ಗಂಗೊಳ್ಳಿ: ಬೈಕ್ ಗಳ ಮುಖಾಮುಖಿ ಡಿಕ್ಕಿ; ಪತ್ರಿಕಾ ವಿತರಕ ಮೃತ್ಯು

ಗಂಗೊಳ್ಳಿ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಪತ್ರಿಕಾ ವಿತರಕರೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿಯ ಗುಜ್ಜಾಡಿ ಸಮೀಪ ಸಂಭವಿಸಿದೆ. ಮೃತರನ್ನು ಪತ್ರಿಕಾ ವಿತರಕ ಗುಜ್ಜಾಡಿ ನಿವಾಸಿ ಅಶೋಕ್ ಕೊಡಂಚ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕೊಡಂಚ ಗಂಭೀರಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನೋರ್ವ ಬೈಕ್ ಸವಾರ ಸಾಹಿಲ್ ಎಂಬಾತನಿಗೆ ಗಾಯವಾಗಿದೆ. ಇಬ್ಬರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲು ಇಬ್ರಾಹಿಂ ಗಂಗೊಳ್ಳಿ ಹಾಗೂ ಅಬ್ರಾರ್ ಸೂಫಿ ಸಹಕರಿಸಿದರು.

ಶಿರ್ವ ಸಂತಮೇರಿ ಕಾಲೇಜಿನಲ್ಲಿ ಯುವ ಸೇನಾ ವಾರ್ಷಿಕ ತರಬೇತಿ ಶಿಬಿರ

ಶಿರ್ವ: ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಭೂಯುವಸೇನಾ ದಳದ ಎನ್.ಸಿ.ಸಿ.ಘಟಕದ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್‍ಕುಮಾರ್ ನೇತೃತ್ವದಲ್ಲಿ ಐದು ದಿನಗಳ ವಾರ್ಷಿಕ ತರಬೇತಿ ಶಿಬಿರ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ಮಾತನಾಡಿ, ಯುವಕರು ಇಂತಹ ಕ್ಯಾಂಪ್ ಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಲು ಸಾಧ್ಯ. ಹೊಸ ರೀತಿಯ ಕಲಿಕೆ, ಬದುಕಿನ ಹೊಂದಾಣಿಕೆಯನ್ನು ಪರಸ್ಪರ ತಿಳಿಸಿಕೊಡುತ್ತದೆ. ಭವಿಷ್ಯದಲ್ಲಿ ಉನ್ನತ ವಿದ್ಯಾಭ್ಯಾಸ, ಉದ್ಯೋಗ ಪಡೆಯಲು ಪೂರಕವಾಗಿದೆ ಎಂದರು. ಸಂಪನ್ಮೂಲ […]

ಯುವಜನತೆಯಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ: ಪ್ರೊ. ಕೊಡಂಚ ವಿಷಾದ

ಶಿರ್ವ: ವಿದ್ಯಾರ್ಥಿಗಳು ಕಲಿಕೆಯ ಅವಧಿಯಲ್ಲಿ ಗುರು, ಹಿರಿಯರ ಮಾರ್ಗದರ್ಶನದೊಂದಿಗೆ ಮುನ್ನಡೆದರೆ ಜೀವನದಲ್ಲಿ ಸಾಧನೆಯ ಶಿಖರವನ್ನು ಏರಲು ಸಾಧ್ಯ ಎಂದು ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಎ.ಪಿ. ಕೊಡಂಚ ಹೇಳಿದರು. ಶಿರ್ವ ಸಂತ ಮೇರಿ ಕಾಲೇಜಿನ ರೋವರ್ಸ್-ರೇಂಜರ್ಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ಕಾಲೇಜಿನಲ್ಲಿ ಹಮ್ಮಿಕೊಂಡ ‘ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ’ದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವಲ್ಲಿ ಶಿಕ್ಷಣ ಸಂಸ್ಥೆಗಳ ಜತೆಗೆ ಹೆತ್ತವರ ಪಾತ್ರ […]

ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಅಬ್ದುಲ್ ಗಫೂರ್ ಆಯ್ಕೆ

ಉಡುಪಿ: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಕಲ್ಯಾಣಪುರ ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಚೇರಿಯಲ್ಲಿ ಈಚೆಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಉಮರ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ನಿಕಟಪೂರ್ವ ಕಾರ್ಯದರ್ಶಿ ಖಲೀಲ್ ಅಹಮದ್ ವಾರ್ಷಿಕ ವರದಿ, ಖಜಾಂಚಿ ಮುನೀರ್ ಲೆಕ್ಕಪತ್ರ ಮಂಡಿಸಿದರು. ಮುಂದಿನ ವರ್ಷಕ್ಕೆ ನೂನತ ಸಮಿತಿಯನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕೆ.ಅಬ್ದುಲ್ ಗಫೂರ್ ಆದಿಉಡುಪಿ, ಕಾರ್ಯದರ್ಶಿಯಾಗಿ ಯು. ಇಬ್ರಾಹಿಂ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿಯಾಗಿ ಮುಹಮ್ಮದ್ ಫಯಾಜ್ ಹಾಗೂ ಕೋಶಾಧಿಕಾರಿಯಾಗಿ […]

ತುಳುಚಿತ್ರ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಕಾರು ಅಪಘಾತ

ಶಿರಾಡಿ: ಕನ್ನಡ ಮತ್ತು ತುಳು ಚಿತ್ರರಂಗದ ನಟ, ನಿರ್ದೇಶಕ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಶಿರಾಡಿ ಘಾಟ್ ನಲ್ಲಿ ಅಪಘಾತಕ್ಕೀಡಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ರೂಪೇಶ್ ಫಾರ್ಚುನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ ಎಂದು ವರದಿಯಾಗಿದೆ. ರೂಪೇಶ್ ಶೆಟ್ಟಿ ಗಿರ್ಗಿಟ್ ತುಳು ಚಿತ್ರ ಮತ್ತು ಕನ್ನಡದಲ್ಲಿ ನಿಶಬ್ಧ 2′, ಡೇಂಜರ್ ಜೋನ್’,`ಪಿಶಾಚಿ 2′ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.