ಕರಾವಳಿಯಾದ್ಯಂತ ಮುಂದಿನ ಐದು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ: ಕರಾವಳಿಯಾದ್ಯಂತ ಮುಂದಿನ ಐದು ದಿನಗಳ‌ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 30ರಿಂದ ಮೇ 4ರ ವರೆಗೆ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ‌ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಹಾಲು ಒಕ್ಕೂಟದಲ್ಲಿ 80 ಹುದ್ದೆಗಳಿಗೆ ಅರ್ಜಿ‌ ಆಹ್ವಾನ

ಮಂಗಳೂರು: ಮಂಗಳೂರಿನ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶದಲ್ಲಿ ಹಾಲನ್ನು ಸಂಗ್ರಹಿಸಿ, ಸಂಸ್ಕರಣೆ/ ವಿವಿಧ ಉತ್ಪನ್ನಗಳ ತಯಾರಿಕೆ ಮಾಡಿ “ನಂದಿನಿ’ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತದೆ. ಈ ಕಾರ್ಯವನ್ನು ಬಲಪಡಿಸಲು ಕೆಲ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 80 ಹುದ್ದೆಗಳಲ್ಲಿ ಎಸ್ಸಿ, ಎಸ್ಟಿ, ಪ್ರವರ್ಗ 1, 2ಎ, 2ಬಿ, 3ಎ, 3ಬಿ, […]

ಚುನಾವಣೆ ಫಲಿತಾಂಶಕ್ಕೆ ಮೊದಲೇ ಕಾಂಗ್ರೆಸ್ ಅಭ್ಯರ್ಥಿ ಕೋವಿಡ್ ನಿಂದ ಮೃತ್ಯು

ರಾಮನಗರ: ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮಹಿಳಾ ಅಭ್ಯರ್ಥಿಯೊಬ್ಬರು ಮತ ಎಣಿಕೆಗೆ ಒಂದು ದಿನ ಬಾಕಿ ಇರುವಾಗಲೇ ಕೋವಿಡ್ ಸೋಂಕಿನಿಂದ ನಿಧನ ಹೊಂದಿದ್ದಾರೆ. ರಾಮನಗರ ನಗರಸಭೆ ಚುನಾವಣೆಯಲ್ಲಿ 4ನೇ ವಾರ್ಡಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲೀಲಾ ಗೋವಿಂದರಾಜು (42) ಎಂಬವರು ಮೃತಪಟ್ಟಿದ್ದಾರೆ. ಇವರು ವಾರದ ಹಿಂದೆ ಚುನಾವಣೆ ಪ್ರಚಾರದ ವೇಳೆಯೇ ಅವರಿಗೆ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಬೆಳಿಗ್ಗೆ ಮೃತಪಟ್ಟರು. ಇದೇ ತಿಂಗಳ 27ರಂದು ರಾಮನಗರ ನಗರಸಭೆ ಚುನಾವಣೆ ನಡೆದಿದ್ದು, ನಾಳೆ (ಏ.30) […]

ಮೊದಲು ರಕ್ತದಾನ ಮಾಡಿ, ನಂತರ ಕೋವಿಡ್ ಲಸಿಕೆ ಪಡೆಯಿರಿ: ಕುಯಿಲಾಡಿ ಸುರೇಶ್ ನಾಯಕ್ ಕರೆ

ಉಡುಪಿ: ಕೇಂದ್ರ ಸರಕಾರದ ಆದೇಶದಂತೆ ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯುವ ಅಭಿಯಾನ ಆರಂಭಗೊಳ್ಳಲಿದೆ. ಆದರೆ, ಕೋವಿಡ್ ಲಸಿಕೆ ಪಡೆದ ಬಳಿಕ ಮುಂದಿನ 28 ದಿನಗಳ ವರೆಗೆ ರಕ್ತದಾನ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ರಕ್ತದ ಅಭಾವವನ್ನು ನೀಗಿಸುವ ಸದುದ್ದೇಶದಿಂದ 18 ವರ್ಷ ಮೇಲ್ಪಟ್ಟ ಯುವಜನರು ಕೋವಿಡ್ ಲಸಿಕೆ ಪಡೆಯುವ ಮೊದಲು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮನವಿ ಮಾಡಿದ್ದಾರೆ. ಕೋವಿಡ್ ಲಸಿಕೆ ಪಡೆದು ಕೊರೊನಾ ಮುಂಜಾಗ್ರತಾ […]

‘ಅಣ್ಣಯ್ಯ’, ‘ರನ್ನ’ ಸಿನಿಮಾದ ನಿರ್ಮಾಪಕ ಎಂ. ಚಂದ್ರಶೇಖರ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ‘ನಿಮಿಷಾಂಬ ಪ್ರೊಡಕ್ಷನ್ ನ ಮಾಲೀಕ ಎಂ. ಚಂದ್ರಶೇಖರ್ ಅವರು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಕಳೆದ 23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ನಂತರ ಮಣಿಪಾಲ್ ಸೆಂಟರ್ ಗೆ ದಾಖಲಾಗಿದ್ದರು. ಬಳಿಕ ಕೋವಿಡ್ ನಿಂದ ಗುಣಮುಖರಾಗಿದ್ದಾದರೂ ಶ್ವಾಸಕೋಶ ಸಮಸ್ಯೆ ಉಲ್ಬಣಗೊಂಡು ಇಂದು (ಏಪ್ರಿಲ್ 29) ಕೊನೆಯುಸಿರೆಳೆದಿದ್ದಾರೆ. ಅವರು, ಕೆ. ರವಿಚಂದ್ರನ್ ನಟನೆಯ ಅಣ್ಣಯ್ಯ, ಸುದೀಪ್ ನಟನೆಯ ‘ರನ್ನ’, ಪುನೀತ್ ರಾಜ್ ಕುಮಾರ್ […]