ಶಿವಾಜಿ ವಂಶಸ್ಥರು ಕರ್ನಾಟಕದವರು; ಉದ್ಧವ್ ಠಾಕ್ರೆ ವಿರುದ್ಧ ಗುಡುಗಿದ ಡಿಸಿಎಂ ಲಕ್ಷ್ಮಣ ಸವದಿ

ಉಡುಪಿ: ಛತ್ರಪತಿ ಶಿವಾಜಿ ಕುಟುಂಬಸ್ಥರು ಕರ್ನಾಟಕ ಮೂಲದವರು. ಶಿವಾಜಿಯ ಪೂರ್ವಜರು ಕರ್ನಾಟಕದ ಗದಗ ಜಿಲ್ಲೆಯಲ್ಲಿದ್ದರು. ಇದನ್ನು ತಿಳಿದುಕೊಳ್ಳುವ ಬದಲು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವಿವೇಕಿತನದ ಹೇಳಿಕೆ ನೀಡುತ್ತಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದರು. ಇಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಿವೆ. ಅದರ ಪರಿಸ್ಥಿತಿ ಈಗ ಮನೆಯೊಂದು ಮೂರು ಬಾಗಿಲು ಎಂಬಂತೆ ಆಗಿದೆ. […]
ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಗಾಂಧೀಜಿ ಪುಣ್ಯಸ್ಮರಣೆ

ಉಡುಪಿ: ಮಹಾತ್ಮಾ ಗಾಂಧಿಜಿಯವರ ತತ್ವಾದರ್ಶಗಳು ಮತ್ತು ನಾಯಕತ್ವ ಸಮಾಜಕ್ಕೆ ಎಂದೆಂದಿಗೂ ಪ್ರಸ್ತುತವಾಗಿದೆ. ತನ್ನ ಸರಳತೆ, ಸತ್ಯ ನಿಷ್ಠೆ, ಅಹಿಂಸಾ ತತ್ವ ಮತ್ತು ಪ್ರಾಮಾಣಿಕತೆಯಿಂದ ಇಂದು ಇಡೀ ವಿಶ್ವಕ್ಕೆ ಮಾದರಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಆಯೋಜಿಸಿದ ಹುತಾತ್ಮ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲರೂ ಪ್ರೀತಿಸಬಹುದಾಗಿದ್ದ ವ್ಯಕ್ತಿತ್ವ ಶಕ್ತಿಯನ್ನು ಹೊಂದಿದ್ದ ಮಹಾತ್ಮಾಗಾಂಧೀ ದೇಶದ […]
ಇತಿಹಾಸ ಪ್ರಸಿದ್ದ ಹೊಕ್ಕಾಡಿಗೋಳಿ “ವೀರ-ವಿಕ್ರಮ” ಜೋಡುಕರೆ ಕಂಬಳ ಫಲಿತಾಂಶ

ಬಂಟ್ವಾಳ: ಇತಿಹಾಸ ಪ್ರಸಿದ್ದ ಹೊಕ್ಕಾಡಿಗೋಳಿ “ವೀರ – ವಿಕ್ರಮ” ಜೋಡುಕರೆ ಬಯಲು ಕಂಬಳ ಈ ವರ್ಷದ ಮೊದಲ ಕಂಬಳ ಕೂಟ ಭಾನುವಾರ ಸಂಪನ್ನಗೊಂಡಿತು. ಕನೆಹಲಗೆ: 4 ಜೊತೆ, ಅಡ್ಡಹಲಗೆ: 7 ಜೊತೆ, ಹಗ್ಗ ಹಿರಿಯ: 15 ಜೊತೆ , ನೇಗಿಲು ಹಿರಿಯ: 26 ಜೊತೆ, ಹಗ್ಗ ಕಿರಿಯ: 18 ಜೊತೆ, ನೇಗಿಲು ಕಿರಿಯ: 97 ಜೊತೆ ಸೇರಿ 167 ಜೊತೆ ಕೋಣಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಫಲಿತಾಂಶ ಹೀಗಿದೆ. ಕನೆಹಲಗೆ: ವಾಮಂಜೂರು ತಿರುವೈಲುಗುತ್ತು ಅಭಯ್ ನವೀನ್ಚಂದ್ರ ಆಳ್ವ ಹಲಗೆ […]