ಉಡುಪಿ ಶಾಸಕರು ಲಸಿಕಾ ಕೇಂದ್ರಕ್ಕೆ ಬಂದು ಜನರ ಸಮಸ್ಯೆ ಆಲಿಸಬೇಕು: ರಮೇಶ್ ಕಾಂಚನ್ ಆಗ್ರಹ

ಉಡುಪಿ: ಕೋವಿಡ್ ಎರಡನೇ ಅಲೆ ತೀವ್ರಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ‌ ಸಮಯದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ರಘುಪತಿ ಭಟ್ ಅವರು ಲಸಿಕಾ ಕೇಂದ್ರದತ್ತ ದೌಡಾಯಿಸಿ ಜನರ ಸಮಸ್ಯೆಯನ್ನು ಆಲಿಸಬೇಕು ಎಂದು ನಗರಸಭಾ ವಿರೋಧ ಪಕ್ಷದ ನಾಯಕರಾದ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಆಸ್ಪತ್ರೆಗಳು ಈಗಾಗಲೇ ಕೋವಿಡ್ ರೋಗಿಗಳಿಂದ ಭರ್ತಿಯಾಗಿದೆ. ತೀವ್ರ ಅಸ್ವಸ್ಥ ಗೊಂಡವರಿಗೆ ವೆಂಟಿಲೇಟರ್ ಐಸಿಯು ದೊರೆಯುತ್ತಿಲ್ಲ. ನಿಮ್ಮ ಆಡಳಿತದಲ್ಲಿ ಜನರ ಪ್ರಾಣದ ಗತಿ ದೇವರೇ ಗತಿ ಎಂಬಂತೆ ಆಗಿದೆ. ಹೀಗಾಗಿ ಈ […]

ಪತಂಜಲಿ ನ್ಯಾಚುರಲ್ ಬಿಸ್ಕೇಟ್ಸ್ ಪ್ರೈವೆಟ್ ಲಿಮಿಟೆಡ್ ಉದ್ಯಮ ಮಾರಾಟ.!

ದೆಹಲಿ: ಯೋಗಗುರು ಬಾಬಾ ರಾಮ್ ದೇವ್ ಅವರು ಹುಟ್ಟುಹಾಕಿದ ಪತಂಜಲಿ ನ್ಯಾಚುರಲ್ ಬಿಸ್ಕೇಟ್ಸ್ ಪ್ರೈವೆಟ್ ಲಿಮಿಟೆಡ್ ಉದ್ಯಮ ಈಗ ಮಾರಾಟವಾಗಿದೆ. ದೇಶಿ ಕಂಪೆನಿ, ಉತ್ಪನ್ನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಪತಂಜಲಿ ನ್ಯಾಚುರಲ್ ಬಿಸ್ಕೇಟ್ಸ್ ಪ್ರೈವೆಟ್ ಲಿಮಿಟೆಡ್ ನನ್ನು ರುಚಿ ಸೋಯ 60 ಕೋಟಿ ರೂ. ಗಳಿಗೆ ಖರೀದಿ ಮಾಡಿದೆ ಎಂದು ತಿಳಿದುಬಂದಿದೆ. ರೆಗ್ಯುಲೇಟರಿ ಫೈಲಿಂಗ್ ನಲ್ಲಿ ಪತಂಜಲಿಯ ನಿರ್ದೇಶಕ ಮಂಡಳಿ ಮೇ 10ರಂದು ಉದ್ಯಮ ವರ್ಗಾವಣೆಗೆ ಅನುಮೋದನೆ ನೀಡಿದೆ. ರುಚಿ ಸೋಯ ಕಂಪೆನಿಗೆ ಪತಂಜಲಿ ಸಂಸ್ಥೆಯ ಸ್ವಾಧೀನ […]

ಮೋದಿ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯನ್ನು ತನಗೆ ಬೇಕಾದಂತೆ ನಿಯಂತ್ರಿಸುತ್ತಿದೆ: ಮನೀಶ್ ಸಿಸೋಡಿಯಾ

ದೆಹಲಿ: ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯನ್ನು ತನಗೆ ಬೇಕಾದಂತೆ ನಿಯಂತ್ರಿಸುತ್ತಿದೆ ಎಂದು  ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬುಧವಾರ ಹೇಳಿದ್ದಾರೆ ರಾಷ್ಟ್ರ ರಾಜಧಾನಿಗೆ “ಹೆಚ್ಚುವರಿ” ಕೋವಾಕ್ಸಿನ್ ಡೋಸ್ ನೀಡಲು ಸಾಧ್ಯವಿಲ್ಲ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ದೆಹಲಿ ಸರ್ಕಾರಕ್ಕೆ ತಿಳಿಸಿದೆ ಇದು ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಕೆ ನಿಯಂತ್ರಿಸುತ್ತಿರುವುದಕ್ಕೆ ಉದಾಹರಣೆ ಎಂದವರು ಹೇಳಿದ್ದಾರೆ. ದೆಹಲಿಯಲ್ಲಿ ಕೋವಾಕ್ಸಿನ್ ದಾಸ್ತಾನು ಮುಗಿದಿದೆ.  17 ಶಾಲೆಗಳಲ್ಲಿ ಸ್ಥಾಪಿಸಲಾದ ಸುಮಾರು 100 ವ್ಯಾಕ್ಸಿನೇಷನ್ ಕೇಂದ್ರಗಳನ್ನು ಬಂದ್ ಮಾಡಲಾಗಿದೆ ಎಂದು […]

