್ಪು ಮಂಡಿಸುವರು. ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್ ಸೇರಿದಂತೆ 32 ಆರೋಪಿಗಳಿಗೆ […]