ಕಾರ್ಕಳ: ಬಸ್ ಡಿಕ್ಕಿ ಹೊಡೆದು ಶಿಕ್ಷಕ ಮೃತ್ಯು

ಕಾರ್ಕಳ: ರಸ್ತೆ ಬದಿಯಲ್ಲಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ನಿಂತಿದ್ದ ವೇಳೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಫಾರೆವರ್‌ ಸಮೀಪ ಇಂದು ಸಂಭವಿಸಿದೆ. ನಿಟ್ಟೆ ಗ್ರಾಮದ ಶಿಕ್ಷಣ ತಜ್ಞ ವಸಂತ ಕುಮಾರ್ ನಿಟ್ಟೆ (45) ಮೃತ ವ್ಯಕ್ತಿ. ಇವರು ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಕಾರ್ಕಳದಿಂದ ಪಡುಬಿದ್ರಿ ಕಡೆಗೆ ಸಾಗುತ್ತಿದ್ದ ವಿಶಾಲ್ ಬಸ್ ರಸ್ತೆಯ ಎಡ ಭಾಗಕ್ಕೆ ಬಂದು […]

ಉಡುಪಿ: ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಉಡುಪಿ: ಕೋವಿಡ್ ಲಸಿಕಾ ಅಭಿಯಾನಕ್ಕೆ ಉಡುಪಿ ಅಜ್ಜರಕಾಡಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಚಾಲನೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ದೇಶವ್ಯಾಪಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿಯೇ ಜಿಲ್ಲೆಯಲ್ಲೂ ಲಸಿಕಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ […]

ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ: ಇಡೀ ವಿಶ್ವ ಭಾರತವನ್ನು ಭರವಸೆಯಿಂದ ನೋಡುತ್ತಿದೆ- ಪ್ರಧಾನಿ ಮೋದಿ

ನವದೆಹಲಿ: ದೇಶವ್ಯಾಪಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆನ್ ಲೈನ್ ಮೂಲಕ ಚಾಲನೆ ನೀಡಿದರು. ಬಳಿಕ ದೇಶದ ಜನತೆಯನ್ನುದ್ದೇಶಿ ಮಾತನಾಡಿದ ಅವರು, ಇಡೀ ವಿಶ್ವವೇ ಇಂದು ಭಾರತದ ಕಡೆ ತಿರುಗಿ ನೋಡುತ್ತಿದೆ. ಲಸಿಕೆ ಯಾವಾಗ ದೊರೆಯುತ್ತದೆ ಎಂದು ಎಲ್ಲರೂ ಕೇಳುತ್ತಿದ್ದರು. ಇದೀಗ ಅದು ದೊರೆತಿದೆ. ಈ ಸಂದರ್ಭದಲ್ಲಿ ದೇಶದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆ ಎಂದರು. ಲಸಿಕೆ ಬಂತೆಂದು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರಬೇಡಿ. ಮೊದಲ ಡೋಸ್ ನಿಂದ […]

ಮಲ್ಪೆ: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಮಲ್ಪೆ ಬಂದರಿನಿಂದ ಸರಿಸುಮಾರು 13 ನಾಟಿಕಲ್ ಮೈಲ್ ದೂರದಲ್ಲಿ ಸಂಭವಿಸಿದೆ. ಸುಧಾಕರ ವೆಂಕಣ್ಣ ಹೊಸಕಟ್ಟಿ (39) ಮೃತ ಮೀನುಗಾರ. ಇವರು ಮಲ್ಪೆಯ ಸೋಮಶೇಖರ ಬಂಗೇರ ಸೇರಿದ ತ್ರಿಜಲ್ ಬೋಟಿನಲ್ಲಿ ದುಡಿಯುತ್ತಿದ್ದರು. ಜ. 10ರಂದು ಸಂಜೆ 4 ಗಂಟೆಗೆ ಮಲ್ಪೆ ಬಂದರಿನಿಂದ ಮೀನುಗಾರರಾದ ಉಮೇಶ್, ರಾಮ, ಶರತ್, ಚುಡಾಮಣಿ ಅವರೊಂದಿಗೆ ಆಳಸಮುದ್ರ ಮೀನುಗಾರಿಕೆ ತೆರಳಿದ್ದರು. ಜ. 13ರಂದು ಮಧ್ಯರಾತ್ರಿ 1ಗಂಟೆ ಸುಮಾರಿಗೆ 13 […]