ನಮ್ಮ ದೇಶದಲ್ಲಿ ಕೊರೋನಾ ಸೋಂಕೇ ಇಲ್ಲ ಎಂದು ವಿಶ್ವ ಸಂಸ್ಥೆಗೆ ಹೇಳಿದ ದೇಶ ಯಾವುದು?

ಪ್ಯೋಂಗ್ಯಾಂಗ್: ನಮ್ಮ ದೇಶದಲ್ಲಿ ಇಂದಿಗೂ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಒಂದು ದೇಶ ವಿಶ್ವಸಂಸ್ಥೆಗೆ ಮಾಹಿತಿ ನೀಡಿದೆ.ಅಬ್ಬಾ ಇದೇನಪ್ಪಾ ಜಗತ್ತೇ ಕೊರೋನಾದಿಂದ ತತ್ತರಿಸುತ್ತಿದ್ದರೆ ಅದ್ಯಾವ ದೇಶದಲ್ಲಿ ಕೋರೋನಾನೇ ಇಲ್ವಂತೆ ಅಂತ ಅಚ್ಚರಿ ಪಡ್ತಿದ್ದೀರಾ. ಹೌದಂತೆ. ಕಿಮ್ ಜಾಂಗ್ ಉನ್ ಆಡಳಿತವಿರುವ ಉತ್ತರ ಕೊರಿಯಾದಲ್ಲಿ ಒಂದೇ ಒಂದು ಕೊರೋನಾ ಸೋಂಕು ಪ್ರಕರಣ ದಾಖಲಾಗಿಲ್ಲವಂತೆ. ಈ ಬಗ್ಗೆ ಉತ್ತರ ಕೊರಿಯಾ ಸರ್ಕಾರವೇ ವಿಶ್ವ ಆರೋಗ್ಯ ಸಂಸ್ಥೆಗೆ ಮಾಹಿತಿ ನೀಡಿದ್ದು ಎಲ್ಲೆಡೆ ಅಚ್ಚರಿ ವ್ಯಕ್ತವಾಗಿದೆ. ಏಪ್ರಿಲ್ ನಿಂದ ಈ […]

ನಾನು ದಪ್ಪ ಇದ್ದೀನಿ ಸಣ್ಣಗಾಗಬೇಕು ಅಂತಿದ್ದೀರಾ? ಇಲ್ಲಿದೆ ಅದ್ಭುತ ಟಿಪ್ಸ್

ಅತಿಯಾದ ದೇಹದ ತೂಕ ಹೊಂದುವುದು ಅನೇಕ ಖಾಯಿಲೆಗಳಿಗೆ ಆಹ್ವಾನ ನೀಡಿದಂತೆ. ಮಿತಿಯಾದ ದೇಹ ತೂಕ ಹೊಂದುವುದರಿಂದ ಆಯಸ್ಸು ಹೆಚ್ಚಾಗುತ್ತದೆ. ಈಗಿನ ಆಹಾರ ಕ್ರಮ, ಜೀವನ ಶೈಲಿ, ಅತಿಯಾದ ಒತ್ತಡ ದೇಹದ ತೂಕ ಹೆಚ್ಚಲು ಕಾರಣವಾಗಿದೆ. ಕೆಲವರು ಅತಿಯಾಗಿ ತಿಂದರೆ, ಇನ್ನು ಕೆಲವರು ಸಮಯಕ್ಕೆ ಸರಿಯಾಗಿ ತಿನ್ನದೇ ಇರುವುದರಿಂದಲೂ ತೂಕ ಹೆಚ್ಚಾಗುತ್ತದೆ. ಆಹಾರ ಸೇವಿಸದೇ ಇರುವುದರಿಂದ ತೂಕ ಕಡಿಮೆಯಾಗುತ್ತದೆ ಎಂಬುದು ತಪ್ಪು ಅಭಿಪ್ರಾಯ. ಸಮಯಕ್ಕೆ ಸರಿಯಾಗಿ ಆರೋಗ್ಯಯುತ ಆಹಾರವನ್ನು ಸೇವಿಸುವುದು ತುಂಬಾ ಒಳ್ಳೆಯದು ಎನ್ನುತ್ತಾರೆ ಸಿಂಥಿಯಾ ಮೆಲ್ವಿನ್ ಅವರ “ನಮ್ಮ […]