ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯ ಉದ್ಘಾಟನೆ: ಮಕರ ಸಂಕ್ರಾಂತಿ ಬಳಿಕ ನಿಧಿ ಸಂಗ್ರಹ- ಪೇಜಾವರ ಶ್ರೀ

ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರವನ್ನು ₹ 1,300-1,400 ಕೋಟಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ ಜನರಿಂದ ನಿಧಿ ಸಂಗ್ರಹ ಮಾಡುವ ಮೂಲಕ ಹಣ ಹೊಂದಿಸಲಾಗುವುದು. ಈ ನಿಧಿ ಸಂಗ್ರಹ ಅಭಿಯಾನ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ನೇತೃತ್ವದಲ್ಲಿ ವಿಶ್ವ ಹಿಂದು ಪರಿಷತ್ ಉಸ್ತುವಾರಿಯಲ್ಲಿ ನಡೆಯಲಿದೆ. ಹಾಗಾಗಿ ಹಣದ ದುರುಪಯೋಗಕ್ಕೆ ಯಾವುದೇ ಅವಕಾಶ ಇರುವುದಿಲ್ಲ ಎಂದು ಟ್ರಸ್ಟ್‌ನ ವಿಶ್ವಸ್ಥರಾಗಿರುವ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿ ಪೇಜಾವರ ಮಠದ ಬಳಿಯ ವಿಜಯಧ್ವಜದಲ್ಲಿ ಇಂದು […]

ಪ್ರಿಯಕರನ ಎದುರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ವಿವಾಹಿತ ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ವಿವಾಹಿತ ಮಹಿಳೆಯೊಬ್ಬಳು ಪ್ರಿಯಕರನ ಎದುರಿನಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ನಡೆದಿದೆ. ಬಿಳಗುಳ ನಿವಾಸಿ ಸವಿತಾ (42) ಆತ್ಮಹತ್ಯೆಗೆ ಶರಣಾದ ಮಹಿಳೆ. ಈಕೆ ವೈಯುಕ್ತಿಕ ಕಾರಣದಿಂದ ಪತಿಯನ್ನು ಬಿಟ್ಟು ತವರು ಮನೆಯ ಬಳಿ ಹೋಂ ಸ್ಟೇ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಆಗ ಅಲ್ಲೇ ಸಮೀಪದ ದುರ್ಗಾ ಪರಮೇಶ್ವರಿ ಎಸ್ಟೇಟ್​ನಲ್ಲಿ ರೈಟರ್ ಆಗಿ ಕೆಲಸ ಮಾಡ್ತಿದ್ದ ಕೊಲ್ಲಿಬೈಲ್​ ನಿವಾಸಿ ನಂದೀಶ (28) ಎಂಬುವವನ ಪರಿಚಯವಾಗಿ ಅದು ಪ್ರೀತಿಗೆ ತಿರುಗಿತ್ತು. […]