ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ಅಪಘಾತ

ಬೆಂಗಳೂರು: ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಸಚಿವ ಕೋಟ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ಘಟನೆ ನಡೆದಿದೆ. ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಭಾಗಶಃ ಹಾನಿಯಾಗಿದೆ ಎನ್ನಲಾಗಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉದ್ಯಾವರ ಗ್ರಾಪಂಗೆ ಬೀಗ ಜಡಿದ ಗ್ರಾಮಸ್ಥರು

ಉಡುಪಿ: ಪರಿಸರಕ್ಕೆ ಮಾರಕವಾಗಿರುವ ಕೈಗಾರಿಕೆಗಳಿಗೆ ಉದ್ಯಾವರ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಪರವಾನಿಗೆ ನೀಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಇಂದು ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಾರ್ವಜನಿಕರ, ಗ್ರಾಮಸಭೆಯ, ಪಂಚಾಯತಿ ಸಭೆಗಳ ನಿರ್ಣಯದ ಹೊರತಾಗಿಯೂ ಪಂಚಾಯಿತಿ ಆಡಳಿತಾಧಿಕಾರಿ ನಾಗಶಯನ ಹಾಗೂ ಪಿಡಿಒ ಪ್ರವೀಣ್ ಡಿಸೋಜ ಅವರು ಜನವಿರೋಧಿ ಹಾಗೂ ಪರಿಸರಕ್ಕೆ ಮಾರಕವಾದ ಉದ್ಯಮಗಳಿಗೆ ಪರವಾನಿಗೆ ನೀಡಿದ್ದರು ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ನೇರವಾಗಿ ಪಂಚಾಯಿತಿಗೆ ಬಂದು, ಕಚೇರಿಗೆ ಬೀಗ ಜಡಿದು ಅಧಿಕಾರಿಗಳ ವಿರುದ್ಧ ಆಕ್ರೋಶ […]

ಪಕ್ಕಾಸಿಗೆ ಚೂಡಿದಾರದ ಶಾಲು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ವೇಣೂರು: ಮನೆಯ ಪಕ್ಕಾಸಿಗೆ ಚೂಡಿದಾರದ ಶಾಲು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಕತ್ತೋಡಿಬೈಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ವೇಣೂರು ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಅವರ ಪುತ್ರಿ ಸೌಮ್ಯಾ (19) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿದ್ದು, ಲಾಕ್‌ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದಳು ಎನ್ನಲಾಗಿದೆ. ಇಂದು ಬೆಳಿಗ್ಗೆ ಎದ್ದು ಉಪಹಾರ ಸೇವಿಸಿದ್ದ ಸೌಮ್ಯ ಬಳಿಕ […]

ಬಿಜೆಪಿ ಉಡುಪಿ ಜಿಲ್ಲಾ ಸಹ ವಕ್ತರರಾಗಿ ಪ್ರತಾಪ್ ಚಂದ್ರ ಶೆಟ್ಟಿ ಚೇರ್ಕಾಡಿ ನೇಮಕ

ಉಡುಪಿ: ಜಿಲ್ಲಾ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಚೇರ್ಕಾಡಿ ಅವರನ್ನು ಬಿಜೆಪಿ ಉಡುಪಿ ಜಿಲ್ಲಾ ಸಹ ವಕ್ತಾರರನ್ನಾಗಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇಮಕಗೊಳಿಸಿದ್ದಾರೆ.

ಕಾರ್ಕಳ: ಮಾಟ ಮಂತ್ರ, ನಾಗದೋಷದ ನಂಬಿಕೆ ಹುಟ್ಟಿಸಿ ವ್ಯಕ್ತಿಯಿಂದ ₹30 ಲಕ್ಷ ದೋಚಿದ ವಂಚಕಿ.!

ಕಾರ್ಕಳ: ಮಾಟ ಮಂತ್ರ, ನಾಗದೋಷದ ನಂಬಿಕೆ ಹುಟ್ಟಿಸಿ ವ್ಯಕ್ತಿಯೊಬ್ಬರಿಗೆ ವಂಚಕಿಯೊಬ್ಬಳು ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಮಿಯ್ಯೂರು ಗ್ರಾಮದ ಮಂಜಡ್ಕ ಮನೆಯ ನಿವಾಸಿ ಲೋಯ್‌ ಮಚಾದೋ (36) ವಂಚನೆಗೆ ಒಳಗಾದವರು. ಸುನೀತಾ ಮೆಂಡೋನ್ಸಾ ಎಂಬಾಕೆ ಲಕ್ಷಾಂತರ ಲಪಟಾಯಿಸಿದ ವಂಚಕಿ. ಲೋಯ್ ಮಚಾದೋ ಅವರಿಗೆ 2014ರಲ್ಲಿ ತಮ್ಮನ ಮೂಲಕ ಸುನೀತಾಳ ಪರಿಚಯವಾಗಿತ್ತು. ಈಕೆ ಕಾಯಿಲೆಯಿಂದ ಬಳಲುತ್ತಿದ್ದು, ಹೀಗಾಗಿ ಲೋಯ್ ಮಚಾದೋ ಮಾನವೀಯತೆಯಿಂದ ಮಕ್ಳಳ ಜತೆಗೆ ಮನೆಗೆ ಕರೆದುಕೊಂಡು […]