ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ: ಫೆ. 4ಕ್ಕೆ ‘ದೊಂದಿ ಬೆಳಕಿನ ಛಾಯಾಚಿತ್ರ ಸ್ಪರ್ಧೆ’

ಉಡುಪಿ: ಕೊಡವೂರು ಶ್ರೀ ಶಂಕರನಾರಾಯಣ ರಾಶಿಪೂಜೆ ಸೇವಾ ಸಮಿತಿ ಪ್ರಾಯೋಜಕತ್ವದಲ್ಲಿ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಷಿಯೇಷನ್  ಉಡುಪಿ ವಲಯ ‘ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜೆಗೆ ಛಾಯಾಚಿತ್ರ ಸ್ಪರ್ಧೆಯ ಸಾಂಗತ್ಯ -2021’ (ಈಶ ಸೇವೆಯೊಂದಿಗೆ ಕಲಾ ಸೇವೆ) ಅನ್ನು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 4ರಂದು ಆಯೋಜಿಸಿದೆ. ಅಂದು ದೇಗುಲದಲ್ಲಿ ದೊಂದಿ ಬೆಳಕಿನಲ್ಲಿ ನಡೆಯಲಿರುವ ರಾಶಿ ಪೂಜಾ ಮಹೋತ್ಸವದ ಚಿತ್ತಾಕರ್ಷಕ ದೃಶ್ಯಗಳನ್ನು ಛಾಯಾಗ್ರಾಹಕರು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದು ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನ ತಮ್ಮದಾಗಿಸಿ ಕೊಳ್ಳುವ […]

ಕಾರುಗಳ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ, ಎಂಟು ಮಂದಿಗೆ ಗಂಭೀರ ಗಾಯ

ಚಿತ್ರದುರ್ಗ: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಸಂಭವಿಸಿದೆ. ಮೃತರನ್ನು ಬೆಂಗಳೂರು ಮೂಲದ ವನಜಾಕ್ಷಿ(36) ಹಾಗೂ ಚಿತ್ರದುರ್ಗ ಮೂಲದ ಮಹೇಂದ್ರ(50) ಎಂದು ಗುರುತಿಸಲಾಗಿದೆ. ಮಾರುತಿ ಕಾರು ಹಾಗೂ ಹುಂಡೈ ಕಾರುಗಳ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. […]

ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಾಟ: ಪ್ರಕರಣದ ಹಿಂದಿದೆ ನಟ ದೀಪ್ ಸಿಧು ಕೈವಾಡ.?

ದೆಹಲಿ: ಕೆಂಪುಕೋಟೆಯ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಇದರ ನೇತೃತ್ವ ವಹಿಸಿದ್ದು ಪಂಜಾಬ್‌ ಚಿತ್ರನಟ ದೀಪ್‌ ಸಿಧು ಎಂಬುವುದು ತಿಳಿದು ಬಂದಿದೆ. ಈತ ಬಿಜೆಪಿ ಸಂಸದ ಸನ್ನಿ ಡಿಯೋಲ್ ಬೆಂಬಲಿಗ ಸಹ ಆಗಿದ್ದಾನೆ. ದೀಪ್‌ ಸಿಧು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಮತಯಾಚನೆ ಮಾಡಿದ್ದರು. ಗುರುದಾಸ್‍ಪುರದ ಬಿಜೆಪಿ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರ ಮಾಡಿದ್ದರು. ಸದ್ಯ ಈ ವಿಷಯ ತಿಳಿಯುತ್ತಿದ್ದಂತೆ ದೀಪ್‌ ಸಿಧು ಅವರು ಪ್ರಧಾನಿ ನರೇಂದ್ರ […]