ಫೇಸ್ ಬುಕ್ ಗೆಳೆಯನೊಂದಿಗೆ ವಿವಾಹಿತ ಮಹಿಳೆ ಪರಾರಿ: ದೂರು ದಾಖಲು

ವಿಟ್ಲ: ವಿವಾಹಿತ ಮಹಿಳೆಯೊಬ್ಬರು ಫೇಸ್ ಬುಕ್ ಗೆಳೆಯನೊಂದಿಗೆ ಪರಾರಿಯಾಗಿರುವ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಪಾಣಾಜಿಕೋಡಿಯ ಅರುಣ್ ಡಿಸೋಜ ಎಂಬವರ ಪತ್ನಿ ಶಿಲ್ಪಾ ಡಿಸೋಜ ಪರಾರಿಯಾದ ಮಹಿಳೆ. ತನ್ನ ಪತ್ನಿ ಶಿಲ್ಪಾ ಬೆಂಗಳೂರಿನ ಫೇಸ್ ಬುಕ್ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ ಎಂದು ಆಕೆಯ ಪತಿ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾನು ಮನೆ ಬಿಟ್ಟು ಹೋಗುತ್ತಿದ್ದೇನೆಂದು ಶಿಲ್ಪಾ ಡಿಸೋಜ ತನ್ನ ಪತಿಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ಪತಿ ಅರುಣ್ ಸಾಕಷ್ಟು […]
ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲಾಗುವುದು: ಸಚಿವ ಅಂಗಾರ

ಕಡಬ: ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಸಚಿವರ ಜೊತೆ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಅಧಿವೇಶನದ ಸಂದರ್ಭದಲ್ಲಿ ಕರಾವಳಿಯ ಎಲ್ಲ ಶಾಸಕರ ಉಪಸ್ಥಿತಿಯಲ್ಲಿ ವಿಶೇಷ ಸಭೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ವಿಶೇಷ ಸಭೆ ನಡೆಸಿ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು. 94ಸಿ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕೊಡುವಂತೆ ವಿನಂತಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಹೇಳಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ […]
ಕಾಪು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ್ ಸಾಲಿಯಾನ್ ಆಯ್ಕೆ

ಕಾಪು: ಕಾಪು ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ನವೀನ್ ಸಾಲಿಯಾನ್ ಅವರು ಗೆಲುವು ಸಾಧಿಸಿದ್ದಾರೆ. ಜ. 12ರಂದು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿತ್ತು.
ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಕ್ಕೆ ಕ್ರಮ: ಸಚಿವ ಲಕ್ಷ್ಮಣ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್ ಗಳನ್ನು ಲೀಸ್ ಗೆ ಪಡೆದು ಓಡಾಟ ಆರಂಭಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು , ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ಅವರು ಭಾನುವಾರ ಉಡುಪಿಯಲ್ಲಿ 395 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು. ಕೇಂದ್ರ […]
ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಯೋಗೀಶ್ ನಯನ್ ಇನ್ನಾ ಗೆಲುವು

ಕಾರ್ಕಳ: ಜನವರಿ 12ರಂದು ನಡೆದ ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯೋಗೀಶ್ ನಯನ್ ಇನ್ನಾ ಅವರು 344 ಮತಗಳೊಂದಿಗೆ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಸುಹಾಸ್ ಸಂತೋಷ್ ಕಾವ 320 ಪಡೆದು ತೀವ್ರ ಸ್ಪರ್ಧೆಯೊಡ್ಡಿದ್ದರು. ಅಧ್ಯಕ್ಷ ಸ್ಥಾನಕ್ಕೆ ಯೋಗೀಶ್ ನಯನ್ ಇನ್ನಾ, ಸುಹಾಸ್ ಕಾವ, ಪ್ರದೀಪ್ ಬೇಲಾಡಿ ಸ್ಪರ್ಧಿಸಿದ್ದರು. ಯೋಗೀಶ್ ಇನ್ನಾ 24 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.