ಕಾರು ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಮೃತ್ಯು

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಯತಿರಾಜ್ ಮೃತಪಟ್ಟ ಯುವಕ. ಈತ ಕಲ್ಲಡ್ಕದ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಯತಿರಾಜ್ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮಾರ್ಗದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ. ಇದರಿಂದ ಯತಿರಾಜ್ ಗಂಭೀರ ಗಾಯಗೊಂಡಿದ್ದು, ಕೂಡಲೇ ಯತಿರಾಜ್ ನನ್ನು ಮಂಗಳೂರಿನ ಖಾಸಗಿ‌ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. […]

ಚೊಚ್ಚಲ ಹೆರಿಗೆ ಬಳಿಕ ತಾಯಿ-ಮಗು ಸಾವು: ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರ ಆರೋಪ

ಮಂಗಳೂರು: ಚೊಚ್ಚಲ ಹೆರಿಗೆ ನಂತರ ತಾಯಿ ಹಾಗೂ ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಂಭವಿಸಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಮಹಿಳೆಯನ್ನು ಬಂಟ್ವಾಳ ತಾಲೂಕಿನ ರಾಮನಗರ ನಿವಾಸಿ ಕಾಜಲ್ ಶೆಟ್ಟಿ (25) ಎಂದು ಗುರುತಿಸಲಾಗಿದೆ. ಇವರು ಚೊಚ್ಚಲ ಹೆರಿಗೆಗಾಗಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು. ಆದರೆ ಹೆರಿಗೆ ಬಳಿಕ ಮಗು ಸಾವನ್ನಪ್ಪಿದ್ದು, ಕಾಜಲ್ ಅವರಿಗೆ ತೀವ್ರ ರಕ್ತಸ್ರಾವ‌ ಉಂಟಾಗಿತ್ತು. ಈ ಕಾರಣಕ್ಕಾಗಿ ಕೂಡಲೇ ಅವರನ್ನು […]