ಹಿರಿಯಡಕ ರೌಡಿಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳ ಬಂಧನ

ಉಡುಪಿ: ಹಿರಿಯಡಕ ಪೇಟೆಯಲ್ಲಿ ಸೆ. 24 ರಂದು ನಡೆದ ರೌಡಿಶೀಟರ್ ಕಿಶನ್ ಹೆಗ್ಡೆ ಇನ್ನಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಮಂಗಳೂರು ಕಾಟಿಪಳ್ಳ ಗ್ರಾಮದ ಸಚಿನ್ ಡಿ. ಅಮೀನ್ ಯಾನೆ ಸಚ್ಚು (37), ಇದೇ ಗ್ರಾಮದ ಅಕ್ಷಯ್ ಶೆಟ್ಟಿಗಾರ್ (26), ಮಂಗಳೂರು ತೋಕೂರು ಗ್ರಾಮದ ನಿವಾಸಿ ಚೇತನ್ ಯಾನೆ ಚೇತು (23) ಹಾಗೂ ಮಂಗಳೂರು ಕಾಟಿಪಳ್ಳ ಗ್ರಾಮದ ಸಂಜಿತ್ ಪ್ರದಾನ್ ಯಾನೆ ಶೈಲೇಶ್ (19) ಬಂಧಿತ ಆರೋಪಿಗಳು. ಇವರನ್ನು ಪೊಲೀಸರು […]

ಮಲ್ಪೆ: ಭಾರತ್ ಸ್ಕೌಟ್- ಗೈಡ್ಸ್ ನಿಂದ ಸರ್ವಧರ್ಮ ಪ್ರಾರ್ಥನೆ, ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆ ವತಿಯಿಂದ 151ನೇ ಗಾಂಧಿ ಜಯಂತಿ ಅಂಗವಾಗಿ ಮಲ್ಪೆ ಕಡಲ ಕಿನಾರೆಯ ಗಾಂಧಿ ಪ್ರತಿಮೆಯ ಬಳಿ ಸರ್ವಧರ್ಮ ಪ್ರಾರ್ಥನೆ ಮತ್ತು ಸ್ವಚ್ಛತಾ ಕಾರ್ಯಕ್ರಮಗಳನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಶಾಸಕ ರಘುಪತಿ ಭಟ್ ಭಟ್, ಭಾರತ್ ಸ್ಕೌಟ್ ಅಂಡ್ ಗೈಡ್ ಜಿಲ್ಲಾ ಸಂಸ್ಥೆ ಉಡುಪಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ […]

ನಿರೂಪಕಿ ಅನುಶ್ರೀ ರಕ್ಷಣೆಗೆ ನಿಂತ ಕರಾವಳಿಯ ಪ್ರಭಾವಿ ರಾಜಕಾರಣಿ.!

ಮಂಗಳೂರು: ರಾಜ್ಯದ ಮೂರು ಪ್ರಭಾವಿ ರಾಜಕಾರಣಿಗಳು ನಟಿ ಕಂ ನಿರೂಪಕಿ ಅನುಶ್ರೀ ರಕ್ಷಣೆಗೆ ನಿಂತಿದ್ದರು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಮಗ ಹಾಗೂ ಕರಾವಳಿಯ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಅನುಶ್ರೀ ಕರೆ ಮಾಡಿ ರಕ್ಷಣೆ ಮಾಡುವಂತೆ ಕೋರಿದ್ದರು. ಸಿಸಿಬಿ ಪೊಲೀಸರ ನೋಟಿಸ್ ಬಂದ ಕೂಡಲೇ ಇಬ್ಬರಿಗೆ ಕರೆ ಮಾಡಿದ್ದು, ಇನ್ನೊಬ್ಬರಿಗೆ ಮರುದಿನ ಕರೆ ಮಾಡಿದ್ದರು. ಈ ರಾಜಕಾರಣಿಗಳು ಪ್ರಭಾವ ಬೀರಿದ ಹಿನ್ನೆಲೆಯಲ್ಲಿ ಪೊಲೀಸರು ಅನುಶ್ರೀಗೆ ಡೋಪಿಂಗ್ ಟೆಸ್ಟ್ ಮಾಡಿಲ್ಲ ಎನ್ನಲಾಗುತ್ತಿದೆ. ಡ್ರಗ್ಸ್ […]

ಅಜ್ಜರಕಾಡು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಉಡುಪಿ: ಇಲ್ಲಿನ ಅಜ್ಜರಕಾಡು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಆಗ್ರಹಿಸಿ ಯುವಶಕ್ತಿ ಕರ್ನಾಟಕದ ವತಿಯಿಂದ ಇಂದು ಬೆಳ್ಳಿಗೆ 7 ರಿಂದ ಅಜ್ಜರಕಾಡಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ. ಸರ್ಕಾರ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕೂಡಲೇ ಕ್ರಮಗೈಗೊಳ್ಳಬೇಕು. ನಿರ್ಲಕ್ಷ ವಹಿಸಿದ್ದಲ್ಲಿ ಉಗ್ರ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಯುವ ಶಕ್ತಿ ಕರ್ನಾಟಕ ಸಮಿತಿ ಎಚ್ಚರಿಸಿದೆ. ಮನೋವೈದ್ಯ ಡಾ ಪಿ. ವಿ ಭಂಡಾರಿ ಉಪವಾಸ ಸತ್ಯಾಗ್ರಹಕ್ಕೆ ಚಾಲನೆ ನೀಡಿ, ಸರಕಾರಿ ಆಸ್ಪತ್ರೆಯ ಅವಶ್ಯಕತೆಯ ಬಗ್ಗೆ ಮಾತನಾಡಿದರು. ಸತ್ಯಾಗ್ರಹದಲ್ಲಿ ಯುವಶಕ್ತಿ ಕರ್ನಾಟಕ ಇದರ ರಾಜ್ಯಾಧ್ಯಕ್ಷ ಪ್ರಮೋದ್ […]

ಬಿಜೆಪಿ ಯುವಮೋರ್ಚಾ ಕಾಪು ಮಂಡಲದಿಂದ ಸ್ವಚ್ಛ ಭಾರತ ಕಾರ್ಯಕ್ರಮ

ಕಾಪು: ಬಿಜೆಪಿ ಕಾಪು ಮಂಡಲ ಹಾಗೂ ಕಾಪು ಬಿಜೆಪಿ ಯುವಮೋರ್ಚಾದ ವತಿಯಿಂದ ಸೇವಾಸಪ್ತಾಹದ ಅಭಿಯಾನದಡಿ ಗಾಂಧಿ ಜಯಂತಿ ಅಂಗವಾಗಿ ಪಾಂಗಾಳ ಬಸ್ ತಂಗುದಾಣದ ಬಳಿ ಇಂದು ಸ್ವಚ್ಛ ಭಾರತ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಕಾಪು ಕ್ಷೇತ್ರ ಪ್ರಭಾರಿಗಳಾದ ಯಶ್ ಪಾಲ್ ಸುವರ್ಣ, ಪಕ್ಷದ ಹಿರಿಯರಾದ ಸುರೇಶ್ ಶೆಟ್ಟಿ ಗುರ್ಮೆ, ಯುವ ಮೋರ್ಚಾ ಕಾಪು ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಹಿಂದುಳಿದ ಮೋರ್ಚಾ ಅಧ್ಯಕ್ಷ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕುರ್ಕಾಲು ಮಹಾಶಕ್ತಿ […]