ಕಾರ್ಕಳ ಡಾ. ಎನ್ಎಸ್ಎಎಂ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

ಕಾರ್ಕಳ: ಬೆಳ್ಮಣ್ ಗ್ರಾಮದ ಜಂತ್ರ ಪರಿಸರದಿಂದ ಪಿಲಾರು ಸೂಡ ಕ್ರಾಸ್ ವರೆಗೆ ಸುಮಾರು 180 ರಾಷ್ಟ್ರೀಯ ಸೇವಾ ಯೋಜನಾ ಸ್ವಯಂ ಸೇವಕರು ಶನಿವಾರ ಶ್ರಮದಾನದ ಮೂಲಕ ರಸ್ತೆ ಬದಿಯನ್ನು ಸ್ವಚ್ಛತೆಗೊಳಿಸಿದರು. ಕಾರ್ಕಳ ಡಾ. ಎನ್ಎಸ್ಎಎಂ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಅವಳಿ ಘಟಕಗಳು, ಸ್ವಚ್ಛತಾ ತಂಡ ಬೆಳ್ಮಣ್, ಜೆಸಿಐ ಬೆಳ್ಮಣ್, ಲಯನ್ಸ್ ಕ್ಲಬ್ ಬೆಳ್ಮಣ್, ಲಯನ್ಸ್ ಕ್ಲಬ್ ಸೆಂಚೂರಿ ಬೆಳ್ಮಣ್ ಇವರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಸಿಐ ಬೆಳ್ಮಣ್ಣು ನಿಕಟ ಪೂರ್ವ ಅಧ್ಯಕ್ಷ ಗಣಪತಿ ಆಚಾರ್ಯ ಕಾರ್ಯಕ್ರಮ […]

ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅವನು ಹೆಣ್ಣಾಗಬೇಕು’ ಕೃತಿ ಅನಾವರಣ

ಉಡುಪಿ: ಸಾಹಿತಿ ಹಾಗೂ ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಕವನ ಸಂಕಲನ ‘ಅವನು ಹೆಣ್ಣಾಗಬೇಕು’ ಕೃತಿ ಬಿಡುಗಡೆ ಸಮಾರಂಭ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಶನಿವಾರ ನಡೆಯಿತು. ಕನ್ನಡದ ಹಿರಿಯ ಸಾಹಿತಿ ನಾಟಕಗಾರ ಎಸ್.ಎನ್. ಸೇತುರಾಂ ಕೃತಿ ಬಿಡುಗಡೆಗೊಳಿಸಿದರು. ಚಲನಚಿತ್ರ ಹಾಗೂ ನಾಟಕ ನಿರ್ದೇಶಕ ಕಾಸರಗೋಡು ಚಿನ್ನಾ, ಸಾಹಿತಿ ಸುಧಾ ಆಡುಕಳ, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ನಾಯ್ಕ್, ಎಂ.ಯು.ಪಿ ಪ್ರಧಾನ ಸಂಪಾದಕಿ ಪ್ರೊ. ನೀತಾ ಇನಾಂದಾರ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ಉಡುಪಿ […]

ಕಾರ್ಕಳ: ಅಪ್ರಾಪ್ತ ಮೂಕಿ ಬಾಲಕಿಯ ಮೇಲಿನ ಅತ್ಯಾಚಾರ ಸಾಬೀತು; ಅಪರಾಧಿಗೆ ಫೆ. 22ಕ್ಕೆ ಶಿಕ್ಷೆ ಪ್ರಕಟ

ಉಡುಪಿ: ಕಳೆದ ಮೂರು ವರ್ಷಗಳ ಹಿಂದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಅಂಗವಿಕಲ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪದಡಿ ಬಂಧಿತನಾಗಿದ್ದ ಆರೋಪಿಯ ಅಪರಾಧ ಸಾಬೀತಾಗಿದ್ದು, ಫೆ. 22ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ (FTSC-1) ನ್ಯಾಯಾಧೀಶ ಯಾದವ್ ವನಮಾಲಾ ಆನಂದರಾವ್ ಆದೇಶಿಸಿದ್ದಾರೆ. ಘಟನೆಯ ವಿವರ: ಕಾರ್ಕಳದ ನಿವಾಸಿ ಹರೀಶ್ (33) ಎಂಬಾತ […]

