ನೈತಿಕತೆ ಇದ್ದರೆ ಸಿಎಂ ರಾಜೀನಾಮೆ ನೀಡಿ ಹೊರಬರಲಿ: ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್

ವಿಜಯಪುರ: ಬ್ಲ್ಯಾಕ್‌ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ. ಕೆಲವರು ಸಿಡಿ ತೋರಿಸಿ ಯಡಿಯೂರಪ್ಪರನ್ನ ಹೆದರಿಸಿ ಸಚಿವರಾಗಿದ್ದಾರೆ. ಇನ್ನೂ ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ. ಈ‌ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪ ಸಮಸ್ತ ಲಿಂಗಾಯತ ಸಮುದಾಯದ ಮರ್ಯಾದೆ ತೆಗೆದಿದ್ದಾರೆ. ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಬರಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂಗೆ ಸವಾಲು ಹಾಕಿದ್ದಾರೆ. ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಮಠಗಳಿಗೆ ಹಣ ನೀಡಿ ನನ್ನ ಕೆಳಗಿಳಿಸಿದರೆ […]

ಮೂವರು ಸಿಎಂಗೆ ಸಿಡಿ ತೋರಿಸಿ, ಬ್ಲ್ಯಾಕ್ ಮೇಲ್ ಮಾಡಿ ಸಚಿವರಾಗಿದ್ದಾರೆ: ಯತ್ನಾಳ್ ಗಂಭೀರ ಆರೋಪ

ವಿಜಯಪುರ: ಬ್ಲ್ಯಾಕ್‌ಮೇಲ್ ಮಾಡಿದವರಿಗೆ, ಹಣ ಕೊಟ್ಟವರಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೆ ಕೆಲವರು ಸಿಡಿ ತೋರಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನ ಹೆದರಿಸಿ ಸಚಿವರಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾಗಿ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ವಿರುದ್ಧ ಗುಡುಗಿದರು. ಒಬ್ಬರನ್ನು ರಾಜಕೀಯ ಕಾರ್ಯದರ್ಶಿ ಮಾಡಿದ್ದಾರೆ. ಇಬ್ಬರು ಸಚಿವರನ್ನು ಮಾಡಿದ್ದಾರೆ. ಈ ಮೂವರು ಕಳೆದ ಮೂರು ತಿಂಗಳಿನಿಂದ ಯಡಿಯೂರಪ್ಪನವರ ಸಂಬಂಧಿಸಿದ ಕೆಲ ಸಿಡಿಗಳನ್ನು ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಅದರಲ್ಲಿ […]

ನೂತನ ಸಚಿವರ ಪಟ್ಟಿ ಪ್ರಕಟ: ಮುನಿರತ್ನಗೆ ಕೈತಪ್ಪಿದ ಸಚಿವ ಸ್ಥಾನ, ನಾಗೇಶ್ ಗೆ ಕೊಕ್

ಬೆಂಗಳೂರು: ಇಂದು ಸಂಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ 7 ಶಾಸಕರ ಹೆಸರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಉಮೇಶ್ ಕತ್ತಿ, ಎಸ್. ಅಂಗಾರ,  ಸಿ.ಪಿ. ಯೋಗೀಶ್ವರ್, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್. ಶಂಕರ್, ಮುರುಗೇಶ್ ನಿರಾಣಿ ಅವರ ಹೆಸರುಗಳನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಮುನಿರತ್ನ ಅವರ ಹೆಸರನ್ನು ಪ್ರಮಾಣವಚನ ಸ್ವೀಕರಿಸಲಿರುವ ಶಾಸಕರ ಪಟ್ಟಿಯಿಂದ ಅವರ ಹೆಸರನ್ನು ಕೈಬಿಟ್ಟಿದ್ದಾರೆ. ನಾಗೇಶ್ ಗೆ ಕೊಕ್: ಅಬಕಾರಿ ಸಚಿವ ಎಚ್. ನಾಗೇಶ್ ಅವರನ್ನು […]

ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್: ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಿಸಿ ಚಾಲನೆ

ಉಡುಪಿ: ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್ ನ ಪ್ರಥಮ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ಉಡುಪಿ ಮಿತ್ರ ಆಸ್ಪತ್ರೆಯ ಬಳಿಯ ವಾದಿರಾಜ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್ ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಕೊಟ್ಟಿದೆ. ಜಿಲ್ಲಾಡಳಿತಕ್ಕೆ ಅಗತ್ಯವಾಗಿ ಬೇಕಾದ ಆರೋಗ್ಯ ಉಪಕರಣಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸಿಕೊಟ್ಟಿದೆ. ಪ್ರಸ್ತುತ ಮೊದಲ ವರ್ಷವನ್ನು […]

ಉಡುಪಿ: ಇಂದು ಪಂಚಮಿ ಸೌಹಾರ್ದ ಸಹಕಾರಿಯ ಸುಸಜ್ಜಿತ ನೂತನ ಕಚೇರಿಯ ಉದ್ಘಾಟನಾ ಸಮಾರಂಭ

ಉಡುಪಿ: ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಮಠದಬೆಟ್ಟು ರೋಡ್ ನ ಆರ್.ಎಸ್.ಬಿ. ವಿಂಡ್ಸರ್ ಪ್ರಥಮ ಮಹಡಿಯಲ್ಲಿ ಇಂದು ಬೆಳಿಗ್ಗೆ 9ಗಂಟೆಗೆ ಪಂಚಮಿ ಸೌಹಾರ್ದ ಸಹಕಾರಿ ನಿ. ಇದರ ಸುಸಜ್ಜಿತ ನೂತನ ಕಚೇರಿಯ ಉದ್ಘಾಟನಾ ಸಮಾರಂಭ ನಡೆಯಲಿದೆ. ಉಡುಪಿ ಶಾಸಕ ಕೆ. ರಘುಪತಿ ಭಟ್ ನೂತನ ಕಚೇರಿಯನ್ನು ಉದ್ಘಾಟಿಸುವರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ, ಮಣಿಪಾಲ ಆರ್ ಎಸ್ ಬಿ ಸಂಘದ ಅಧ್ಯಕ್ಷ ಎಂ. ಗೋಕುಲದಾಸ್ ನಾಯಕ್, […]