ಬಿಜೆಪಿ ಕಾಪು ಮಂಡಲ ಯುವಮೋರ್ಚಾದಿಂದ ಶಾರದಾ ಪೂಜೆ

ಕಾಪು: ಬಿಜೆಪಿ ಕಾಪು ಮಂಡಲ ಯುವಮೋರ್ಚಾದ ವತಿಯಿಂದ ಕಾಪು ಜೆಸಿ ಭವನದಲ್ಲಿ ಭಾನುವಾರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಅವರ ನೇತೃತ್ವದಲ್ಲಿ ಮಕ್ಕಳಿಂದ ಶಾರದಾ ಪೂಜಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರಧ್ಯಕ್ಷ ಶ್ರೀಕಾಂತ್ ನಾಯಕ್, ಕಾಪು ಪ್ರಭಾರಿಗಳಾದ ಯಶ್ಪಾಲ್ ಸುವರ್ಣ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ. ಮುಖಂಡರಾದ ಗುರ್ಮೆ ಸುರೇಶ್ ಶೆಟ್ಟಿ, ಶೀಲಾ ಶೆಟ್ಟಿ, […]

ಉಡುಪಿ: ರಕ್ಷಿತಾ ನಾಯಕ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ‘ಆ ಕೊನೆಯ ಕರೆ’!

ಉಡುಪಿ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಯುವತಿಯೊಬ್ಬಳನ್ನು ದಾಖಲಿಸಿ, ಆಕೆ ಮೃತಪಟ್ಟ ಬಳಿಕ ಪ್ರಿಯಕರ ನಾಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿ ನೇಣಿಗೆ ಕೊರಳೊಡ್ಡಿದ್ದಳೆಂಬ ಶಂಕೆ ಮೂಡಿದೆ. ಮೃತ ಯುವತಿಯನ್ನು ಉಡುಪಿ ತಾಲ್ಲೂಕಿನ ಕುಕ್ಕೆಹಳ್ಳಿ ನಿವಾಸಿ ರಕ್ಷಿತಾ ನಾಯಕ್ (20) ಎಂದು ಗುರುತಿಸಲಾಗಿದೆ. ಈಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದ ಪ್ರಿಯಕರ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್ ಎಂದು ತಿಳಿದುಬಂದಿದೆ. ಬಿಂದಾಸ್ ಆಗಿ ಲೈಫ್ ಲೀಡ್ ಮಾಡ್ಬೇಕೆಂಬ ಕನಸು ಹೊತ್ತಿದ್ದ ರಕ್ಷಿತಾ ನಾಯಕ್ ಬದುಕು ಸೂತ್ರ […]