ಕಾಪು ಬಿಜೆಪಿ ಯುವಮೋರ್ಚಾದಿಂದ ವೃಕ್ಷಾರೋಪಣ ಕಾರ್ಯಕ್ರಮ

ಕಾಪು: ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ವೃಕ್ಷಾರೋಪಣ ಕಾರ್ಯಕ್ರಮವನ್ನು ಇನ್ನಂಜೆ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಇಂದು ಆಯೋಜಿಸಲಾಯಿತು. ರಾಜ್ಯ ಯುವಮೋರ್ಚಾದ ಕಾರ್ಯದರ್ಶಿ ಶ್ವೇತಾ ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು. ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಯುವಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ […]

ಲಾಕ್‌ಡೌನ್‌ ನಿರ್ಬಂಧ ಇನ್ನಷ್ಟು ಸಡಿಲ; ಮಾಲ್‌, ದೇವಸ್ಥಾನಗಳಿಗೆ ಅನುಮತಿ?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಗಣನೀಯವಾಗಿ ಇಳಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್‌ ಲಾಕ್‌ಡೌನ್‌ ನಿಯಮಗಳನ್ನು ಇನ್ನಷ್ಟು ಸಡಿಲಿಕೆ ಮಾಡಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮಾಲ್‌, ದೇವಸ್ಥಾನಗಳನ್ನು ತೆರೆಯುವುದಕ್ಕೆ ಅವಕಾಶ ನೀಡುವ ಸಾಧ್ಯತೆ ಇದ್ದು, ಸಿನಿಮಾ ಮಂದಿರ ತೆರೆಯಲು ಅವಕಾಶ ನೀಡುವ ಸಾಧ್ಯತೆ ಇಲ್ಲ ಎಂದು ಎನ್ನಲಾಗಿದೆ. ಶಾಲಾ–ಕಾಲೇಜು ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ಸಂಬಂಧ […]

ಅನುದಾನ ರಹಿತ ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ಪರಿಹಾರ ಧನ ಬಿಡುಗಡೆ

ಬೆಂಗಳೂರು: ಕೋವಿಡ್ 19 ಎರಡನೆ ಅಲೆಯ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕರೇತರ ಸಿಬ್ಬಂದಿಗಳಿಗೆ ತಲಾ ಐದು ಸಾವಿರ ಪರಿಹಾರ ಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯದ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ 1,72,945 ಮಂದಿ ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿ ಸೇರಿ ಒಟ್ಟು 2,06,945  ಸಿಬ್ಬಂದಿಗೆ  ತಲಾ ಐದು ಸಾವಿರ ರೂಪಾಯಿಯಂತೆ ಒಟ್ಟು ₹ 10347.25 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ.

ಉತ್ತರಾಖಂಡದ ಸಿಎಂ ತೀರಥ್ ಸಿಂಗ್ ರಾವತ್ ರಾಜೀನಾಮೆ

ಡೆಹ್ರಾಡೂನ್‌: ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ನಾಲ್ಕು ತಿಂಗಳ‌ಲ್ಲೇ ತೀರಥ್ ಸಿಂಗ್ ರಾವತ್ ಅವರು ಶುಕ್ರವಾರ ರಾತ್ರಿ 11 ಗಂಟೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಉತ್ತರಾಖಂಡದ ನಾಯಕತ್ವ ಬದಲಾವಣೆಗೆ ಸಂಬಂಧಿಸಿ ಚಟುವಟಿಕೆಗಳು ಗರಿಗೆದರಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತೀರಥ್‌ ಸಿಂಗ್‌ ಅವರು ಶುಕ್ರವಾರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದರು. ಪಕ್ಷವು ರಾವತ್‌ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ ಬೆನ್ನಲ್ಲೆ, ಅವರು ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರನ್ನು […]

ನಟ, ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ಪುತ್ರ ರಸ್ತೆ ಅಪಘಾತದಲ್ಲಿ ಮೃತ್ಯು

ಬೆಂಗಳೂರು: ಕನ್ನಡದ ನಟ ಹಾಗೂ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ಅವರ ಪುತ್ರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸೂರ್ಯೋದಯ ಪುತ್ರ ಮಯೂರ್ (20) ಬೆಂಗಳೂರಿನ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕಿನಲ್ಲಿ ತೆರಳಿತ್ತಿರುವಾಗ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ಸೂರ್ಯೋದಯ ಅವರು ಮೂಲತಃ ಉಡುಪಿ ಜಿಲ್ಲೆಯ ಪೆರಂಪಳ್ಳಿ ಅವರಾಗಿದ್ದು. ದೇಯಿ ಬೈದೆತಿ ಎಂಬ ಐತಿಹಾಸಿಕ‌ ತುಳು ಚಿತ್ರವನ್ನು […]