ನಮ್ಮಪ್ಪ ಸಿದ್ದರಾಮಯ್ಯರ ರೈಟ್ ಹ್ಯಾಂಡ್: ಕಂಠಪೂರ್ತಿ ಕುಡಿದು ಮಣಿಪಾಲ ವೈದ್ಯಕೀಯ ವಿದ್ಯಾರ್ಥಿಯಿಂದ ಪೊಲೀಸರಿಗೆ ಧಮ್ಕಿ

ಉಡುಪಿ: ಮದ್ಯಪಾನ ಮಾಡಿ ಕಾರು ಚಾಲನೆ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಸಂಚಾರಿ ಪೊಲೀಸರು ತಡೆದು ನಿಲ್ಲಿಸಿ, ಫೈನ್ ಹಾಕಲು ಮುಂದಾದಾಗ ಆತ ಪೊಲೀಸರಿಗೆ ಆವಾಜ್ ಹಾಕಿದ ಘಟನೆ ಉಡುಪಿಯ ಕಲ್ಸಂಕ ಜಂಕ್ಷನ್ ಬಳಿ ಇಂದು ನಡೆದಿದೆ. ಆಂಧ್ರಪ್ರದೇಶ ಮೂಲದ ಅನುರಾಗ ರೆಡ್ಡಿ ಎಂಬಾತ ಪೊಲೀಸರಿಗೆ ಆವಾಜ್ ಹಾಕಿದ ವಿದ್ಯಾರ್ಥಿ. ಈತ ಮಣಿಪಾಲ ವಿವಿಯ ವೈದ್ಯಕೀಯ ವಿದ್ಯಾರ್ಥಿಯಾಗಿದ್ದಾನೆ. ಪೊಲೀಸರು ಈತನ ಕಾರು ನಿಲ್ಲಿಸಿ ಪರಿಶೀಲನೆ ನಡೆಸಿದ್ದು, ಆಲ್ಕೋಮೀಟರ್ ನಲ್ಲಿ ಕುಡಿತದ ಪ್ರಮಾಣ ಪತ್ತೆಯಾಗಿದೆ. ಹೀಗಾಗಿ ಕಾನೂನಿನಂತೆ ಪೊಲೀಸರು ದಂಡ ಹಾಕಲು […]

ಶೀಘ್ರದಲ್ಲೇ 6 ಸಾವಿರ ಪೊಲೀಸ್ ಸಿಬ್ಬಂದಿಯ ನೇಮಕಾತಿ: ಗೃಹ ಸಚಿವ ಬೊಮ್ಮಾಯಿ

ಕಾರ್ಕಳ: ಪ್ರಸಕ್ತ ವರ್ಷದಲ್ಲಿ ರಾಜ್ಯ ಸರಕಾರವು 6 ಸಾವಿರ ಪೊಲೀಸ್‌ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಿದೆ. ಮುಂದಿನ ಮೂರು ವರ್ಷದಲ್ಲಿ 16 ಸಾವಿರ ಪೊಲೀಸರ ನೇಮಕಾತಿಯಾಗಲಿದ್ದು, ನೇಮಕಾತಿ ವೇಳೆ ಶೇ. 25 ರಷ್ಟು ಮಹಿಳೆಯರಿಗೆ ಮತ್ತು ಶೇ. 2ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದರು. ಕಾರ್ಕಳ ಪೊಲೀಸ್‌ ವಸತಿ ಗೃಹವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಪೊಲೀಸ್‌ ಇಲಾಖೆ ಡ್ರಗ್ಸ್‌ ಸೇವನೆ, ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕಳೆದ ಹತ್ತು […]