ಕೇರಳ ರಾಜ್ಯದ ಬಿಜೆಪಿ ಸಹ ಉಸ್ತುವಾರಿಯಾಗಿ ಶಾಸಕ ವಿ. ಸುನಿಲ್ ಕುಮಾರ್ ನೇಮಕ
ಉಡುಪಿ: ಕೇರಳ ರಾಜ್ಯದ ಬಿಜೆಪಿ ಸಹ ಉಸ್ತುವಾರಿಯಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಸಂಘಟನೆ, ಹಿಂದುತ್ವ ಹಾಗೂ ಯುವ ನಾಯಕತ್ವದಡಿ ಕರಾವಳಿ ಭಾಗದಲ್ಲಿ ಬಿಜೆಪಿಯನ್ನು ಕಟ್ಟಿಬೆಳೆಸಿದ್ದಾರೆ. ಈ ಭಾಗದಲ್ಲಿ ಬಿಜೆಪಿ ಯುವ ಸಂಘಟನೆಯನ್ನು ದೃಢಸಂಕಲ್ಪದೊಂದಿಗೆ ಮುನ್ನಡೆಸಿಕೊಂಡು ಬಂದಿರುವುದಲ್ಲದೆ, ಯುವಜನರಿಗೆ ಶಕ್ತಿ ತುಂಬುವ ಕೆಲಸವನ್ನು ಸುನಿಲ್ ಕುಮಾರ್ ಮಾಡಿದ್ದಾರೆ. ಇದೇ ರೀತಿಯಲ್ಲಿ ಕೇರಳ ರಾಜ್ಯಾದ್ಯಂತ ಬಿಜೆಪಿ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ.
ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿದ ಗಣ್ಯರು
ಉಡುಪಿ: ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಬಾಳಿಗೂ ಬೆಳಕು ತರಲಿ.ಕತ್ತಲೆ ಕಳೆದು ಲೋಕಕ್ಕೆಲ್ಲಾ ಬೆಳಕಿನ ಕಿರಣಗಳು ಮೂಡಲಿ ಎಂದು ಉಡುಪಿXPRESS ಮೂಲಕ ಶುಭಹಾರೈಸಿದ್ದಾರೆ ಗಣ್ಯರು.
ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿದ ಗಣ್ಯರು