ತವರೂರಿನಲ್ಲೇ ಸುಸಜ್ಜಿತ ಸ್ಟುಡಿಯೋ ನಿರ್ಮಿಸಿದ ರವಿ ಬಸ್ರೂರು.!

ಉಡುಪಿ: ವಿಭಿನ್ನ ಶೈಲಿಯ‌ ಸಂಗೀತ ಸಂಯೋಜನೆಯ ಮೂಲಕ ಕನ್ನಡಿಗರ ಮನ ಗೆದ್ದಿರುವ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು, ತಮ್ಮ ಹುಟ್ಟೂರಿಗೆ ವಿಶೇಷ ಕೊಡುಗೆಯನ್ನು ಕೊಟ್ಟಿದ್ದಾರೆ. ಆ ಮೂಲಕ ತಮ್ಮ ಹಳ್ಳಿಯನ್ನು ನಗರಕ್ಕೆ ಪರಿಚಯಿಸುವ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಹೌದು, ರವಿ ಅವರು ತಮ್ಮ ಮೆಚ್ಚಿನ ಊರು ಬಸ್ರೂರಿನಲ್ಲಿ ಸುಸಜ್ಜಿತವಾಗಿ ಮ್ಯೂಸಿಕ್‌ ಸ್ಟುಡಿಯೋ ಒಂದನ್ನು ಕಟ್ಟಿದ್ದಾರೆ. ಅಲ್ಲಿಂದಲೇ ಕನ್ನಡ, ತೆಲುಗು, ತಮಿಳು ಸಿನಿಮಾಗಳಿಗೆ ಕೆಲಸ ಮಾಡುತ್ತಿದ್ದಾರೆ. ರವಿ ಬಸ್ರೂರು ನಗರಕ್ಕೆ ತೆರಳಿ ಖ್ಯಾತಿ, ಹಣ ಸಂಪಾದಿಸಿದರೂ […]

ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ; ಶೀಘ್ರವೇ ಚೆನ್ನೈಯಲ್ಲಿ ಉದ್ಯಮಿಗಳ ಸಮಾವೇಶ- ರಾಜೇಶ್ ರಾವ್

ಚೆನ್ನೈ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಭವ್ಯ ಶ್ರೀ ರಾಮಮಂದಿರ ನಿರ್ಮಾಣಕ್ಕೆ ದೇಶದ ಸಮಸ್ತ ಜನತೆಯ ಸಹಕಾರ ಪಡೆಯುವ ಉದ್ದೇಶದಿಂದ ಜನವರಿ 15 ರಿಂದ ದೇಶಾದ್ಯಂತ ನಿಧಿ ಸಂಗ್ರಹ ಅಭಿಯಾನ ನಡೆಯಲಿದೆ. ಈ ಉದ್ದೇಶಕ್ಕಾಗಿ ತಮಿಳುನಾಡಿನ ಉದ್ಯಮಿಗಳ ಸಮಾವೇಶವನ್ನು ಚೆನ್ನೈ ನಲ್ಲಿ ನಡೆಸಲಾಗುವುದು ಎಂದು ಜಗತ್ಪ್ರಸಿದ್ಧ ವುಡ್ ಲ್ಯಾಂಡ್ಸ್ ಹೋಟೆಲ್ಸ್ ನ ಪಾಲುದಾರ ಕೆ. ರಾಜೇಶ್ ರಾವ್ ( ಮಂಗಳೂರಿನ ಕಡಂದಲೆಯವರು ) ತಿಳಿಸಿದ್ದಾರೆ. ಚೆನ್ನೈ ಮೈಲಾಪುರದಲ್ಲಿರುವ ವುಡ್ ಲ್ಯಾಂಡ್ಸ್ ಹೋಟೆಲ್ ಅತಿಥಿ ಗೃಹದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ […]

ನಟಿ ಸಂಜನಾ ಗಲ್ರಾನಿಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ಡ್ರಗ್ಸ್ ಜಾಲದ ನಂಟಿನ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್‌ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ₹3 ಲಕ್ಷ ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಒದಗಿಸಬೇಕು ಎಂಬ ಷರತ್ತಿನ ಆಧಾರದಲ್ಲಿ ಕೋರ್ಟ್ ಜಾಮೀನು ನೀಡಿದೆ.

ಸಾರಿಗೆ ನೌಕರರ ದಿಢೀರ್ ಮುಷ್ಕರ: ಪ್ರಯಾಣಿಕರ ಪರದಾಟ

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆಗೆ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ನಾಲ್ಕು ನಿಗಮಗಳ ಸಾರಿಗೆ ನೌಕರರು ಇಂದು ಬಸ್‌ಗಳ ಸಂಚಾರ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ. ಬಸ್‌ ಸಂಚಾರ ಇಲ್ಲದ ವಿವಿಧೆಡೆ ಕೆಲಸಕ್ಕೆ ಹೋಗಬೇದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ‌ವಿಧಾನಸೌಧ ಚಲೋ ನಡೆಸಿದ ನೌಕರರ ಸಂಘದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದು ಹಾಗೂ ಯಾವುದೇ ಜನಪ್ರತಿನಿಧಿಗಳು ಬಂದು ಮನವಿ ಸ್ವೀಕರಿಸದೆ ಇರುವುದು ನೌಕರರ ಸಿಟ್ಟಿಗೆ ಕಾರಣವಾಗಿವೆ. […]

ಬ್ರಹ್ಮಾವರ: ಸಿಡಿಲು ಬಡಿದು ಯುವಕ ಮೃತ್ಯು

ಉಡುಪಿ: ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು‌ ಬಡಿದು‌ ಯುವಕನೊಬ್ಬ ಸಾವನ್ನಪ್ಪಿದ ಘಟನೆ ವಂಡಾರು ಬೋರ್ಡಕಲ್ಲು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ವಂಡಾರು ನಿವಾಸಿ‌ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಮೃತಪಟ್ಟ ಯುವಕ. ಚೇತನ್ ಮನೆಯೊಳಗಡೆ ಲ್ಯಾಪ್‌ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದನು. ಈ ವೇಳೆ ಸಿಡಿಲು ಬಡಿದಿದ್ದು, ಚೇತನ್ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕೊಂಡದೊಯ್ಯಲಾಗಿದೆ. ಆದರೆ ಅಲ್ಲಿನ ವೈದ್ಯರು ಪರೀಕ್ಷಿಸಿ ಚೇತನ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಚೇತನ್ ಬೆಂಗಳೂರಿನ […]